Showing 20 of 4108 posts • Page 18 of 206
ಬಡತನ ನಿರ್ಮೂಲನೆ, ಸಮಾಜದಲ್ಲಿ ಸಮಾನತೆಗೆ ಶಿಕ್ಷಣ ಪ್ರಮುಖ ಅಸ್ತ್ರ. ಶಿಕ್ಷಣಕ್ಕೆ ಆದ್ಯತೆ ನೀಡುವ ಕೃಷ್ಣ ಜೆ. ಪಾಲೆಮಾರ್ ಅವರ ಗುಣ ಶ್ಲಾಘನೀಯ ಎಂದು ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಕುರಿತು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಸರಕಾರಿ ಆಸ್ಪತ್ರೆಗಳ ಖಾಸಗೀಕರಣದ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಆರೋಗ್ಯ ಹಕ್ಕನ್ನು ಕಸಿದುಕೊಳ್ಳುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ, SDPI ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ:457, 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ
ಪೂರ್ವ ಆಫ್ರಿಕಾದ ಇಥಿಯೋಪಿಯಾದ ಪ್ರಮುಖ ಖಾಸಗಿ ಬ್ಯಾಂಕ್ ಆಗಿರುವ ಡ್ಯಾಶೆನ್ ಬ್ಯಾಂಕ್ ಎಸ್.ಸಿ.ಯ ಆಡಳಿತ ಮಂಡಳಿಯ ಸದಸ್ಯರು 22 ಮೇ 2026 ರಂದು ಎಂ.ಸಿ.ಸಿ. ಬ್ಯಾಂಕಿನ ಪ್ರಧಾನ ಕಚೇರಿಗೆ ಅಧಿಕೃತ ಸಂಸ್ಥಾತ್ಮಕ ಸಂವಹನ ಮತ್ತು ಜ್ಞಾನ ವಿನಿಮಯ ಕಾರ್ಯಕ್ರಮದ ಅಂಗವಾಗಿ ಭೇಟಿ ನೀಡಿದರು. ಈ ಭೇಟಿಯನ್ನು ವೃತ್ತಿಪರ ಸಂಬಂಧಗಳನ್ನು ಬೆಳೆಸುವುದು, ಭಾರತದ ಸಹಕಾರ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳುವುದು, ಬ್ಯಾಂಕಿಂಗ್ ಪರಿಣತಿಯನ್ನು ವಿನಿಮಯ ಮಾಡಿಕೊಳ್ಳುವುದು ಹಾಗೂ ಡಿಜಿಟಲ್ ಬ್ಯಾಂಕಿಂಗ್, ಕಾರ್ಯಾಚರಣಾ ದಕ್ಷತೆ ಮತ್ತು ತಾಂತ್ರಿಕ ಆಧುನೀಕರಣದ ಬೆಳವಣಿಗೆಗಳನ್ನು ಅನ್ವೇಷಿಸುವ […]
ರಾ. ಹೆ.66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಹಾನಗರದ ಜೆಪ್ಪು ಕಡೆಕಾರು, ಜೆಪ್ಪಿನಮೊಗರು ನೇತ್ರಾವತಿ ನದಿ ತೀರದ ಪ್ರದೇಶದಲ್ಲಿನ ನೇತ್ರಾವತಿ ಸಭಾಂಗಣದಲ್ಲಿ ನಾಲ್ಕು ಅತ್ಯಾಧುನಿಕ ಸಭಾಭವನಗಳ ಲೋಕಾರ್ಪಣೆಗೆ ಚಾಲನೆ ನೀಡುವ ಸಮಾರಂಭ ಜರುಗಿತು.
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯೋಗದಲ್ಲಿದ್ದ ಬೆಳ್ಳಾರೆ ನಿವಾಸಿ ಸೂರಜ್ ರೈ (27 ವ) ಅವರು ವಾಹನ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗವಾಗಿದೆ ಎಂದು ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಗಂಭೀರ ಆರೋಪ ಮಾಡಿದರು.
ಬಿಜೆಪಿ ಪ್ರಕಾರ ದೇಶದ ಹಿಂದೂಗಳು ಭಯಭೀತರಾಗಿದ್ದಾರೆ. ಅರಾಜಕತೆಯಲ್ಲಿದ್ದಾರೆ. ಬಿಜೆಪಿಯವರು ಭಯ ಸೃಷ್ಟಿಸುತ್ತಿದ್ದಾರೆ.
ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗ್ಲಗುಡ್ಡೆ ಅರಣ್ಯ ಪ್ರದೇಶಕ್ಕೆ ಬೆಂಗಳೂರಿನ ಎಫ್ ಎಸ್ ಎಲ್ ತಜ್ಞರು ಬಂದಿದ್ದಾರೆ.
ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ ಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಜೆ ಪಾಲೆಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗುರುವಾರ (ಮೇ 21) ನಡೆದಿದೆ.
ವ್ಯಕ್ತಿಯೊಬ್ಬರು ಕಣಜದ ಹುಳುಗಳು ಕಚ್ಚಿ ಸಾವನ್ನಪ್ಪಿದ ಘಟನೆ ಅರಂತೋಡು ಸಮೀಪದ ಪೆರಾಜೆ ಗ್ರಾಮದ ಹೊದ್ದೆಟ್ಟಿ ಎಂಬಲ್ಲಿ ನಡೆದಿದೆ.
ಮಳೆಗಾಲಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು, ಪ್ರತೀ ವಾರ್ಡ್ ಗಳಿಗೆ ಗ್ಯಾಂಗ್ ಮೆನ್ ನೇಮಿಸುವುದು, ಸೇರಿದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಅನೇಕ ಬಾರಿ ಸೂಚಿಸಿದ ಹೊರತಾಗಿಯೂ ಪಾಲಿಕೆಯ ಆಡಳಿತ ಆ ಬಗ್ಗೆ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸದಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ಕರಾವಳಿ ಭಾಗದ ಜನರಿಗೆ ಶೀಘ್ರಗತಿಯಲ್ಲಿ ನ್ಯಾಯದಾನ ಒದಗಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂಬ ಮಂಗಳೂರು ವಕೀಲರ ಸಂಘದ ಹಲವು ವರ್ಷಗಳ ಬೇಡಿಕೆಯು ಎಲ್ಲಾ ರೀತಿಯಿಂದಲೂ ನ್ಯಾಯಯುತವಾಗಿದೆ. ಅಂತೆಯೇ ಇಡೀ ಮಂಗಳೂರಿನ ಜನತೆಯ ಪರವಾಗಿ ನನ್ನ ಆಗ್ರಹವೂ ಅದೇ ಆಗಿದ್ದು, ಅದರಲ್ಲಿ ಯಾವುದೇ ರಾಜಿಯಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ಜಲಪಾತ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.
ದೇಶದ ಹಾಸ್ಪಾಟ್ ಪ್ರಗತಿಪರ ರಾಜ್ಯವಾಗಿದ್ದ ಕರ್ನಾಟಕವನ್ನು ಅಸಾಧಾರಣ ಪ್ರಯತ್ನದಿಂದ ಋಣಭಾರವಾಗಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಮೂರು ವರ್ಷಗಳ ಸಾಧನೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ ಸಹಿತ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇರುವುದರಿಂದ ಮೇ 20 ರಿಂದ ಮೇ 25 ರವರೆಗೆ ಕರ್ನಾಟಕ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮತ್ತು ಕೇಂದ್ರ ಗೃಹ ಸಚಿವಾಲಯದ ತುರ್ತು ಪ್ರತಿಕ್ರಿಯೆ ನಿಯಂತ್ರಣ ಕೊಠಡಿ (ಐಸಿಆರ್-ಇಆರ್) ಎಚ್ಚರಿಕೆ ನೀಡಿದೆ.