Showing 20 of 4108 posts • Page 20 of 206
ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ವೈಫಲ್ಯವೇ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ ಐವನ್ ಡಿ’ಸೋಜ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಈ ಕಾರ್ಯಾಚರಣೆ ನಡೆದಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್ ಡಿಸೇಲ್ ದರ ಏರಿಕೆ ವಿಚಾರವಾಗಿ ಮಂಗಳೂರಿನಲ್ಲಿ ದ.ಕ.ಜಿಲ್ಲಾ NSUI ಹಾಗೂ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಯಿತು.
ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಸಾಗಾಟ ಮಾಡುತಿದ್ದ ಅಕ್ರಮ ಜಾನುವಾರುವನ್ನು ಭಜರಂಗದಳ ಮಾಹಿತಿಯ ಮೇರೆಗೆ ಮಂಗಳೂರು ಜೆಪ್ಪಿನ ಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ನಿಯಮಿತದ ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಮೇ 17 ಮತ್ತು 18 ರಂದು ಎರಡು ದಿನಗಳ ಕಾಲ ರಾಜ್ಯ ಮಟ್ಟದ ‘ಗೇರು ಮೇಳ’ ಜರುಗಲಿದೆ ಎಂದು ಗೇರು ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್. ಗಟ್ಟಿ ಅವರು ತಮ್ಮ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕೆಲವು ದಿನಗಳಲ್ಲಿಎಸ್ಐಟಿ ತಂಡಕ್ಕೆ ಕುಳಿತುಕೊಳ್ಳಲು ಶಾಮಿಯಾನ ವ್ಯವಸ್ಥೆ ಮಾಡಲಾಗಿತ್ತು. ಇದರ ಬಿಲ್ ಕೂಡ ಬಾಕಿ ಇದೆ.
ತಾಂತ್ರಿಕ ದೋಷದಿಂದ ಫಿಶ್ ಮಿಲ್ ಲಾರಿಯಿಂದ ತೈಲ ಸೋರಿಕೆಯಾಗಿರುವ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಸುತ್ತಮುತ್ತಲಿನ ಭಾಗಗಳಲ್ಲಿ ನಿನ್ನೆ ಸಂಜೆ ಗುಡುಗು ಸಹಿತ ಸುರಿದ ಭಾರೀ ಮಳೆಗೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್ ವ್ಯತ್ಯಯಗೊಂಡಿದೆ.
ಪೆಟ್ರೋಲ್ ಮಿತ ಬಳಕೆ , ಚಿನ್ನ ಖರೀದಿ ಮಾಡ್ಬೇಡಿ ಪ್ರಧಾನಿ ಹೇಳಿಕೆ ವಿಚಾರವಾಗಿ NSUI ಮುಖಂಡ ಸುಹಾನ್ ಆಳ್ವಾ ಖಂಡನೆ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ 7 ಸಲಹೆಗಳನ್ನು ದೇಶದ ಜನತೆಗೆ ನೀಡಿದ್ದಾರೆ.
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ದರ್ಶನ ಸಮಯದಲ್ಲಿ ಅಲ್ಪ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಹೆಚ್ಚಿನ ಸಮಯದ ದರ್ಶನ ಸೌಲಭ್ಯ ಕಲ್ಪಿಸಲಾಗಿದೆ.
ಸಂಕಷ್ಟದ ಸಮಯದಲ್ಲಿ ದೇಶದ ಜನರು ತ್ಯಾಗ ಮಾಡಬೇಕು ಎಂದು ಹೇಳುವ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ ನೋವು ಅರ್ಥವಾಗುತ್ತಿಲ್ಲ. ಜನರು ತ್ಯಾಗ ಮಾಡುವುದಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ದೇಶದ ಜನರಿಗೆ ಸುಖ ಸಿಗುತ್ತದೆ ಎಂದು ಅವರು ಹೇಳಿದರು.
ನೀಟ್ ಪರೀಕ್ಷೆಯಲ್ಲಿ ನಿರಂತರವಾಗಿ ಅಕ್ರಮಗಳು ಬೆಳಕಿಗೆ ಬರುತ್ತಿರುವುದು ಯುವಜನರ ಭವಿಷ್ಯಕ್ಕೆ ಮಾರಕವಾಗಿದೆ. ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಆಗ್ರಹಿಸಿದರು.
ಮೇ 3 ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ NSUI ಅಧ್ಯಕ್ಷ ಸುಹಾನ್ ಆಳ್ವ ತೀವ್ರವಾಗಿ ಖಂಡಿಸಿದ್ದಾರೆ.
ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣದ ವಿಚಾರದಲ್ಲಿ ಭದ್ರತಾ ಸಿಬ್ಬಂದಿಯನ್ನ ತಳ್ಳಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಫೇರಾವ್ ಹಾಕಿ ತರಾಟೆಗೈದ ಮದನಿ ನಗರದ ಜುನೈದ್ ಮತ್ತು ಆತನ ಹತ್ತು ಜನ ಸಹಚರರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ನಗರದಲ್ಲಿ ಹೈಡ್ರೊವಿಡ್ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ಬಿಸಿಎ ವಿದ್ಯಾರ್ಥಿನಿಯನ್ನು ಅರೆಸ್ಟ್ ಮಾಡಲಾಗಿದೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ ಸುಹಾನ(21) ಬಂಧಿತೆ ಆರೋಪಿ.
ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು “ಸಮಾಧಾನ ಸಮಾರೋಹ್-2026” ಹೆಸರಿನಲ್ಲಿ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದ್ದಾರೆ.
ತಡರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಪಂಪ್ ವೆಲ್ , ಕಂಕನಾಡಿ, ಕೊಡಿಯಾಲ್ ಬೈಲ್ ಸೇರಿದಂತೆ ಎಲ್ಲೆಡೆ ನೀರು ಉಕ್ಕಿ ಹರಿದಿದೆ.
ಮುಂಬೈ ಮೂಲದ ಖ್ಯಾತ ಲೇಖಕ ಮತ್ತು ಜ್ಞಾನ ತರಬೇತುದಾರ ಡಾ. ರಾಧಾಕೃಷ್ಣನ್ ಪಿಳ್ಳೈ (50) ಸೋಮವಾರ ರಾತ್ರಿ ಮಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.