Showing 20 of 4108 posts • Page 22 of 206
ಕಾನ -MRPL ಚತುಷ್ಪಥ ರಸ್ತೆ ಅಪೂರ್ಣ ಕಾಮಗಾರಿಯಿಂದಾಗಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಇಂದು ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ಇಂದು ರಸ್ತೆ ತಡೆ ಪ್ರತಿಭಟನೆ ನಡೆಯಿತು.
ಸ್ತನ ಕ್ಯಾನ್ಸರ್ ಕಾಯಿಲೆಯ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವ ಮತ್ತು ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ವಿಶೇಷ ಸ್ತನ ಆರೋಗ್ಯ ತಪಾಸಣೆ ಉಪಕ್ರಮವನ್ನು ಮಂಗಳೂರು, ಡಾ ಬಿ ಆರ್ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆ ಘೋಷಿಸಿದೆ.
ಕ್ರೇನ್ ವಾಹನವೊಂದು ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯ ಬೆಳಾಲು ಪೇಟೆಯಲ್ಲಿ ಮಂಗಳವಾರ ನಡೆದಿದೆ.
ನರಿಂಗಾನ ಗ್ರಾಮದ 19 ವರ್ಷದ ಯುವತಿಯೊಬ್ಬಳು ತನ್ನ ಮನೆಯಿಂದ ಮೇ 4 ರ ಸೋಮವಾರ ಬೆಳಗಿನ ಜಾವದಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ.
ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಬಂಧಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ.
ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆಯ ಜೊತೆಗೆ, ಇದೀಗ ಅನಿಲ ಪೂರೈಕೆಯ ಕೊರತೆಯು ಹೋಟೆಲ್ ಉದ್ಯಮವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.
ಬಜಪೆ ಬಸ್ಸು ನಿಲ್ದಾಣದಲ್ಲಿ ಬಸ್ಸಿನ ಟೈಮಿಂಗ್ಸ್ ವಿಚಾರವಾಗಿ ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕರ ನಡುವೆ ಪರಸ್ಪರ ಹೊಡೆದಾಟ ಸಂಭವಿಸಿರುವ ಘಟನೆ ವರದಿಯಾಗಿದೆ.
ಅಕ್ರಮವಾಗಿ ನಕಲಿ ನೋಟಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಕುಳಾಯಿ ಹೊಸಬೆಟ್ಟುವಿನ ಕೋರ್ದಬ್ಬು ಬಳಿಯ ಮಹಿಳೆಯೊಬ್ಬರನ್ನು ಕೊಲೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣದಲ್ಲಿ 6 ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಓರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
: ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು: ಪಂಚರಾಜ್ಯ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವುದು ಹಾಗೂ ಪುದುಚೇರಿಯಲ್ಲಿ ಎನ್ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿರುವುದು ಹಾಗೂ ಕೇರಳದಲ್ಲಿ ಉತ್ತಮ ಸಾಧನೆ ಮಾಡಿರುವುದು ಪ್ರಧಾನಮಂತ್ರಿ ಮೋದಿ ಅವರ ಸರ್ಕಾರದ ಮೇಲಿರುವ ಜನರ ವಿಶ್ವಾಸಕ್ಕೆ ಹಾಗೂ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಮತ್ತಷ್ಟು ಶಕ್ತಿಯನ್ನು ತುಂಬಿದೆ ಎಂದು ಹೇಳಿದ್ದಾರೆ. ಇನ್ನೊಂದೆಡೆ, ಪಶ್ಚಿಮ ಬಂಗಾಲದಲ್ಲಿ ಬಿಜೆಪಿಯ ಗೆಲುವು ಇಡೀ ದೇಶದಲ್ಲಿರುವ ಬಿಜೆಪಿ ಕಾರ್ಯಕರ್ತರಿಗೆ ಸಂದ ಗೆಲುವು. ಏಕೆಂದರೆ, ಪಶ್ಚಿಮ ಬಂಗಾಲದಲ್ಲಿ ತೃಣಮೂಲ […]
ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಕ್ಷ (ಬಿಜೆಪಿ) ಆರ್ಥಿಕ ಪ್ರಕೋಷ್ಟದ ಸಂಚಾಲಕರಾಗಿ ಚಾರ್ಟರ್ಡ್ ಅಕೌಂಟೆಂಟ್ ಸಿ.ಎ. ಎಸ್.ಎಸ್. ನಾಯಕ್ ಅವರನ್ನು ನೇಮಕ ಮಾಡಲಾಗಿದೆ.
ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಿಸುತ್ತಿದ್ದ ಸಹೋದರರಿಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳದ ಮಂಚಿ ಗ್ರಾಮದ ಪಂಜಾಲಕ್ರಾಸ್ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ದ.ಕ., ಉಡುಪಿ, ಉ.ಕ., ಚಿಕ್ಕಮಗಳೂರು, ಕೊಡಗು ಜಿಲ್ಲೆಗಳನ್ನು ಒಳಗೊಂಡು ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಹಾಗೂ ಖಾಯಂ ಪೀಠ ಸ್ಥಾಪಿಸಬೇಕೆಂಬ ಹಲವು ವರ್ಷಗಳ ಬೇಡಿಕೆಯು ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಿಗೆ ಮನವರಿಕೆಯಾಗಿದ್ದು, ಅವರು ಸ್ಥಳ ಪರಿಶೀಲನೆಗೆ ಒಪ್ಪಿಕೊಂಡಿದ್ದಾರೆ. ಶೀಘ್ರವೇ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.
ಈಗಾಗಲೇ ಸರ್ಕಾರದ ಒಳ ಮೀಸಲಾತಿಯ ಬಗ್ಗೆ ರಾಜ್ಯದಲ್ಲಿ ಸುಮಾರು 101 ಜಾತಿಯ ಪರ ಮೀಸಲಾತಿಯಲ್ಲಿ ಸರ್ಕಾರ ದೊಡ್ಡ ಧೋರಣೆಯನ್ನು ಮಾಡಿದೆ.
ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮೇ 1 ವಿಶ್ವ ಕಾರ್ಮಿಕರ ದಿನದ ಪ್ರಯುಕ್ತ ಮಂಗಳೂರಿನ ಪೌರ ಕಾರ್ಮಿಕರಿಗೆ ಕಾಯಕ ಗೌರವ ಕಾರ್ಯಕ್ರಮ ಪಂಪ್ವೆಲ್ ನಡೆಯಿತು.
ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪರವರ ಸಮಾಜ ಸೇವೆಯ 50 ವರ್ಷ ಆಚರಣೆಯನ್ನು ಪಕ್ಷವು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ‘ಬಿ.ಎಸ್.ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಪುತ್ತೂರಿನಲ್ಲಿ ಕೃಷ್ಣ ರಾವ್ ಎಂಬಾತ ಪ್ರೇಮ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷವು ಕೃಷ್ಣ ರಾವ್ ತಂದೆ ಜಗನ್ನಿವಾಸ ರಾವ್ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪುನರುಚ್ಚರಿಸಿದ್ದಾರೆ.
ನಮ್ಮದು ಹಿಂದುತ್ವದ ಪಕ್ಷ ಕರ್ನಾಟಕ, ಕರಾವಳಿ, ಕೇರಳ ಅಂತೇನಿಲ್ಲ: ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್