Showing 20 of 4103 posts • Page 23 of 206
ಶ್ರಮಜೀವಿ ಕಾರ್ಮಿಕರ ಪರಿಶ್ರಮದಿಂದ ಜಗತ್ತು ಬೆಳೆದು ನಿಂತಿದೆ ಕಾರ್ಮಿಕರಿಲ್ಲದೆ ಸಮಾಜದ ಚಕ್ರ ತಿರುಗದು ಎಂದು ಬಂದರು ಶ್ರಮಿಕರ ಸಂಘದ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಹೇಳಿದರು.
ನಗರದಲ್ಲಿ ನೇತ್ರಾವತಿ ನದಿ ನೀರಿನ ಒಳಹರಿವು ಈಗಾಗಲೇ ನಿಂತಿದ್ದು, ಬಿರು ಬಿಸಿಲಿನಿಂದಾಗಿ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ.
ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಬುಧವಾರ ಸಂಭವಿಸಿದೆ. ಬೈಕ್ನ ಹಿಂಬದಿ ಸವಾರರಾಗಿದ್ದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಮಹಿಳಾ ವಾಲಿಬಾಲ್ ತಂಡವು 2026 ಏಪ್ರಿಲ್ 27 ಮತ್ತು 28 ರಂದು ಆದ್ಯಾರ್ನ ಎಸ್ಸಿಇಎಂನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ವಾಲಿಬಾಲ್ ಟೂರ್ನಮೆಂಟ್ನಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಮೆಸ್ಕಾಂನ ಸರ್ವರ್ ಹಾಗೂ N-SOIT ನ ತೀವ್ರ ಸಮಸ್ಯೆಯಿಂದಾಗಿ ಹೊಸದಾಗಿ ನಿರ್ಮಾಣಗೊಂಡ ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವ ಗ್ರಾಹಕರು, ಜನಸಾಮಾನ್ಯರು ಹಾಗೂ ವಿದ್ಯುತ್ ಗುತ್ತಿಗೆದಾರರು ತೀವ್ರ ಸಂಕಷ್ಟದಲ್ಲಿದ್ದು, ಸ
“ದುಡಿದು ತಿನ್ನುತ್ತಿದ್ದ ನನ್ನಂತಹ ವ್ಯಕ್ತಿಯನ್ನು ಈ ಸ್ಥಿತಿಗೆ ತಂದಿರುವ ಶಾರೀಕ್ಗೆ 10′ ವರ್ಷ ಜೈಲು ಶಿಕ್ಷೆ ಅಲ್ಲ, ಜೀವಾವಧಿ ಶಿಕ್ಷೆ ಆಗಬೇಕಿತ್ತು.
ಖಾಸಗಿ ಕಾಲೇಜಿನ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ಮಾಹಿತಿ ತಿಳಿದು ಬಂದಿದೆ.
ಕೆಲ ದಿನಗಳ ಹಿಂದೆ ಮಂಗಳೂರು ಹೊರವಲಯದ ಮೂಡಬಿದ್ರೆ ತೋಡಾರು ಪರಿಸರದ ಮಹಿಳೆ ಫಾಲ್ಗುಣಿ ಬಸ್ ನಲ್ಲಿ ಮಂಗಳೂರಿನಿಂದ ತೋಡಾರು ಗೆ ಪ್ರಯಾಣಿಸುತ್ತಿರುವಾಗ 20ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕಳೆದು ಹೋಗಿತ್ತು.
ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಇನ್ಸ್ಟಿಟ್ಯೂಟ್ಆಫ್ ಕಮ್ಯುನಿಕೇಷನ್ (NICO) ಆಯೋಜಿಸಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ‘ಮಾಧ್ಯಮ ಸಮಾವೇಶ 2026’ವನ್ನು ಪನೀರ್ ಕ್ಯಾಂಪಸ್ನಲ್ಲಿ ಯಶಸ್ವಿಯಾಗಿ ಉದ್ಘಾಟನೆಗೊಂಡಿತು.
ಸರಕಾರಿ ಆಸ್ಪತ್ರೆಗಳನ್ನು ಖಾಸಗೀ ಆಸ್ಪತ್ರೆಗಳೊಂದಿಗೆ ಮಾಡಿದ ಕರಾರು ಒಪ್ಪಂದ ರದ್ದುಗೊಳಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು , ಕಿದ್ವಾಯಿ ಸ್ಮಾರಕ ಕ್ಯಾನ್ಸರ್, ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆಗಾಗಿ, ಸರಕಾರಿ ವೆನ್ಲಾಕ್ ಆಸ್ಪತ್ರೆ ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕೆಂದು ಸಹಿತ ಸರಕಾರಿ ಆಸ್ಪತ್ರೆಗಳ ಬಲಪಡಿಸಿ ಖಾಸಗೀ ಆಸ್ಪತ್ರೆಗಳ ನಿಯಂತ್ರಿಸಲು ಒತ್ತಾಯಿಸಿ ಇಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿವರೆಗೆ ಆಯೋಜಿಸಿದ ಉಸ್ತುವಾರಿ ಕಚೇರಿ ಚಲೋ ಪಾದಯಾತ್ರೆಯು ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆ ಮುಂಭಾಗದಿಂದ ಪ್ರಾರಂಭಗೊಂಡಿತು.
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಮಂಜುನಾಥ ಫಕೀರಪ್ಪ ವಾಲಿಕಾರ ಬಂಧಿತ ಆರೋಪಿ.
ಕೆ.ಎಸ್ .ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಇರಿಸಿದ್ದ ಪರ್ಸ್ ಕಳವಾಗಿದ ಘಟನೆ ನಡೆದಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಕೆಲ ವಾರದಿಂದ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಮಂಗಳೂರು ನಗರಕ್ಕೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಗಣನೀಯ ಕುಸಿತ ಕಾಣುತ್ತಿದೆ.
ಬಹುಬೇಡಿಕೆಯ ಬೆಂಗಳೂರು- ಮಂಗಳೂರು – ಮಡಗಾಂವ್ ವಂದೇ ಭಾರತ್ ರೈಲು ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ ಇದೆ.
ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೊಬ್ಬಳಿಗೆ ಹೆರಿಗೆಯಾದ ಘಟನೆ ಬಿಸಿರೋಡಿನಲ್ಲಿ ಭಾನುವಾರ ರಾತ್ರಿ ವೇಳೆ ನಡೆದಿದೆ.
ಚಾರ್ಮಾಡಿ ಘಾಟ್ನ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ದ.ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.