Showing 20 of 4108 posts • Page 25 of 206
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ.
ಕರಾವಳಿ ಪ್ರದೇಶದಲ್ಲಿ ಮಾನ್ಯ ಕರ್ನಾಟಕ ಹೈಕೋರ್ಟ್ನ ಸಕ್ಯೂರ್ಟ್ ಪೀಠ ಸ್ಥಾಪನೆಗೆ ಬಹುಕಾಲದಿಂದ ಬೇಡಿಕೆ ಇದೆ. ಇತ್ತೀಚಿಗೆ, ಶಾಶ್ವತ ಹೈಕೊರ್ಟ್ ಪೀಠ ಹೋರಾಟ ಸಮಿತಿ ರಚಿಸಲಾಗಿ ಶ್ರೀ ಐವನ್ ಡಿಸೋಜ, ವಿಧಾನಪರಿಷತ್ ಸದಸ್ಯರ ಸಂಚಾಲಕತ್ವದಲ್ಲಿ ಹಲವು ಸಭೆಗಳು ನಡೆದಿದ್ದು, ವಿವಿಧ ಸಂಘಸಂಸ್ಥೆಗಳ, ಮುಖ್ಯಸ್ಥರನ್ನು ಹಾಗೂ ಸಮಾಜದ ವಿವಿಧ ವರ್ಗದ ಜನರ ಸಂಪರ್ಕ ಸಭೆಗಳನ್ನು ನಡೆಸಿ, ಹೈಕೋರ್ಟ್ ಶಾಶ್ವತ ಪೀಠ ಸ್ಥಾಪನೆಗಾಗಿ ವಿವಿಧ ಪ್ರಾಧಿಕಾರಗಳಿಗೆ ಮನವಿಗಳನ್ನು ಸಲ್ಲಿಸಲಾಗಿತ್ತು.
ಶಿವಮೊಗ್ಗದಲ್ಲಿ ಐಸಿಸ್ ಭಯೋತ್ಪಾದಕರ ಜೊತೆ ಸೇರಿಕೊಂಡು ವಿದ್ವಂಸಕ ಕೃತ್ಯಕ್ಕೆ ಸಂಚು ನಡೆಸಿದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧಿತನಾಗಿದ್ದ ಅರಾಫತ್ ಅಲಿಗೆ ಎನ್ಐಎ ವಿಶೇಷ ನ್ಯಾಯಾಲಯ ಆರು ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿಯವರ ವಿರುದ್ಧ ಎಸ್ಪಿ ಎಸ್.ಎಸ್.ಕಾಶಿಯವರು ನೀಡಿರುವ ದೂರಿನ ಬಗೆಗಿನ ಮಾಧ್ಯಮದವರ ಪ್ರಶ್ನೆಗೆ ಡಿಜಿಪಿ ಸಲೀಂ ಉತ್ತರಿಸದೆ ಹೊರಟು ಹೋದರು.
ಕೇಂದ್ರ ಸರ್ಕಾರಕ್ಕೆ ಮಹಿಳೆಯರ ಮೇಲೆ ಕಾಳಜಿ ಇರುತ್ತಿದ್ದರೆ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿದಂತೆ ಶೇ.50 ಮೀಸಲಾತಿ ತರಬೇಕಿತ್ತು ಎಂದು ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ದಾರೆ.
ನಗರದ ನಂತೂರು ಜಂಕ್ಷನ್ನಲ್ಲಿ ಎ.18ರಂದು ಸಂಚಾರ ನಿಯಂತ್ರಣ ಮಾಡುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಅವಾಚ್ಯ ಪದ ಬಳಸಿ ಬೈದು, ಹಲ್ಲೆ ನಡೆಸಿ, ಮೊಬೈಲ್ ಕಿತ್ತು ನೆಲಕ್ಕೆ ಎಸೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ನಗರದ ಸಂಚಾರ ಪೂರ್ವ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಾಲಿಗೆರೆ ಹಾಲೇಶ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ಜಿಲ್ಲೆಯಾದ್ಯಂತ ಏಪ್ರಿಲ್ 21 ರಿಂದ 23ರವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಕರ್ನಾಟಕದ ಆರೋಗ್ಯ ಸೇವೆಯಲ್ಲಿ ಮಹತ್ವದ ಮೈಲುಗಲ್ಲಾಗಿ, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ (YMCH), ಪ್ರದೇಶದ ಮೊದಲ ರೋಬೋಟಿಕ್ ಸಹಾಯಿತ ಸಣ್ಣ ರಂಧ್ರದ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು (ROBOTIC ASSISTED MICS CABG) ಯಶಸ್ವಿಯಾಗಿ ನೆರವೇರಿಸಿದೆ. ಈ ಮುಂಚೂಣಿ ಕ್ರಮವು ಆಧುನಿಕ ಹೃದಯ ಚಿಕಿತ್ಸೆಯನ್ನು ಪ್ರದೇಶದ ರೋಗಿಗಳಿಗೆ ಇನ್ನಷ್ಟು ಸಮೀಪಕ್ಕೆ ತರುವ ಮಹತ್ವದ ಹೆಜ್ಜೆಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ನಾರಿಶಕ್ತಿ ವಂದನ್ ಅಧಿನಿಯಮ’ವು ಕೇವಲ ರಾಜಕೀಯ ಮೀಸಲಾತಿಯಲ್ಲ, ದೇಶದ ಮಾತೃಶಕ್ತಿಗೆ ಸಲ್ಲಿಸಿದ ಗೌರವವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಮಹಿಳಾ ಮೀಸಲಾತಿ ಮಸೂದೆ ಸಿಂಗಲ್ ಆಗಿ ಜಾರಿಗೆ ತನ್ನಿ, ನಿಮಗೇನ್ರಿ ತೊಂದ್ರೆ? ಬಿಜೆಪಿಗೆ ನಿಜವಾಗಿಯೂ ಮಹಿಳೆಯರ ಮೇಲೆ ಕಾಳಜಿ ಇದ್ದರೆ, ಕ್ಷೇತ್ರ ವಿಂಗಡಣೆಯ ನೆಪ ಬಿಟ್ಟು ತಕ್ಷಣವೇ ‘ಸಿಂಗಲ್ ಬಿಲ್ ಮೂಲಕ ಮೀಸಲಾತಿಯನ್ನು ಜಾರಿಗೆ ತರಲಿ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಸವಾಲು ಹಾಕಿದ್ದಾರೆ.
ಶಾಸಕ ವಿನಯ ಕುಲಕರ್ಣಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರೂ, ಅಧಿಕೃತ ಸೂಚನೆ ಬಂದ ಬಳಿ ಅವರ ವಿಧಾನಸಭಾ ಅಧಿಕಾರದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೋರ್ವ ನಾಲೆಯ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ ಶನಿವಾರ ನಡೆದಿದೆ. ಅಂಬ್ಲಮೊಗರು ಜರಿ ಹೌಸ್ ನಿವಾಸಿ, ರಿಕ್ಷಾ ಚಾಲಕ ಶಿವರಾಮ್ ಅವರ ಪುತ್ರ ಸೃಜನ್ (17) ಮೃತಪಟ್ಟ ದುರ್ದೈವಿ.
ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಬಿಜೆಪಿಗರು, ಈ ದೇಶಕ್ಕೆ ಮೊದಲ ಮಹಿಳಾ ರಾಷ್ಟ್ರಪತಿ, ಪ್ರಧಾನಿ ಹಾಗೂ ಮುಖ್ಯಮಂತ್ರಿಯನ್ನು ನೀಡಿದ ಪಕ್ಷ ಯಾವುದು ಎಂಬುದನ್ನು ನೆನಪಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ನಾರಿ ಶಕ್ತಿ ವಂದನ ಅಧಿನಿಯಮ ಮಸೂದೆಯು ವಿಫಲಗೊಂಡ ಹಿನ್ನೆಲೆಯಲ್ಲಿ ಬಿಜೆಪಿಗರು ರಾಜ್ಯದಾದ್ಯಂತ ಜಾಗೃತಿ ಮೂಡಿಸುತ್ತೇವೆ ಎಂದು ಹೇಳುತ್ತಾರೆ. 2011ರ ಜನಗಣತಿಯನ್ನೇ ಆಧರಿಸಿ ಮೀಸಲಾತಿಯನ್ನು ತರುವುದಾದರೆ 2023 ರವರೆಗೆ ಕಾಯುವಂತ ಅವಶ್ಯಕತೆ ಏನಿತ್ತು? ಎಂದು ಕೆಪಿಸಿಸಿ ವಕ್ತಾರೆ ಯು.ಟಿ.ಫರ್ಝಾನ ಪ್ರಶ್ನಿಸಿದ್ದಾರೆ.
ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ ಒಡಿಶಾದ ಭುವನೇಶ್ವರದಲ್ಲಿ ಎ.22, 23ರಂದು ನಡೆಯಲಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕೇರಳಂ ರಾಜ್ಯದ ಕಾಸರಗೋಡು ಜಿಲ್ಲೆ ನಗರ ಮೂಲದ 46 ವಯಸ್ಸಿನ ಸಾವು ಬದುಕಿನ ಹೋರಾಟದಲ್ಲಿದ್ದ ಮತ್ತು ಹೃದ್ರೋಗ ಸಂಬಂಧಿ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳಾ ಹೃದ್ರೋಗಿಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪರಿಣಿತ ವೈದ್ಯರ ತಂಡವು ವಿನೂತನ ಶೈಲಿಯ ಅಪಾಯಕಾರಿ, ಜೀವರಕ್ಷಕಾ ಹೃದ್ರೋಗ ಚಿಕಿತ್ಸೆಯನ್ನು, ಆಧುನಿಕ ತಂತ್ರಜ್ಞಾನವನ್ನು ಬಳಸಿ, ಯಶಸ್ವಿಯಾಗಿ ನಿರ್ವಹಿಸಿ, ರೋಗಿಗೆ ಜೀವದಾನ ನೀಡಿ ಆರೋಗ್ಯ ಕ್ಷೇತ್ರದಲ್ಲಿ ಒಂದು ಸಾಧನೆ ಮಾಡಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ.
ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅಕಸ್ಮಿಕ ಸಂಭವಿಸಿದ್ದು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜೆಪ್ಪಿನಮೊಗರು ಬಳಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ರವಿವಾರ ಬಂಧಿಸಿದ್ದಾರೆ. ಬಂಧಿತರಿಂದ ₹46,50,000 ಮೌಲ್ಯದ 465.8 ಗ್ರಾಂ MDMA ವಶಪಡಿಸಿಕೊಳ್ಳಲಾಗಿದೆ.
ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.