Showing 20 of 3816 posts • Page 28 of 191
ಬೈಕ್ ಮತ್ತು ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಶಿರ್ಥಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುಕೊಣಾಜೆಯ ಹೌದಲ್ ಅಂಗನವಾಡಿ ಕೇಂದ್ರದ ಬಳಿ ನಡೆದಿದೆ.
ಕಾಂಗ್ರೆಸ್ ಸರ್ಕಾರ ಸಾವಿರ ಸಂಭ್ರಮ ಅಂತ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಆದರೆ ಇವರ ಈ ಸಂಭ್ರಮ ಯಾಕೆ? ಭ್ರಷ್ಟಾಚಾರ ಮಾಡಿದಾರೆ ಅಂತ ಸಂಭ್ರಮವಾ?
ಮಂಗಳೂರಿನ ಐದು ವರ್ಷದ ಬಾಲೆಯೊಂದು ಅನಾರೋಗ್ಯದಿಂದ ಬಳಲುತ್ತಿದ್ದು, ದಾನಿಗಳ ಸಹಾಯ ಯಾಚಿಸುತ್ತಿದೆ. ಮಗುವಿನ ಚಿಕಿತ್ಸೆಗೆ 25ರಿಂದ 30 ಲಕ್ಷ ರೂಪಾಯಿ ವೆಚ್ಚ ತಗುಲಲಿದ್ದು, ಮಗುವಿನ ಪೋಷಕರು ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.
ನಗರದ ಪಂಪ್ವೆಲ್ ಸರ್ಕಲ್ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ದಿನಾಂಕ 15-02-2026 ರಿಂದ 15-06-2026 ರವರೆಗೆ 4 ತಿಂಗಳುಗಳ ಕಾಲ ನಡೆಯಲಿದೆ.
ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಅಂಗಡಿ ಭಸ್ಮವಾಗಿರುವ ಘಟನೆ ಬೆಳ್ತಂಗಡಿ ನಗರದ ಹೇರಾಜೆ ಕಾಂಪ್ಲೆಕ್ಸ್ ನ ಕೆಎಎಫ್ ಕ್ರಿಯೇಟಿವ್ ಹೆಸರಿನ ಶಾಪ್ ನಲ್ಲಿ ಬೆಳ್ಳಂಬೆಳಿಗ್ಗೆ ನಡೆದಿದೆ.
ಕಳೆದ ಹತ್ತಾರು ದಿನಗಳಿಂದ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಪಾದಯಾತ್ರೆ ತಂಡಗಳು ಧರ್ಮಸ್ಥಳಕ್ಕೆ ಹೊರಟಿವೆ. ಪಾದಯಾತ್ರೆ ತಂಡಗಳ ವ್ಯವಸ್ಥಾಪಕರು ಅಡುಗೆ ಇನ್ನಿತರ ವ್ಯವಸ್ಥೆಗಳ ಬಗ್ಗೆ ಈಗಾಗಲೇ ಚಾರ್ಮಾಡಿ, ಮುಂಡಾಜೆ ತಲುಪಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ಕಾಳು ಮೆಣಸು “ಮಸಾಲೆಗಳ ರಾಜ” ಎಂದೇ ಪ್ರಸಿದ್ಧಿ ಪಡೆದಿರುವ ಈ ಅಮೂಲ್ಯ ಕೃಷಿ ಉತ್ಪನ್ನವು ರೈತರ ಆದಾಯದ ಪ್ರಮುಖ ಆಧಾರ. ಅದರೆ ಸಂಸ್ಕರಣೆಯ ಕಾರಣಕ್ಕೆ ಕೈಯಿಂದಲೇ ಮಾಡುವ ಕಾಳು ಮೆಣಸು ಗೊಳಿಸುವ ಪ್ರಕ್ರಿಯೆ ಕೃಷಿಕರಿಗೆ ಹೆಚ್ಚು ಶ್ರಮ, ಸಮಯ ಮತ್ತು ಖರ್ಚನ್ನು ಒಳಗೊಂಡಿದೆ.
ಬಿಜೈ ಚರ್ಚ್ ರಸ್ತೆಯ ‘ಕ್ಯಾಮಲಾಟ್’ನಲ್ಲಿ ಫೆಬ್ರವರಿ 14 ರಂದು ಸಂಜೆ 5 ಗಂಟೆಗೆ ವಿವಾಹ ಜೀವನದ ಐವತ್ತು ವರ್ಷಗಳನ್ನು ಪೂರೈಸಿದ ದಂಪತಿಗಳಿಗಾಗಿ ಡಾ. ಮೈಕೆಲ್ ಲೋಬೊ ಅವರು ವಿಶೇಷ ‘ಗೋಲ್ಡನ್ ಕಪಲ್ಸ್’ (ಸುವರ್ಣ ದಂಪತಿಗಳು) ಪುನರ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಮೂವರ ಬಂಧನ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಲಂಕಾರು ಗ್ರಾಮದ ಶರವೂರಿನ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 2ರವರೆಗೆ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿವರ್ಯರ ಮಾರ್ಗದರ್ಶನದಲ್ಲಿ ಡಾ . ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅವರ ಗೌರವಾಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಹೇಮಂತ ರೈ ತಿಳಿಸಿದರು.
ಬೀದಿಬದಿ ವ್ಯಾಪಾರಿಗಳ ಮೇಲೆ ಲೋಕೋಪಯೋಗಿ ಮತ್ತು ಹೆದ್ದಾರಿ ಪ್ರಾಧಿಕಾರ ನಡೆಸುತ್ತಿರುವ ದೌರ್ಜನ್ಯವನ್ನು ಸಮಗ್ರವಾಗಿ ಎದುರಿಸಲು ಫೆಬ್ರವರಿ 17 ರಂದು ಬೆಳಿಗ್ಗೆ 10ಗಂಟೆಗೆ ಕುತ್ತಾರಿನಲ್ಲಿರುವ ಮುನ್ನೂರು ಯುವಕ ಮಂಡಲದ ಸಭಾಭವನದಲ್ಲಿ ಉಳ್ಳಾಲ ತಾಲೂಕು ಮಟ್ಟದ ಬೀದಿಬದಿ ವ್ಯಾಪಾರಸ್ಥರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.
ಲೋಕೋಪಯೋಗಿ ಇಲಾಖೆ ಅವರು ತೊಕ್ಕೊಟ್ಟುವಿನಿಂದ ನಾಟೆಕಲ್ ವರೆಗಿನ ಬೀದಿಬದಿ ವ್ಯಾಪಾರಿಗಳನ್ನು ಬುಲ್ದೊಜರ್ ಬಳಸಿ ಕಾರ್ಯಾಚರಣೆ ಮಾಡಿರುವ ಕ್ರಮವನ್ನು ಖಂಡಿಸಿ ಇಂದು ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಉಳ್ಳಾಲ ತಾಲೂಕು ಸಮಿತಿ (ಸಿಐಟಿಯು) ನೇತೃತ್ವದಲ್ಲಿ ತೊಕ್ಕೊಟ್ಟು ಜಂಕ್ಷನ್ ಬಳಿ ಪ್ರತಿಭಟನೆ ನಡೆಯಿತು. ತೊಕ್ಕೊಟ್ಟು, ಕುತ್ತಾರು, ದೇರಳಕಟ್ಟೆ, ನಾಟೆಕಲ್, ಕೋಟೆಕಾರ್, ತಲಪಾಡಿ ಭಾಗದ ಹಲವಾರು ಬೀದಿಬದಿ ವ್ಯಾಪಾರಿಗಳು ಭಾಗವಹಿಸಿದ್ದರು.
ಏಕ ಬಳಕೆ ಪ್ಲಾಸ್ಟಿಕ್, ಕೈ ಚೀಲ ಬಳಕೆ ಮಾಡಿದಲ್ಲಿ 10,000 ದಂಡ ವಿಧಿಸಲಾಗುತ್ತದೆ. ಹಸಿಕಸ-ಒಣಕಸವನ್ನು ವಿಂಗಡಿಸಿ ಕೊಡುವ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ನೀಡಲಾಯಿತು.
ಆನ್ಲೈನ್ ಮೂಲಕ 2.37 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಪ್ರಧಾನ ಸಿವಿಲ್ ನ್ಯಾಯಾಲಯವು ಓ.ಎಸ್. ನಂ. 750/2020 ದಾವೆಯಲ್ಲಿ ದಿನಾಂಕ 19.12.2025 ರಂದು ಮಹತ್ವದ ತೀರ್ಪು ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ಶಾಶ್ವತ ನಿರ್ಬಂಧಕಾಜ್ಞೆಗಾಗಿ ಸಲ್ಲಿಸಿದ ದಾವೆಯನ್ನು ಖರ್ಚು ಸಹಿತ ವಜಾಗೊಳಿಸಿದೆ.
ಮಂಗಳೂರು: ನೆರಹೊರೆಯವರ ಮೇಲೆ ಕ್ಷುಲ್ಲಕ ವಿಚಾರಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾತನೇ ಜೈಲು ಪಾಲಾಗಿರುವ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲ್ಯಾಂಡ್ ಲಿಂಕ್ಸ್ನ ಗ್ರೀನ್ ಪಾರ್ಕ್ ಅಪಾರ್ಟ್ಮೆಂಟ್ ನಿವಾಸಿ ಹಾಗೂ ಕೆನರಾ ಬ್ಯಾಂಕಿನ ಯೆಯ್ಯಾಡಿ ಶಾಖೆಯ ಸಿಬ್ಬಂದಿ ಮಂಜಪ್ಪ ಸುರೇಂದ್ರನ್ ಬಂಧನಕ್ಕೊಳಗಾದ ವ್ಯಕ್ತಿ. ಮನೆಯ ಅಂಗಳದಲ್ಲಿ ಶಟಲ್ ಆಡ ಆಡುತ್ತಿದ್ದ ಬಗ್ಗೆ ಮಂಜಪ್ಪ ಸುರೇಂದ್ರ ಕಾವೂರು ಪೊಲೀಸರಿಗೆ ದೂರವಾಣಿ ಮೂಲಕ ಪದೇ ಪದೇ ಫೋನ್ ಮಾಡಿ ದೂರು ನೀಡಿದ್ದರು. ಪೊಲೀಸ್ ತುರ್ತು ಕರೆ 112ಕ್ಕೂ […]
ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ ಘಟನೆ ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ಸಂಭವಿಸಿದೆ.
ಚಲಿಸುತ್ತಿದ್ದ ಓಮ್ಮಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಹಿಂಬದಿ ವಾಹನ ಸವಾರ ಅಪಾಯದ ಮುನ್ಸೂಚನೆ ನೀಡಿದ ಪರಿಣಾಮ ಓಮ್ನಿ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ರಾ.ಹೆ 66 ರ ಕೋಟೆಕಾರು ಅಡ್ಡ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಸುರತ್ಕಲ್ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಆರೋಪಿಸಿದ್ದಾರೆ. ತಮ್ಮ ಮಗಳು ವೈಶಾಲಿ ಲವ್ ಜಿಹಾದ್ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ SDPI ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ.