Showing 20 of 4108 posts • Page 31 of 206
ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳು ನೀಡುತ್ತಿರುವ ಸೇವೆಗಳ ಮಹತ್ವದ ವಿಸ್ತರಣೆಯಾಗಿ, ಹೊಸ ವಾಣಿಜ್ಯ ಗುರುತಾದ “ಫಾದರ್ ಮುಲ್ಲರ್ ಕಾಂಪ್ಲೆಕ್ಸ್” ಇಂದು ದೇರಳಕಟ್ಟೆಯಲ್ಲಿ ಭವ್ಯವಾಗಿ ಉದ್ಘಾಟಿಸಲಾಯಿತು.
12ನೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆಗೈದ ಘಟನೆ ನಗರದ ಅತ್ತಾವರ ಕಾಸ ಗ್ರ್ಯಾಂಡ್ ದಲ್ಲಿ ನಡೆದಿದೆ.
ಅಸೈಗೋಳಿ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಕಾರು ಅಪಘಾತ ಸಂಭವಿಸಿದೆ.
ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಹಜ್ ಭವನಕ್ಕೆ ಜಾಗವಿದೆ, ಅನುದಾನವೂ ಇದೆ; ಆದರೂ ವಿಳಂಬ ಯಾಕೆ? ಮಂಗಳೂರಿನಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಜ್ ಭವನವನ್ನು ಕೂಡಲೇ ನಿರ್ಮಿಸಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಕಲ್ಪಿಸಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಒತ್ತಾಯಿಸಿದ್ದಾರೆ.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರಗಳಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ 2025 ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಹಾಗೂ ಪುಸ್ತಕ ಪುರಸ್ಕಾರಕ್ಕಾಗಿ ಈ ಕೆಳಗಿನ ಮಹನೀಯರನ್ನು ಆಯ್ಕೆ ಮಾಡಲಾಗಿದೆ.
ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ.
ತಿಂಗಳ ಹಿಂದಷ್ಟೇ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದ ಯುವ ಉದ್ಯಮಿಯೊಬ್ಬ ಇತ್ತೀಚೆಗೆ ತಿಂಡಿಯ ಜೊತೆಗೆ ವಿಷ ಸೇವಿಸಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಆತನ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ.
ಸವಾರನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಮಾರ್ಚ್ 28ರ ತಡರಾತ್ರಿ ಸಂಭವಿಸಿದೆ.
ನವಮಂಗಳೂರು ಬಂದರು (NMPT) ಆವರಣದ ಭೂಭಾಗದಲ್ಲಿ ಇಂದು ಅನಿರೀಕ್ಷಿತವಾಗಿ ದೈತ್ಯ ಸುಂಟರಗಾಳಿಯೊಂದು ಕಾಣಿಸಿಕೊಂಡಿದೆ. ಸಾಮಾನ್ಯವಾಗಿ ಸಮುದ್ರದಲ್ಲಿ ಇಂತಹ ದೃಶ್ಯಗಳು ಕಂಡುಬರುತ್ತವೆಯಾದರೂ, ಈ ಬಾರಿ ಭೂಮಿಯ ಮೇಲೆಯೇ ಧೂಳು ಮತ್ತು ಗಾಳಿ ಸುರುಳಿಯಾಕಾರದಲ್ಲಿ ಎತ್ತರಕ್ಕೆ ಜಿಗಿದಿರುವುದು ಕಂಡುಬಂದಿದೆ.
ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಫೈಓವರ್ ಮೇಲೆ ಮೀನಿನ ವ್ಯಾಪಾರಿ, ರೌಡಿ ಶೀಟರ್ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ ಹುಸೇನ್ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಕಾರ್ಯದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.
ಹಲವು ಅಪರಾಧಗಳಲ್ಲಿ ಆರೋಪಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಜ್ಞಾವರ ಗ್ರಾಮದ ನಿವಾಸಿ ಎನ್.ಎಂ.ಅಜೀಜ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರದ ಗಣೇಶ್ ಪ್ರಸಾದ್ (41) ಬಂಧಿತ ಆರೋಪಿ.
ನಿಟ್ಟೆ-ಎಂಆರ್ಪಿಎಲ್ ಕೋಸ್ಟಲ್ ಸ್ಟಾರ್ಟ್ಅಪ್ ಫೆಸ್ಟ್ 2026 ರ ಉದ್ಘಾಟನಾ ಸಮಾರಂಭವನ್ನು ಬಹಳ ಉತ್ಸಾಹದಿಂದ ನಡೆಸಲಾಯಿತು ಮತ್ತು ಇದನ್ನು ಔಪಚಾರಿಕವಾಗಿ ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಲಾಯಿತು.
ಮಾಜಿ ಸಚಿವ ಹಾಗೂ ಶಾಸಕನಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಕ್ಷೇತ್ರದ ಅಭಿವೃದ್ಧಿ ಕಾರ್ಯ ಮಾಡುವುದು ಹೊಸತೇನು ಅಲ್ಲ. ಆದರೆ ಬಂಟ್ವಾಳ ಶಾಸಕರು ವಿಧಾನಸಭೆಯಲ್ಲಿ ಮಂಡಿಸಿರುವ ಹಕ್ಕು ಚ್ಯುತಿಯಿಂದ ನನಗೆ ನೋವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಈಶ್ವರನ ಹೂದೋಟ ಎಂದೇ ಬಣ್ಣಿಸಲಾಗುವ ಪ್ರಶಾಂತ, ಪ್ರಕೃತಿಯ ಸೊಬಗು, ಹಸಿರು ಸಿರಿಯ ಮಧ್ಯೆ ಇರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಾರ್ಚ್ 30 ರಿಂದ ಏಪ್ರಿಲ್ 6 ವರೆಗೆ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದೆ.
ಸಂತ ಜೋಸೆಫರ ದೇವಾಲಯ, ಕಳವಾರು, ಪೆಜಾರ್ ಇಲ್ಲಿ ಸುಮಾರು ಎರಡುವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟ ಮತ್ತು ಯಾತನೆಯ ಕ್ಷಣಗಳನ್ನು ಸ್ಮರಿಸುವ ಪವಿತ್ರ ಶಿಲುಬೆಯ ಹಾದಿ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದ್ದು, ಈ ವರ್ಷ 242 ನೇ ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿಯನ್ನು ನಡೆಸಲಾಗುತ್ತದೆ. 2026 ನೇ ಸಾಲಿನ ಶಿಲುಬೆಯ ಹಾದಿ ಕಾರ್ಯಕ್ರಮ ಮಾರ್ಚ್ 31 ರಂದು ಮಂಗಳವಾರ ಸಂಜೆ 5 ಗಂಟೆಗೆ ನಡೆಯಲಿದೆ.
ತೊಕ್ಕೊಟ್ಟು ಫೈಓವರ್ ಮೇಲೆ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.