Showing 20 of 3817 posts • Page 33 of 191
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಲಾಗಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಮಂಗಳವಾರ ಮುಷ್ಕರ ನಡೆಸಿದರು.
2025-2026 ರ ಅವಧಿಗೆ ಈ ಕೆಳಗಿನ ಮಹನೀಯರು ಪದಾಧಿಕಾರಿಗಳಾಗಿ ಆಯ್ಕೆಗೊಂಡರು. ಮಹಾಪೋಷಕರರು ಸಿಎ ಎಸ್.ಎಸ್ .ನಾಯಕ್ , ಹಿರಿಯ ಲೆಕ್ಕ ಪರಿಶೋಧಕರು , ಎಂ.ಎಸ್.ಎಂ.ಇ & ಸ್ಟಾರ್ಟ್ ಅಪ್ ಮಾರ್ಗದರ್ಶಕರು ಹಾಗೂ ಬಿಸಿನೆಸ್ ಕೋಚ್ , ಅಧ್ಯಕ್ಷರಾಗಿ ಯು . ರಾಮರಾವ್ ,
ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೀಡಾಗಿ ಇನ್ನೊಬ್ಬರ ಪ್ರಾಣಕ್ಕೆ ತೊಂದರೆ ಮಾಡುವ ಪ್ರಕರಣಗಳಲ್ಲಿ ಇನ್ನು ಮುಂದೆ ಶಿಕ್ಷಾರ್ಹ ನರಹತ್ಯೆ (Culpable homicide) ಕಾಯ್ದೆಯಡಿ 10 ವರ್ಷಗಳವರೆಗೆ ಜೈಲು ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ವಹಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಪಾಲರ ಭಾಷಣ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗೆ ವರದಿ ನೀಡಲು ಮುಂದಾಗಿರುವ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಡವರಿಗಾಗಿ ಮಾಡುವ ಸಹಾಯಕ್ಕೆ ದೇವರ ಕೃಪಾವರಗಳು ಸದಾ ಇದೆ. ಅವರ ಸೇವೆಯಲ್ಲಿ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಪೀಟರ್ ಪಾವ್ಲ್ ಸಲ್ಡಾನಾ ಹೇಳಿದರು.
60 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಹಸುವೊಂದನ್ನು ಮೂಡುಬಿದಿರೆ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸೋಮವಾರ ನಡೆದಿದೆ.
ದೂರದೂರಿನಿಂದ ಕೆಲಸ ಅರಸಿ ಸ್ನೇಹಿತನೊಂದಿಗೆ ನಗರಕ್ಕೆ ಬಂದಿದ್ದ ಕಾರ್ಮಿಕನೋರ್ವ ಇತ್ತ ಕೆಲಸನೂ ಇಲ್ಲದೆ ಅತ್ತ ಕರೆ ತಂದ ಸ್ನೇಹಿತನೂ ಇಲ್ಲದೆ ಕಂಗಾಲಾಗಿ ಮರವೇರಿ ಕೂತ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ.
ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ “ಮಂಗಳೂರು ರಥೋತ್ಸವ’ (ಕೋಡಿಯಾಲ ತೇರು) ಸಹಸ್ರಾರು ಭಕ್ತರ ಸಮಕ್ಷಮ ರವಿವಾರ ವಿಜೃಂಭಣೆಯಿಂದ ನೆರವೇರಿತು.
ಕಳೆದ ಅನೇಕ ದಿನಗಳಿಂದ ಚಿರತೆ ಹಾವಳಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚಾಗಿದ್ದು, ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಹಾವಳಿಯಿಂದ ಬೆಳ್ತಂಗಡಿ ತಾಲೂಕಿನ ರೈತರು ಕಂಗೆಟ್ಟಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ಭಾನುವಾರ ಮಂಗಳೂರಿನ ಕದ್ರಿ ಹಿಲ್ಸ್ ಬಳಿಯ ಕೆ.ಪಿ.ಟಿ. ಮೈದಾನದಲ್ಲಿ ನಡೆಯಿತು.
ಉರ್ವ ಪೊಲೀಸರ ಕಾರ್ಯಾಚರಣೆಯಿಂದ ದಂಡುಪಾಳ್ಯ ಗ್ಯಾಂಗ್ ನ ಆರೋಪಿಯ ಬಂಧನವಾಗಿದೆ. 1997 ರಲ್ಲಿ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿಯಾಗಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿಕೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪಾಂಡೇಶ್ವರ ಮತ್ತು ಹೊಯ್ಗೆ ಬಜಾರ್ ಕ್ರಾಸಿಂಗ್ ನ ರೈಲ್ವೆ ಗೇಟ್ ಗಳು ಆಗಾಗ್ಗೆ ಮುಚ್ಚುತ್ತಿವೆ. ಇದು ಸಾರ್ವಜನಿಕರಿಗೆ, ವಿಶೇಷವಾಗಿ ಕಚೇರಿ ಸಮಯ ಮತ್ತು ತುರ್ತು ಸಂದರ್ಭಗಳಲ್ಲಿ ಅನಾನುಕೂಲತೆಯನ್ನು ಉಂಟುಮಾಡುತ್ತಿದೆ.
ಮಾಜಿ ಸಚಿವ ರಮಾನಾಥ್ ರೈ ಕೇಸರಿ ಬಗ್ಗೆ ತನ್ನ ಅಲರ್ಜಿಯನ್ನ ತೋರಿಸಿಕೊಂಡಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್ಗಳಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಗ್ರಾಹಕರ ದೈನಂದಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಪ್ಯಾಕ್ಗಳನ್ನು ಪರಿಚಯಿಸಿದೆ.
ಮನ್ಕುತೋಟಗುತ್ತು ಹಾಗೂ ನಾಡಾಜೆಗುತ್ತು ಇವರ ಸ್ಮರಣಾರ್ಥ ನಗರದ ಜಪ್ಪಿನಮೊಗರುವಿನಲ್ಲಿ16ನೇ ವರ್ಷದ ಹೊನಲು ಬೆಳಕಿನ ಜಯ- ವಿಜಯ ಜೋಡುಕೆರೆ ಕಂಬಳವು ಫೆ.14 ಮತ್ತು 15ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷರಾದ ಡಿ.ವೇದವ್ಯಾಸ್ ಕಾಮತ್ ಹೇಳಿದರು.
ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಉಡುಪಿ ಜಿಲ್ಲಾಧಿಕಾರಿ ಕೇಸರಿ ಧ್ವಜ ಹಾರಿಸಿರೋದಕ್ಕೆ ಕಾಂಗ್ರೆಸ್ ನಾಯಕರ ವಿರೋಧ ವಿಚಾರವಾಗಿ ಮಂಗಳೂರಿನಲ್ಲಿ ಗುರುಪುರ ವಜ್ರದೇಹಿ ಮಠದ ರಾಜ ಶೇಖರಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿನ ನಾಯಕರಿಗೆ ಧರ್ಮದ ಬಗ್ಗೆ ಅರಿವಿಲ್ಲ. ಮನೆಯಲ್ಲಿಯೂ ಇದನ್ನು ಆಚರಿಸುತ್ತಾರಾ ಅಂತಾ ಗೊತ್ತಿಲ್ಲ ಎಂದರು.
ಪಂಪ್ ವೆಲ್ ನ ಮಹಾವೀರ ಸರ್ಕಲ್ ಬಳಿ ನೂತನವಾಗಿ ಸ್ಥಾಪನೆಯಾಗಿರುವ ಕಲಶ ಜನವರಿ 24 ರಂದು ಶನಿವಾರ ಸಂಜೆ 5.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಆರೋಪಿ ಚಿಕ್ಕ ಹನುಮ ಚಿಕ್ಕ ಹನುಮಂತಪ್ಪ ಎಂಬಾತನನ್ನು ಆಂದ್ರಪ್ರದೇಶದಲ್ಲಿ ಮಂಗಳೂರು – ಉರ್ವ ಪೊಲೀಸರು ಬಂಧಿಸಿದ್ದಾರೆ.