Showing 20 of 4103 posts • Page 33 of 206
ಪ್ರಸಿದ್ಧ ಸಾಹಿತ್ಯಕರ್ತ ಶ್ರೀ ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ಅವರ ತುಳು ಲಿಪಿಯ ಕೃತಿ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22, 2026 ಭಾನುವಾರ ಬೆಳಗ್ಗೆ 10:00 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ.
ಪಣಂಬೂರು ಪೊಲೀಸರಿಂದ 18.03.2020ರಂದು ಮಹತ್ವದ ದಾಳಿ ನಡೆಸಿದ್ದು, 9 ಗೋವಿನ ರಕ್ಷಣೆ ಮತ್ತು ನೂರಾರು ಕೆಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಒಟ್ಟು ₹8 ಲಕ್ಷ 42 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಆಟ-ಕೂಟಗಳ ಸರದಾರ, ಯಕ್ಷರಂಗದ ಸವ್ಯಸಾಚಿ ಸೂರಿಕುಮೇರು ಗೋವಿಂದ ಭಟ್ (88) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ತೀರ್ಥಹಳ್ಳಿಯ ತಮ್ಮ ಹಿರಿಯ ಪುತ್ರನ ನಿವಾಸದಲ್ಲಿ ನಿಧನಹೊಂದಿದರು. ಅವರು ಮೂವರು ಪುತ್ರರನ್ನು ಅಗಲಿದ್ದಾರೆ.
ಸಂಗೀತ ಕ್ಷೇತ್ರದಲ್ಲಿನ ಅಸಾಧಾರಣ ಪ್ರತಿಭೆ ಮತ್ತು ಸಾಧನೆಗಳನ್ನು ಗುರುತಿಸಿ ರಿಶಾಲ್ ಮೆಲ್ಬಾ ಕ್ರಾಸ್ತಾ ಅವರನ್ನು 2026 ರ ಪ್ರತಿಷ್ಠಿತ ಫುಡಾರ್ ಪ್ರತಿಷ್ಠಾನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಂಗಳೂರು : ಮೂಡುಬಿದಿರೆ ಪೊಲೀಸ್ ಇನ್ಸೆಕ್ಟರ್ ಸಂದೇಶ್ ಅವರು ನನಗೆ, ನನ್ನ ಅಕ್ಕನ ಮಗ ಹಾಗೂ ನನ್ನ ಮಗನಿಗೆ ಮಾನಸಿಕ ಹಿಂಸೆ, ಜೀವಹಾನಿ ಬೆದರಿಕೆ, ಮಾನ ‘ಹಾನಿ ಹ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಸದ್ಯ ಅಮಾನತ್ತಿನಲ್ಲಿರುವ ಇನ್ನೆಕ್ಟರ್ ಸಂದೇಶ್ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕಾರ್ಕಳದ ಸುಮತಿ ನಾಯಕ್ ಒತ್ತಾಯಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಹೋದರಿ ಪ್ರಫುಲ್ಲ ಅವರ ಸಹಕಾರದಿಂದ ನಮ್ಮವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು. […]
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.
ನಾಡಿನ ಸಮಸ್ತ ಜನರಿಗೆ ಸ್ಪೀಕರ್ ಯು ಟಿ ಖಾದರ್ ಅವರು ಈದುಲ್ ಫಿತ್ ಹಬ್ಬದ ಶುಭಾಶಯ ಕೋರಿದ್ದಾರೆ.
ಪವಿತ್ರ ರಮಝಾನ್ ವೃತಗಳನ್ನು ಅನುಷ್ಠಾನಗೊಳಿಸಿದ ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್’ ಆಚರಿಸಿದರು.
ನಗರದ ಕುದ್ರೋಳಿ ಕಂಡತ್ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಕಂಕನಾಡಿಯ ಶಾಪ್ ಬಳಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಂಗಡಿಯ ಹೊರಗಡೆ ಇಟ್ಟಿದ್ದ ಟೇಬಲ್ ಫ್ಯಾನ್ ನನ್ನು ವ್ಯಕ್ತಿ ಕದಿಯುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ನಮ್ಮ ಕರಾವಳಿಯ ಮಂಗಳೂರು ಪ್ರತಿಭೆಗಳ ಗಣಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮಂಗಳೂರಿನ ಶಕ್ತಿನಗರದ ನಿವಾಸಿ ಆದಿ ಸ್ವರೂಪ ತನ್ನ ಅಸಾಧಾರಣ ಬರವಣಿಗೆಯ ಕೌಶಲದಿಂದ ಇಡೀ ದೇಶದ ಗಮನ ಸೆಳೆಯುತ್ತಿದ್ದಾಳೆ.
ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆಯಲ್ಲಿ ನಡೆದಿದೆ.
ಮಹಾನಗರ ಪಾಲಿಕೆ ದುರಾಡಳಿತದಿಂದ ಕೂಡಿದ್ದು, ಭ್ರಷ್ಟಾಚಾರ ಮಿತಿ ಮೀರಿದ್ದು, ಜನವಿರೋಧಿ ನೀತಿ ಜಾರಿಯಲ್ಲಿದೆ. ಆಡಳಿತ ಸಂಪೂರ್ಣ ವೈಫಲ್ಯ ಅನುಭವಿಸಿದ್ದು, ಮಂಗಳೂರು ಮಹಾನಗರಪಾಲಿಕೆಯ ದುರಾಡಳಿತ ಕೊನೆಯಾಗಬೇಕು ಎಂದು ಆಗ್ರಹಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಮಂಡಲದ ನೇತೃತ್ವದಲ್ಲಿ ಬುಧವಾರ ಮಂಗಳೂರು ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬುಧವಾರ ಮುಂಜಾನೆ 4:30ರ ಸುಮಾರಿಗೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಳಿ ಅಕ್ರಮ ಗೋ ಸಾಗಾಟವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಂತಸದ ವಾತಾವರಣ ಮನೆಮಾಡಿದೆ. ಇಲ್ಲಿನ ‘ಗೀತಾ’ ಎಂಬ ಹೆಸರಿನ ಭಾರತೀಯ ತೋಳ (Indian Wolf) ಒಂದೇ ಬಾರಿಗೆ ಏಳು ಮರಿಗಳಿಗೆ ಜನ್ಮ ನೀಡುವ ಮೂಲಕ ಗಮನ ಸೆಳೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ಬುಧವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ.
ದ.ಕ. ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕರಿಗೆ ಆಗುತ್ತಿರುವ ಸಮಸ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಆಟೋ ರಿಕ್ಷಾ, ಟೂರಿಸ್ಟ್, ಭಾರೀ ವಾಹನ ಚಾಲಕರ ಸಂಘ (ಎಐಸಿಸಿಟಿಯು) ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ರಿಕ್ಷಾ ಚಾಲಕರು ಪ್ರತಿಭಟನೆ ನಡೆಯಿತು.
“ಕಳೆದ ಮಾರ್ಚ್ 13 ರಂದು ಸುದ್ದಿಗೋಷ್ಠಿ ನಡೆಸಿದ್ದ ಡಾ.ರತಿ ಅವರು ಕರಾವಳಿಯಲ್ಲಿ ದೈವ ನರ್ತನ ಸೇವೆಯನ್ನು ಪಂಬದ, ಪಾಣಾರ ಸುಮಾರು 16 ಜಾತಿಗಳವರು ಮಾಡಬೇಕು ಆದರೆ ಮಂಗಳೂರಿನ ಬೋಳೂರಿನಲ್ಲಿ ಜಾರಂದಾಯ ದೈವಸ್ಥಾನದ ಬಂಟ ದೈವಕ್ಕೆ ಕ್ರಿಶ್ಚಿಯನ್ ಮಹಿಳೆಗೆ ಹುಟ್ಟಿದ ಯುವಕನಿಂದ ನರ್ತನ ಸೇವೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.