Showing 20 of 3817 posts • Page 35 of 191
ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ( 52) ಎಂದು ತಿಳಿದುಬಂದಿದೆ.
ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪೆಡ್ಲೆರ್ ಗಳನ್ನೂ ಬಂಧಿಸಿ ಈಗಾಗಲೇ ಹೆಡೆಮುರಿಕಟ್ಟಿದ್ದಾರೆ.ನಗರ ಪೊಲೀಸ್ ಆಯುಕ್ತರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ.
ರಾಜ್ಯದ ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿ ಮತ್ತುರಾಜ್ಯದ ಜನರನ್ನು ಭಯಗೊಸಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ದ್ವೇಷ ಭಾಷಣ ಮಸೂದೆ ತರಲು ಉದ್ದೇಶಿಸಿದೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಆರೋಪಿಸಿದ್ದಾರೆ.
ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯಿದೀನ್ ಮುಖ್ಯ ಪೋಷಕರಾಗಿರುವ BCCIಯ ವಾರ್ಷಿಕ ಮಹಾಸಭೆಯು ರವಿವಾರ ದುಬೈಯ ಜುಮೈರಾದ ಕ್ರೌನ್ ಪ್ಲಾಝಾ ಹೊಟೇಲಿನಲ್ಲಿ ನಡೆಯಿತು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಕೇಂದ್ರ ಬಿಜೆಪಿ ಸರಕಾರ ಬದಲಿಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರ ಜ.22ರಿಂದ 31ರವರೆಗೆ ಜಂಟಿ ಅಧಿವೇಶವನ್ನು ಕರೆದಿದೆ. ಬಡವರು ಬದುಕನ್ನು ಕಂಡುಕೊಂಡಿದ್ದಂತಹ ಉದ್ಯೋಗ ಖಾತರಿ ಯೋಜನೆಯನ್ನು ಮೂಲೆಗುಂಪಾಗಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ. ಸಂವಿಧಾನಬದ್ಧವಾಗಿ ಜಾರಿಗೆ ತಂದಿರುವ ಕಾಂಗ್ರೆಸ್ ನ ಜನವರ ಯೋಜನೆಯನ್ನು ಬೀದಿ ಪಾಲು ಮಾಡುವುದೇ ಬಿಜೆಪಿ ಉದ್ದೇಶ.
ಎ. ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹೆಮ್ಮೆಯಿಂದ ತಿಳಿಸುವುದೇನೆಂದರೆ, ಯುನೈಟೆಡ್ ಕಿಂಗ್ಡಮ್ನ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್ ಆಫ್ ಗ್ಲಾಸ್ಗೋ ಸಂಸ್ಥೆಯು ಹೃದಯರೋಗ ಕ್ಷೇತ್ರದಲ್ಲಿ ಅವರ ವಿಶಿಷ್ಟ ವೈದ್ಯಕೀಯ ಮತ್ತು ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ, ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕರಾಗಿಯೂ ಮುಖ್ಯಸ್ಥರಾಗಿರುವ ಹಾಗೂ ಮುಖ್ಯ ಇಂಟರ್ವೆನ್ಶನಲ್ ಕಾರ್ಡಿಯಾಲಜಿಸ್ಟ್ ಆಗಿರುವ ಡಾ. ಬಿ. ವಿ. ಮಂಜುನಾಥ್ ಅವರಿಗೆ ಅತ್ಯಂತ ಗೌರವಾನ್ವಿತ “ಆನರರಿ FRCP” (ಫೆಲೋ ಆಫ್ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್) ಪ್ರಶಸ್ತಿಯನ್ನು ಪ್ರದಾನಿಸಿದೆ.
ಮಡಿಕೇರಿ ಕಡೆಯಿಂದ ಆಗಮಿಸುತ್ತಿದ್ದ ವಾಹನವನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ಮಾಡುವಾಗ ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಬೀಟಿ (ತೇಗ) ಮರ ಸಾಗಣೆ ಮಾಡುವುದನ್ನು ಪತ್ತೆ ಮಾಡಿದ್ದಾರೆ.
ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ.
ತಾಲೂಕಿನ ಪುತ್ತಿಗೆ ಗ್ರಾಮದ ಬಂಗ್ಲೆ ಎಂಬಲ್ಲಿ ಬುಧವಾ ರಾತ್ರಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸುರಂಗದೊಳಗೆ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಅತ್ಯಂತ ಸಾಹಸಮಯವಾಗಿ ರಕ್ಷಿಸಿದ್ದಾರೆ.
ದೇಶದ ಪ್ರಸಿದ್ಧ ಶಾಪಿಂಗ್ ಮಾಲ್ ಡಿಮಾರ್ಟ್ ಸಂಸ್ಥೆಯ ಶಾಖೆಯೊಂದು ಉಳ್ಳಾಲ ತಾಲೂಕಿನ ಕುಂಪಲ- ಬೈಪಾಸ್ ಎಂಬಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಇರೋದಾಗಿ ಯಾರೋ ವಿಘ್ನ ಸಂತೋಷಿಗಳು ಜಾಲತಾಣಗಳಲ್ಲಿ ಜಾಹಿರಾತು ಹರಿಯಬಿಟ್ಟಿದ್ದು, ಉದ್ಯೋಗ ಅರಸಿ ಮಾಲ್ ಕಡೆಗೆ ಧಾವಿಸಿ ಬಂದ ನೂರಾರು ಮುಗ್ಧ ಜನರಿಗೆ ಅಲ್ಲಿನ ಸೆಕ್ಯುರಿಟಿ ಸಿಬ್ಬಂದಿಯ ಮಾತು ಕೇಳಿ ಶಾಕ್ ಆಗಿದೆ.
ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ಮಿನಿ ಬಾಂಗ್ಲಾ ಆಗುವ ಮೊದಲು ಹೇಚ್ಛೆತ್ತುಕೊಳ್ಳಿ ಹಿಂದುಗಳೇ ಎಂದು ವ್ಯಕ್ತಿಯ ವಾಟ್ಸಾಪ್ ಪೋಸ್ಟ್ ಪೋಸ್ಟ್ ವೈರಲ್ ಆಗಿದ್ದು ಇದೀಗ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜ.18ರ ಬಳಿಕ ಜಪ್ಪು ಮಹಾಕಾಳಿಪಡ್ಪು ಅಂಡರ್ ಪಾಸ್ ಓಪನ್ ಆಗಲಿದ್ದು, ಪಂಪ್ ವೆಲ್, ಕಂಕನಾಡಿ ರಸ್ತೆ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ ಮಾಹಿತಿ ನೀಡಿದ್ದಾರೆ.
ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು, ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಪೊಲೀಸ್ ಸಿಬ್ಬಂದಿ ದಿವಂಗತ ಶ್ರೀ ಹರೀಶ್ ಜಿ. ಎನ್. ಅವರ ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಶೂರೆನ್ಸ್ ಸ್ಕೀಮ್’ ಅಡಿಯಲ್ಲಿ ಆರ್ಥಿಕ ನೆರವು ನೀಡಿದೆ. ಬ್ಯಾಂಕಿನ ಈ ಬೆಂಬಲ ಉಪಕ್ರಮದ ಭಾಗವಾಗಿ, ಮೃತರ ಕುಟುಂಬಕ್ಕೆ ₹ 70 ಲಕ್ಷ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು.
ನ್ಯೂ ಇಂಡಿಯಾ ಲಕ್ಕೀ ಸ್ಕೀಮ್ ಹೆಸರಲ್ಲಿ ವಂಚನೆಗೊಳಗಾದ ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯಿಸಿ ಪ್ರತಿಭಟನಾ ಪ್ರದರ್ಶನ ನಡೆಯಿತು.
ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆಯವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪತ್ತೆಯಾಗಿದ್ದು, ಮುಂಡಾಜೆಯ ಜನರಲ್ಲಿ ಆತಂಕ ಮೂಡಿಸಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ಸಂಜೆ ಏಕಾಏಕಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಕುಮಾರ ಪರ್ವತದ ತಪ್ಪಲಿನ ಪ್ರದೇಶಗಳು ಸೇರಿದಂತೆ ಕಡಬ, ನೆಟ್ಟಣ, ಕುಕ್ಕೆ ಸುಬ್ರಹ್ಮಣ್ಯ ಮತ್ತು ಪಂಜ ವ್ಯಾಪ್ತಿಯಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಜಾತ್ರೆ ಸಮಯವಾದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ.
ಧನುರ್ಮಾಸ ಪೂಜೆಗೆ ಮುಂಜಾನೆ ತೆರಳಿದ್ದ ಬಾಲಕ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತ ರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ.
ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರು, ಪ್ರವಾಸಿಗರು ಮತ್ತು ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯ ಹಲವಾರು ಅರಣ್ಯ ಮತ್ತು ವನ್ಯಜೀವಿ ಪ್ರದೇಶಗಳಲ್ಲಿ ಚಾರಣವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.