Showing 20 of 4113 posts • Page 41 of 206
ಬಿಕರ್ನಕಟ್ಟೆ, ಮಂಗಳೂರಿನ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಫೆಬ್ರವರಿ 21, 2026 ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರಾರ್ಥನಾ ವಿಧಿಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕಾಗಿ ದೇವರ ಆಶೀರ್ವಾದವನ್ನು ಬೇಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಯಿತು.
ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಲೂಡೊ ಕಾಯಿನ್ ನುಂಗಿ ಬಾಲಕಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತೊಕ್ಕಟ್ಟು ಬಳಿ ಕೊಲ್ಯ ಗ್ರಾಮದಲ್ಲಿ ನಡೆದಿದೆ.
ಅಕ್ರಮ ಗೋ ಸಾಗಾಟ ಪತ್ತೆಯಾದ ಘಟನೆ ಮಂಗಳೂರು ಪದವು ಹೈವೇ ಬಳಿ ನಡೆದಿದೆ.
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ @ ಪ್ರಸಾದ್ (30) ಎಂದು ಗುರುತಿಸಲಾಗಿದೆ.
ಇಂದು ನಗರದ ಮಂಗಳೂರಿನ ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐ ಆರ್ ಗ್ರೂಪ್ ತನ್ನ ಉತ್ಪಾದನಾ ಘಟಕವನ್ನು ಸ್ಥಾಪನೆ ಮಾಡಲು ಭೂಮಿ ಪೂಜೆ ಯನ್ನು ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿವಂದನೀಯ ಡಾ. ಪೀಟರ್ ಪೌಲ್ ಸಲ್ದಾನ ನೆರವೇರಿಸಿ ಆಶೀರ್ವದಿಸಿದರು.
ಕಾಸರಗೋಡಿನ ಕಯ್ಯಾರು ಗ್ರಾಮದಲ್ಲಿರುವ ಕ್ರಿಸ್ತರಾಜ ದೇವಾಲಯವು ಮಂಗಳೂರು ಧರ್ಮಪ್ರಾಂತ್ಯಕ್ಕೆ ಒಳಪಟ್ಟಿದ್ದು ಮಂಗಳೂರು ನಗರದಿಂದ ಸುಮಾರು 42 ಕಿಮೀ ದೂರದಲ್ಲಿದೆ. ಕಯ್ಯಾರು ಅನೇಕ ಭಾಷೆಗಳು ಸೌಹಾರ್ದದಿಂದ ಬೆರೆತು ಬದುಕುವ ನೆಲ. ನೈಸರ್ಗಿಕ ಸೌಂದರ್ಯ ಹಾಗೂ ಬೌದ್ಧಿಕ ಪರಂಪರೆಯಲ್ಲಿ ಸಮೃದ್ಧವಾದ ಕಯ್ಯಾರು, ಖ್ಯಾತ ಕವಿ ಕಯ್ಯಾರ ಕಿಞ್ಞಣ್ಣ ರೈಯವರನ್ನೊಳಗೊಂಡಂತೆ ಅನೇಕ ಕವಿಗಳು ಮತ್ತು ಕಲಾವಿದರನ್ನು ಹುಟ್ಟಿಸಿದ ತಾಯಿ ನೆಲ. ಪೂಸಡಿ ಗುಂಪೆ ಮೊದಲಾದ ಸೊಬಗಿನ ಸ್ಥಳಗಳಿಂದ ಕಯ್ಯಾರು ಸಾಂಸ್ಕೃತಿಕ ಮತ್ತು ಸೌಂದರ್ಯ ಮೌಲ್ಯಗಳಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ.
ಕೆಲವು ಕಡೆ ರಸ್ತೆ ಕಾಮಗಾರಿ ಹಿನ್ನಲೆ ಬಸ್ ಚಾಲನೆ, ಸಮಯ ಪರಿಪಾಲನೆ ಕಷ್ಟವಾಗುತ್ತಿದೆ. ಕದ್ರಿ, ಕೆಪಿಟಿ,ಕೆಲವು ಕಡೆಗಳಲ್ಲಿ ಬಸ್ ಹೋಗಲು ಪೊಲೀಸರು ಅನುವು ಮಾಡಿದಲ್ಲಿ ಈಗಿನ ಪರಿಸ್ಥಿತ್ಗೆ ಸಂಚಾರ ಸುಗಮವಾಗಲಿದೆ.
ಸಂಗೀತ ಭಾರತಿ ಫೌಂಡೇಶನ್ (ರಿ) ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಫೆ.22ರಂದು ಸಂಜೆ 5 ಗಂಟೆಗೆ ನಗರದ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಗೀತ ಭಾರತಿ ಫೌಂಡೇಶನ್ನ ಕಾರ್ಯದರ್ಶಿ ಡಾ.ಉಷಾಪ್ರಭಾ ಎನ್.ನಾಯಕ್ ತಿಳಿಸಿದ್ದಾರೆ.
ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ ಬೆನ್ನಿಗೇ ಈ ಹಿಂದೆ ಬಳಕೆಯಲ್ಲಿದ್ದ ರೈಲ್ವೇ ಕ್ರಾಸಿಂಗನ್ನು ರೈಲ್ವೇ ಇಲಾಖೆ ಶಾಶ್ವತವಾಗಿ ಬಂದ್ ಮಾಡಿದೆ.
ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಇವರ ಭರತನಾಟ್ಯ ರಂಗಪ್ರವೇಶವು ಫೆ.22 ರಂದುಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ನೃತ್ಯ ಸುಧಾ (ರಿ) ಸಂಸ್ಥೆಯ ಸ್ಥಾಪಕಿ ಮತ್ತು ಶ್ರೀಯಾ ತಾಯಿ ವಿದುಷಿ ಸೌಮ್ಯ ಸುಧೀಂದ್ರ ರಾವ್ ತಿಳಿಸಿದ್ದಾರೆ.
ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟಿವಿ ಚಾನಲ್ ಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ಮಂಜನಾಡಿಯ ಮೊಂಟೆಪದವು ಎಂಬಲ್ಲಿ 2025ರ ಮೇ 30ರಂದು ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಸಿಲುಕಿ ತನ್ನೆರಡೂ ಕಾಲುಗಳನ್ನು ಕಳೆದುಕೊಂಡ ಅಶ್ವಿನಿ ಎಂಬವರು ತನ್ನ ತಾಯಿ ಪುಷ್ಪಾವತಿ ಜತೆ ಮಾನವ ಹಕ್ಕುಗಳ ಆಯೋಗದೆದುರು ನ್ಯಾಯಕ್ಕಾಗಿ ಕಣ್ಣೀರಿಟ್ಟ ಘಟನೆ ನಡೆಯಿತು.
ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯರು ಅತ್ಯಂತ ಅಪಾಯಕಾರಿ ಗರ್ಭಾವಸ್ಥೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ಸುಮಾರು ಎರಡೂವರೆ ತಿಂಗಳ ಆಸ್ಪತ್ರೆಯ ಆರೈಕೆಯ ನಂತರ ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿ ಮನೆಗೆ ಮರಳಲು ಸಹಾಯ ಮಾಡಿದ್ದಾರೆ.
: ದಕ್ಷಿಣಕನ್ನಡ ಜಿಲ್ಲೆಯ ಕಡಬ ಮೂಲದ ಯುವಕನೊಬ್ಬ ಐರ್ಲೆಂಡ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಘಟನೆ ನಡೆದಿದೆ.
ನಕ್ಸಲ್ ಕರಪತ್ರ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಜಾನ್@ ಜಯಣ್ಣ@ಮಹೇಶ್ (49) ಎಂಬಾತನನ್ನು ಕೇರಳದ ತ್ರೀಶೂರ್ ಜೈಲಿನಿಂದ ಬಿಗಿ ಭದ್ರತೆಯಲ್ಲಿ ಕೇರಳ ವಿಶೇಷ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನಗರದ ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ಬಳಿ ಮನೆಯೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ನಡೆದಿದೆ.
ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ದಿನಾಂಕ 19.02.2026ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು.
ಭಾರತದ ಕಾರ್ಬನ್ ನ್ಯೂಟ್ರಲ್ ಭವಿಷ್ಯದ ನಗರಗಳ ನಿರ್ಮಾಣಕ್ಕೆ ದಿಟ್ಟ ಹೆಜ್ಜೆಯಾಗಿ MIR ನೆಟ್ ಝೀರೋ ಶೃಂಗಸಭೆ ಉದ್ಘಾಟನೆ ನಗರದ ಟಿಎಂಎ ಪೈ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ರೋಬೋಟಿಕ್ ಟೆಲಿಸರ್ಜರಿಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಸುಧಾರಿತ ಆರೋಗ್ಯ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ.