Showing 20 of 3816 posts • Page 5 of 191
ನಗರದ ಕುಂಟಿಕಾನ ಬಳಿಯ ಆನ್ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮಲ್ಪೆ ಬೀಚ್ನಲ್ಲಿ ಮಂಗ್ಲಿಯ ಗಾನವೈಭವ ನಡೆಯಿತು. ಕೊಡವೂರು ಮಹಾರುದ್ರಯಾಗದ ಮೆರುಗನ್ನು ಮಂಗ್ಲಿಯ ಸಂಗೀತ ರಸಮಂಜರಿ ಹೆಚ್ಚಿಸಿತು.
ಮಲ್ಪೆಯ ಕರ್ಕೇರ ಗೆಸ್ಟ್ ಹೌಸಿನಲ್ಲಿದ್ದ ವೈವಿಧ್ಯಮಯ ಮೀನುಗಳನ್ನು ಕಂಡು ಖ್ಯಾತ ಹಾಡುಗಾರ್ತಿ ಮಂಗ್ಲಿ ಖುಷಿ ಪಟ್ಟರು.
ತಾಲೂಕಿನ ಕುರಿಯಾಳ ಎಂಬಲ್ಲಿ ಬಾವಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರನ್ನು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬರಿಮಾರು ನಿವಾಸಿಗಳಾದ ಪದ್ಮನಾಭ(38) ಮತ್ತು ರಾಮಣ್ಣ(48) ಗಾಯಗೊಂಡವರು. ಭಾನುವಾರ ಸಂಜೆ ಈ ಘಟನೆ ನಡೆದಿದೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೆಲ್ಕಾರ್ ನಲ್ಲಿ ಸಂಚರಿಸುತ್ತಿದ್ದ ಲಾರಿಯೊಂದರಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡು ವಸ್ತುಗಳೆಲ್ಲವೂ ಭಸ್ಮಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.
ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ಮೇ.16 ರಂದು ಸಾರ್ವಜನಿಕರಲ್ಲಿ ಸರಿಯಾದ ಪೌಷ್ಠಿಕ ಆಹಾರ, ಆರೋಗ್ಯಕರ ಆಹಾರ ಪದ್ಧತಿ ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಉಚಿತ ಆಹಾರ ಮತ್ತು ಪೌಷ್ಠಿಕತೆ ಜಾಗೃತಿ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಮಂಗಳೂರಿನಲ್ಲಿ ಹೈಕೋರ್ಟ್ನ ಸಂಚಾರಿ ಪೀಠ ಅಥವಾ ಶಾಶ್ವತ ಪೀಠ ಸ್ಥಾಪಿಸಬೇಕೆಂಬ ಬೇಡಿಕೆ ಕೇವಲ ವಕೀಲರದ್ದಲ್ಲ, ಇಡೀ ಕರಾವಳಿ ಭಾಗದ ಸಾರ್ವಜನಿಕರ ನ್ಯಾಯಸಮ್ಮತ ಹಕ್ಕಿನ ಬೇಡಿಕೆಯಾಗಿದ್ದು ಇದಕ್ಕೆ ಮನ್ನಣೆಯನ್ನು ರಾಜ್ಯದ ಮುಖ್ಯ ಮಂತ್ರಿಗಳು ನೀಡಿದ್ದು ಅಕ್ಟೋಬರ್ ತಿಂಗಳ ಒಳಗಾಗಿ ನಗರದ ಹಳೆ ಡಿಸಿ ಕಚೇರಿಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯಾಗಲಿದೆ
ಹಿಜಾಬ್ ಧರಿಸುವುದು ಹೊಸ ಪದ್ಧತಿಯಲ್ಲ, ಮುಸ್ಲಿಂ ಸಮುದಾಯದ ಧಾರ್ಮಿಕ, ಸಾಂಸ್ಕೃತಿಕ ಆಚರಣೆ: ಐವನ್ ಡಿ’ಸೋಜ
ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ವೈಫಲ್ಯವೇ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ ಐವನ್ ಡಿ’ಸೋಜ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಈ ಕಾರ್ಯಾಚರಣೆ ನಡೆದಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್ ಡಿಸೇಲ್ ದರ ಏರಿಕೆ ವಿಚಾರವಾಗಿ ಮಂಗಳೂರಿನಲ್ಲಿ ದ.ಕ.ಜಿಲ್ಲಾ NSUI ಹಾಗೂ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಯಿತು.
ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಸಾಗಾಟ ಮಾಡುತಿದ್ದ ಅಕ್ರಮ ಜಾನುವಾರುವನ್ನು ಭಜರಂಗದಳ ಮಾಹಿತಿಯ ಮೇರೆಗೆ ಮಂಗಳೂರು ಜೆಪ್ಪಿನ ಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ನಿಯಮಿತದ ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಮೇ 17 ಮತ್ತು 18 ರಂದು ಎರಡು ದಿನಗಳ ಕಾಲ ರಾಜ್ಯ ಮಟ್ಟದ ‘ಗೇರು ಮೇಳ’ ಜರುಗಲಿದೆ ಎಂದು ಗೇರು ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್. ಗಟ್ಟಿ ಅವರು ತಮ್ಮ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕೆಲವು ದಿನಗಳಲ್ಲಿಎಸ್ಐಟಿ ತಂಡಕ್ಕೆ ಕುಳಿತುಕೊಳ್ಳಲು ಶಾಮಿಯಾನ ವ್ಯವಸ್ಥೆ ಮಾಡಲಾಗಿತ್ತು. ಇದರ ಬಿಲ್ ಕೂಡ ಬಾಕಿ ಇದೆ.
ತಾಂತ್ರಿಕ ದೋಷದಿಂದ ಫಿಶ್ ಮಿಲ್ ಲಾರಿಯಿಂದ ತೈಲ ಸೋರಿಕೆಯಾಗಿರುವ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಸುತ್ತಮುತ್ತಲಿನ ಭಾಗಗಳಲ್ಲಿ ನಿನ್ನೆ ಸಂಜೆ ಗುಡುಗು ಸಹಿತ ಸುರಿದ ಭಾರೀ ಮಳೆಗೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್ ವ್ಯತ್ಯಯಗೊಂಡಿದೆ.
ಪೆಟ್ರೋಲ್ ಮಿತ ಬಳಕೆ , ಚಿನ್ನ ಖರೀದಿ ಮಾಡ್ಬೇಡಿ ಪ್ರಧಾನಿ ಹೇಳಿಕೆ ವಿಚಾರವಾಗಿ NSUI ಮುಖಂಡ ಸುಹಾನ್ ಆಳ್ವಾ ಖಂಡನೆ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ 7 ಸಲಹೆಗಳನ್ನು ದೇಶದ ಜನತೆಗೆ ನೀಡಿದ್ದಾರೆ.
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ದರ್ಶನ ಸಮಯದಲ್ಲಿ ಅಲ್ಪ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಹೆಚ್ಚಿನ ಸಮಯದ ದರ್ಶನ ಸೌಲಭ್ಯ ಕಲ್ಪಿಸಲಾಗಿದೆ.