Showing 20 of 4118 posts • Page 54 of 206
ಬ್ರಹ್ಮ ಬೈದರ್ಕಳ ಗರೋಡಿ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಿಲ್ಲಿಸಲು ಪದ್ಮರಾಜ್ ಪೂಜಾರಿ ಬೆಂಬಲ ಎಂಬ ಪೊಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಿಬಿಟ್ಟಿದ್ದರು.
ಮಂಗಳೂರು: ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗವು ಜನವರಿ 8 ರ ಗುರುವಾರದಂದು ಬೆಳಗ್ಗೆ 9 :30 ರಿಂದ ಮಧ್ಯಾಹ್ನ 12:30 ರವರೆಗೆ ಧ್ವನಿ ತಪಾಸಣೆ ಶಿಬಿರವನ್ನು ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗದಲ್ಲಿ ಆಯೋಜಿಸಿದೆ. ಸಾಮಾನ್ಯ ಧ್ವನಿ ಸಂಬಂಧಿತ ಸಮಸ್ಯೆಗಳಾದ ಧ್ವನಿಯಲ್ಲಿ ಒರಟುತನ, ಧ್ವನಿಯಲ್ಲಿ ಬದಲಾವಣೆಗಳು, ಗಂಟಲು ನೋವು ಮತ್ತು ಧ್ವನಿಯಲ್ಲಿ ಆಯಾಸ ಮುಂತಾದ ಸಮಸ್ಯೆಗಳನ್ನು ಅನುಭವಿಸುವವರು ಈ ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರದಲ್ಲಿ ಈ ಕೆಳಕಂಡ ಸೇವೆಗಳನ್ನು ಒದಗಿಸಲಾಗುತ್ತದೆ.
ಕಳೆದ ಆರು ತಿಂಗಳಿನಿಂದ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡಿದ್ದರೂ, ಬೆಟ್ಟಿಂಗ್ ಸಿಂಡಿಕೇಟ್ಗಳು, ಮಾಫಿಯಾ ಜಾಲಗಳು ಮತ್ತು ರಾಜಕೀಯ ನಾಯಕರ ಒಂದು ಭಾಗದ ಒತ್ತಡದಿಂದಾಗಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತು ದಕ್ಷಿಣ ಕನ್ನಡ (ಡಿಕೆ) ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ. ಅರುಣ್ ಅವರನ್ನು ವರ್ಗಾವಣೆ ಮಾಡಲು ಹುನ್ನಾರ ನಡೆಯುತ್ತಿವೆ ಎಂದು ವರದಿಯಾಗಿದೆ.
ಭಗವಾನ್ ಶ್ರೀರಾಮಕೃಷ್ಣ ಪರಮಹಂಸರ, ಶ್ರೀ ಶ್ರೀ ಶಾರದಾ ದೇವಿಯವರ ಹಾಗೂ ಸ್ವಾಮಿ ವಿವೇಕಾನಂದರ ಪಾವನ ಸಂದೇಶಗಳಿಂದ ಪ್ರೇರಣೆಯನ್ನು ಪಡೆದ ರಾಮಕೃಷ್ಣ ಮಿಷನ್
ಸಾರ್ವಭೌಮ ರಾಷ್ಟ್ರ ವೆನಿಜುವೆಲಾ ದೇಶದ ಮೇಲೆ ಅಮೇರಿಕ ದಾಳಿ ನಡೆಸಿ ಅದರ ಅಧ್ಯಕ್ಷ ನಿಕೋಲಾಸ್ ಮಡೊರೊ ಮತ್ತವರ ಪತ್ನಿಯನ್ನು ಅಪಹರಿಸಿ, ಅಘೋಷಿತ ಯುದ್ಧ ಸಾರಿದ ಅಮೇರಿಕದ ನೀತಿಯನ್ನು ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.
ಮಂಗಳೂರು : ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ. ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿಗಳವರ ಹಾಗೂ ಪರಮಪೂಜ್ಯ ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳವರ ದೈವಜ್ಞ ದರ್ಶನ ಕಾರ್ಯಕ್ರಮ ಜನವರಿ 07 ರಂದು ಬುಧವಾರ ಸಾಯಂಕಾಲ 6.00 ಗಂಟೆಗೆ ದೈವಜ್ಞ ಕಲ್ಯಾಣ ಮಂಟಪ, ಅಶೋಕನಗರ, ಮಂಗಳೂರು, ಇಲ್ಲಿ ನೆರವೇರಲಿದೆ. ದೈವಜ್ಞ ಬ್ರಾಹ್ಮಣ ಸಮಾಜದ ಸರ್ವಾಂಗೀಣ ವಿಕಾಸ, ಸಮಾಜ ಸಂಘಟನೆ ಹಾಗೂ ಧಾರ್ಮಿಕ ಭಾವನೆಗಳ ಸಂವರ್ಧನೆಗಾಗಿ ನಾಲ್ಕು ದಶಕಗಳ ಹಿಂದೆ ಸ್ಥಾಪಿಸಲಾದ […]
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಹಲವು ಸಾರ್ವಜನಿಕರ ಆಧಾರ್ ಕಾರ್ಡ್ಗಳು ಡಿಲೀಟ್ ಆಗಿದ್ದು, ನಮ್ಮ ಗಮನಕ್ಕೆ ಈಗಾಗಲೇ ಬಂದಿರುವ ಮೂರು ಪ್ರಕರಣಗಳ ಬಗ್ಗೆ ಜಿಲ್ಲಾಧಿಕಾರಿ ಗಮನ ಸೆಳೆಯಲಾಗಿದೆ. ಸೂಕ್ತ ಕ್ರಮ ಆಗದಿದ್ದಲ್ಲಿ ಆಮ್ ಆದ್ಮಿ ಪಕ್ಷದ ಹಿಂದುಳಿದ ವರ್ಗದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಘಟಕದ ರಾಜ್ಯಾಧ್ಯಕ್ಷ ಬಿ ನವೀನ್ ಚಂದ್ರ ಪೂಜಾರಿ ಹೇಳಿದ್ದಾರೆ. ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಜ್ಯ ವಿವಿಧ ಕಡೆ ಜೀವಂತವಾಗಿರುವವರ ಸುಮಾರು 12 ಲಕ್ಷಕ್ಕೂ ಅಧಿಕ ಆಧಾರ್ ಕಾರ್ಡ್ಗಳು ಅಳಿಸಿ […]
ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲ್ಬೈಲ್ವಾರ್ಡಿನಲ್ಲಿ ಕೊಡಿಯಾಲ್ಗುತ್ತು ವೆಟ್ವೆಲ್ನಿಂದ ಕೊಳಚೆ ನೀರನ್ನು ತೋಡುಗಳಲ್ಲಿ ಬಿಟ್ಟಿದ್ದು, ಸ್ಥಳೀಯ ಬಾವಿಗಳ ನೀರು ಕಲುಷಿತಗೊಂಡು ದುರ್ನಾತ ಬೀರುತ್ತಿದ್ದು,
ಗುರುಪುರ ನದಿಗೆ ಹಾರಿ ಯುವತಿ ಸುಸೈಡ್ ಮಾಡಿಕೊಂಡ ಘಟನೆ ನಡೆದಿದೆ.
55.48 ಗ್ರಾಂ ಎಂಡಿಎಂಎ ಸಹಿತ ವ್ಯಕ್ತಿಯೊಬ್ಬನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಉಮ್ಮರ್ ಶರೀಪ್ (42), ದೇರಳಕಟ್ಟೆ ಎಂದು ಗುರುತಿಸಲಾಗಿದೆ.
ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಂಗಳೂರು : ಬಜಪೆಯಲ್ಲಿ ಗೋಮಾಂಸ ಒಯ್ಯುತ್ತಿದ್ದ ತಂದೆ, ಮಗಳನ್ನು ತಡೆದ ಪ್ರಕರಣ ಸಂಬಂಧಿಸಿ ಇಬ್ಬರು ಯುವಕರ ಫೋಟೊ ಹಾಕಿ ಮಿತಿಮೀರುತ್ತಿರುವ ಸಂಘಗಳ ಅಟ್ಟಹಾಸ ಎಂದು ಬರೆದು ಪ್ರಚೋದನಕಾರಿ ಸಂದೇಶ ಹಾಕಿದ ಬಗ್ಗೆ ಮಂಗಳೂರು ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ. ಅವರನ್ನು ಏನು ಮಾಡುವುದಿಲ್ಲ ಅವರನ್ನು ಕೇಳುವವರು ಇಲ್ಲ ಹೇಳುವವರಿಲ್ಲ ಎಂಬ ಧೈರ್ಯ ಅವರಿಗಿದೆ ನಾವು ಆಡಿದ್ದೇ ಆಟ ಎಂಬಂತಾಗಿದೆ ಇನ್ನು ಗೋಮಾಂಸ ಸಂಘಪರಿವಾರದ ಭಯೋತ್ಪಾದಕರ ದಾಳಿ ಈಗೀಗ ಹೆಚ್ಚುತ್ತಲೇ ಇದೆ, ಅವರಿಗೆ ಕಾನೂನಿನ ಭಯವಿಲ್ಲ ಬಜಪೆ ಪೊಲೀಸ್ […]
ಯೇಸು ಕ್ರಿಸ್ತರ ದೈವದರ್ಶನ ಮಹೋತ್ಸವದ (ಎಪಿಫನಿ) ಪ್ರಯುಕ್ತ ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಭಾನುವಾರ ಜನವರಿ 4, 2026 ರಂದು ವಾರ್ಷಿಕ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು.
ನಾಯಿಗಳ ವಿಚಾರಕ್ಕೆ ಸಂಬಂಧಿಸಿ ನ.7ರಂದು ಸುಪ್ರೀಂ ಕೋರ್ಟ್ ಹೊರಡಿಸಿದ ಮಧ್ಯಂತರ ತೀರ್ಪನ್ನು ವಿರೋಧಿಸಿ
ಪರಿಸರದ ನೈರ್ಮಲ್ಯದ ಹೊಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕು. ಎಲ್ಲರ ಜವಾಬ್ದಾರಿಯುತ ಭಾಗೀದಾರಿಕೆಯಿಂದ ಇದು ಸಾಕಾರವಾಗಬೇಕು. ಈ ನಿಟ್ಟಿನಲ್ಲಿ ವಿಶ್ವಕರ್ಮ ಬ್ಯಾಂಕ್ ಹಮ್ಮಿಕೊಂಡಿರುವ ಸ್ವಚ್ಛತಾ ಶ್ರಮದಾನ ಕಾರ್ಯ
ಮಂಗಳೂರು: ಬೋಂದೆಲ್ನ ಸೇಂಟ್ ಲಾರೆನ್ಸ್ ದೇಗುಲ ಮತ್ತು ಚರ್ಚ್ನ ಪ್ಯಾರಿಷ್ ಧರ್ಮಗುರು ಫಾದರ್ ಆಂಡ್ರ್ಯೂ ಲಿಯೋ ಡಿ’ಸೋಜಾ ಅವರು ಜನವರಿ 1 ರಂದು ಕಾರು ಅಪಘಾತಕ್ಕೀಡಾಗಿದ್ದರೂ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಫಾದರ್ ಡಿ’ಸೋಜಾ ಅವರು ತಮ್ಮ ನಿವಾಸದಲ್ಲಿ ನಡೆದ ಹೊಸ ವರ್ಷದ ಕೂಟದಲ್ಲಿ ಭಾಗವಹಿಸಿದ ನಂತರ ತಮ್ಮ ಹುಟ್ಟೂರು ನೀರುಡೆಯಿಂದ ಬೊಂದೆಲ್ ಚರ್ಚ್ಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮರಕಡ ಮೂಲಕ ಹಾದುಹೋಗುವಾಗ ಅವರ ಕಾರಿನ ಒಂದು ಟೈರ್ ಸ್ಫೋಟಗೊಂಡು ವಾಹನ ನಿಯಂತ್ರಣ ತಪ್ಪಿದೆ ಎಂದು ವರದಿಯಾಗಿದೆ. […]
ದಕ್ಷಿಣ ಕನ್ನಡ ಜಿಲ್ಲೆಯ ಕೋಳಿ ಅಂಕ ನಿಷೇಧ ವಿವಾದದ ಕುರಿತು ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್ ಅವರು, ‘ಕೋಳಿ ಅಂಕದಲ್ಲಿ ಜೂಜು ನಡೆಯುತ್ತದೆ ಎಂಬುದು ಪೊಲೀಸ್ ಇಲಾಖೆಯ ಆರೋಪ ಎಂದರು.
ಮಂಗಳೂರು : ಸಿಎಂ ಆಗ್ಲಿಕ್ಕೆ ಅರ್ಜೆಂಟ್ ಇಲ್ಲ. ಅದಕ್ಕಿನ್ನೂ 20 ವರ್ಷ ಕಾಲಾವಕಾಶ ಇದೆ. ಕ್ಷೇತ್ರದ ಮತದಾರರು ಇನ್ನೂ ನಾಲ್ಕು ಸಲ ಗೆಲ್ಲಿಸಿ ಕಳುಹಿಸಿದರೆ, ಆಮೇಲೆ ನೋಡುವ ಎಂದು ಸ್ಪೀಕರ್ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಹುದ್ದೆಗೆ ತಾವೂ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ, ‘ಅದಕ್ಕೆ ತರಾತುರಿ ಇಲ್ಲ. ಅದಕ್ಕಿನ್ನೂ 20 ವರ್ಷ ಕಾಲಾವಕಾಶ ಇದೆ ಎಂದರು. ಬಳ್ಳಾರಿ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಶಾಸಕರು ಸಿನಿಮೀಯ ಶೈಲಿಯಲ್ಲಿ ಪರಸ್ಪರ ಕಚ್ಚಾಡುವುದು, ರಾಜಕೀಯ ದ್ವೇಷ ಸಾಧಿಸುವುದು […]
ಪ್ರಥಮ ಬಾರಿಗೆ ಪರ್ಯಾಯ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಉಡುಪಿಯ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥರು ಜ.4ರಂದು ಸಂಜೆ 4 ಗಂಟೆಗೆ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ರಾಜಾಂಗಣದಲ್ಲಿ ಮಂಗಳೂರಿಗೆ ಪುರ ಪ್ರವೇಶ ಮಾಡಲಿರುವರು.
ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನಿಗೆ ತರಾಟೆ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪ ನಡೆದಿದೆ.