Showing 20 of 3816 posts • Page 8 of 191
ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಕ್ಷ (ಬಿಜೆಪಿ) ಆರ್ಥಿಕ ಪ್ರಕೋಷ್ಟದ ಸಂಚಾಲಕರಾಗಿ ಚಾರ್ಟರ್ಡ್ ಅಕೌಂಟೆಂಟ್ ಸಿ.ಎ. ಎಸ್.ಎಸ್. ನಾಯಕ್ ಅವರನ್ನು ನೇಮಕ ಮಾಡಲಾಗಿದೆ.
ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಿಸುತ್ತಿದ್ದ ಸಹೋದರರಿಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳದ ಮಂಚಿ ಗ್ರಾಮದ ಪಂಜಾಲಕ್ರಾಸ್ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ದ.ಕ., ಉಡುಪಿ, ಉ.ಕ., ಚಿಕ್ಕಮಗಳೂರು, ಕೊಡಗು ಜಿಲ್ಲೆಗಳನ್ನು ಒಳಗೊಂಡು ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಹಾಗೂ ಖಾಯಂ ಪೀಠ ಸ್ಥಾಪಿಸಬೇಕೆಂಬ ಹಲವು ವರ್ಷಗಳ ಬೇಡಿಕೆಯು ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಿಗೆ ಮನವರಿಕೆಯಾಗಿದ್ದು, ಅವರು ಸ್ಥಳ ಪರಿಶೀಲನೆಗೆ ಒಪ್ಪಿಕೊಂಡಿದ್ದಾರೆ. ಶೀಘ್ರವೇ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.
ಈಗಾಗಲೇ ಸರ್ಕಾರದ ಒಳ ಮೀಸಲಾತಿಯ ಬಗ್ಗೆ ರಾಜ್ಯದಲ್ಲಿ ಸುಮಾರು 101 ಜಾತಿಯ ಪರ ಮೀಸಲಾತಿಯಲ್ಲಿ ಸರ್ಕಾರ ದೊಡ್ಡ ಧೋರಣೆಯನ್ನು ಮಾಡಿದೆ.
ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮೇ 1 ವಿಶ್ವ ಕಾರ್ಮಿಕರ ದಿನದ ಪ್ರಯುಕ್ತ ಮಂಗಳೂರಿನ ಪೌರ ಕಾರ್ಮಿಕರಿಗೆ ಕಾಯಕ ಗೌರವ ಕಾರ್ಯಕ್ರಮ ಪಂಪ್ವೆಲ್ ನಡೆಯಿತು.
ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪರವರ ಸಮಾಜ ಸೇವೆಯ 50 ವರ್ಷ ಆಚರಣೆಯನ್ನು ಪಕ್ಷವು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ‘ಬಿ.ಎಸ್.ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಪುತ್ತೂರಿನಲ್ಲಿ ಕೃಷ್ಣ ರಾವ್ ಎಂಬಾತ ಪ್ರೇಮ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷವು ಕೃಷ್ಣ ರಾವ್ ತಂದೆ ಜಗನ್ನಿವಾಸ ರಾವ್ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪುನರುಚ್ಚರಿಸಿದ್ದಾರೆ.
ನಮ್ಮದು ಹಿಂದುತ್ವದ ಪಕ್ಷ ಕರ್ನಾಟಕ, ಕರಾವಳಿ, ಕೇರಳ ಅಂತೇನಿಲ್ಲ: ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್
“ಬಿಎಸ್ ವೈ ಅಭಿಮಾನೋತ್ಸವ’ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು, ಜಿಲ್ಲೆಯಿಂದ 5 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪರಿಷತ್ ಸದಸ್ಯ ಕಿಶೋರ್ಕುಮಾರ್ತಿಳಿಸಿದರು.
ರಾಜ್ಯ ಸರಕಾರ ಆಡಳಿತ, ಅಭಿವೃದ್ಧಿ ಯೋಜನೆ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದೇ ಚರ್ಚೆ ಯಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್ಮೆಂಟ್ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಸುಪ್ರಸಿದ್ಧ ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ 2026-27ನೇ ಸಾಲಿನ ಆಡಳಿತ ಸಮಿತಿಗೆ ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.) ವತಿಯಿಂದ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದ್ದು, ಸಮಿತಿಯು ಕ್ಷೇತ್ರವನ್ನು ಮುನ್ನಡೆಸಲು ಸನ್ನದ್ಧವಾಗಿದೆ ಎಂದು ಸಮಿತಿಯ ನೂತನ ಕಾರ್ಯದರ್ಶಿ ರವಿಶಂಕರ್ ಮಿಜಾರ್ ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ರವರ ನೇತೃತ್ವದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಪರಿಷತ್, ಬಸ್ ನೌಕರರ ಸಂಘ ಹಾಗೂ ಆಟೋ ರಿಕ್ಷಾ ಚಾಲಕ-ಮಾಲೀಕರ ಸಂಘದ ವತಿಯಿಂದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಮಂಗಳೂರಿನ ಹಂಪನಕಟ್ಟೆಯ ತಾಜ್ ಮಹಲ್ ಎದುರಿನ ರಿಕ್ಷಾ ನಿಲ್ದಾಣದ ಬಳಿ ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರಮಜೀವಿ ಕಾರ್ಮಿಕರ ಪರಿಶ್ರಮದಿಂದ ಜಗತ್ತು ಬೆಳೆದು ನಿಂತಿದೆ ಕಾರ್ಮಿಕರಿಲ್ಲದೆ ಸಮಾಜದ ಚಕ್ರ ತಿರುಗದು ಎಂದು ಬಂದರು ಶ್ರಮಿಕರ ಸಂಘದ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಹೇಳಿದರು.
ನಗರದಲ್ಲಿ ನೇತ್ರಾವತಿ ನದಿ ನೀರಿನ ಒಳಹರಿವು ಈಗಾಗಲೇ ನಿಂತಿದ್ದು, ಬಿರು ಬಿಸಿಲಿನಿಂದಾಗಿ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ.
ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಬುಧವಾರ ಸಂಭವಿಸಿದೆ. ಬೈಕ್ನ ಹಿಂಬದಿ ಸವಾರರಾಗಿದ್ದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಮಹಿಳಾ ವಾಲಿಬಾಲ್ ತಂಡವು 2026 ಏಪ್ರಿಲ್ 27 ಮತ್ತು 28 ರಂದು ಆದ್ಯಾರ್ನ ಎಸ್ಸಿಇಎಂನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ವಾಲಿಬಾಲ್ ಟೂರ್ನಮೆಂಟ್ನಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಮೆಸ್ಕಾಂನ ಸರ್ವರ್ ಹಾಗೂ N-SOIT ನ ತೀವ್ರ ಸಮಸ್ಯೆಯಿಂದಾಗಿ ಹೊಸದಾಗಿ ನಿರ್ಮಾಣಗೊಂಡ ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವ ಗ್ರಾಹಕರು, ಜನಸಾಮಾನ್ಯರು ಹಾಗೂ ವಿದ್ಯುತ್ ಗುತ್ತಿಗೆದಾರರು ತೀವ್ರ ಸಂಕಷ್ಟದಲ್ಲಿದ್ದು, ಸ