Showing 20 of 4106 posts • Page 9 of 206
ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಪಿ.ಎ. ಕಾಲೇಜಿನ ಬಸ್ ನಾಟೆಕಲ್ ತಿರುವಿನಲ್ಲಿ ದ್ವಿಚಕ್ರ ವಾಹನವನ್ನು ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ನಡೆದಿದೆ.
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ವಿಟ್ಲ ಸಮೀಪದ ಮಂಗಿಲಪದವಿನಲ್ಲಿ ನಡೆದಿದೆ.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪತ್ರಿಕಾಗೋಷ್ಠಿ ನಡೆಸಿದರು. ಒಟ್ಟು ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ಭ್ರಷ್ಟಚಾರ ವಾಗಿದೆ.
ಶ್ರೀ ಕ್ಷೇತ್ರ ಕಟೀಲು ದೇವಾಲಯದಲ್ಲಿ ನಡೆದ ತುಳುವರ್ಲ್ಡ್ ಫೌಂಡೇಶನ್ನ ಆಡಳಿತ ಮಂಡಳಿ ಸಭೆಯಲ್ಲಿ 2026–27ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಭಾನುಮತಿ ಶೆಟ್ಟಿ ಕಕ್ವಗುತ್ತು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ವಸಂತ ರೈ ಕುತ್ತೆತ್ತೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ನಿಷೇಧಿತ ಮಾದಕವಸ್ತು ಎಂಡಿಎಂಎಯನ್ನು ಕುಳಾಯಿ ಗುಡ್ಡೆ ಪರಿಸರದ ಮನೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಆರೋಪಿ ಹೊಸಬೆಟ್ಟು ಕುಳಾಯಿಯ ಅಣ್ಣಪ್ಪ ಸ್ವಾಮಿ ಯಾನೆ ಮನು (26) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಂಜಾನೆ ಸುಲ್ಕೇರಿ ಗ್ರಾಮದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಾರುತಿ ಸುಜುಕಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.
ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಲು ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಿದಾಗ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ತಿಳಿಸಿದ್ದಾರೆ.
ಧರ್ಮಸ್ಥಳದ ಸನ್ನಿಧಿ ಗೆಸ್ಟ್ ಹೌಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸುದ್ದಿಗೋಷ್ಟಿ ನಡೆಸಿ ಕಳೆದ ಮೂರ್ನಾಲ್ಕು ದಿನಗಳ ಕಾಲ ದೆಹಲಿಯಲ್ಲಿ ರಾಷ್ಟ್ರೀಯ ನಾಯಕರ ಭೇಟಿ ಮಾಡಿದ್ದೇನೆ. ದೆಹಲಿಯಿಂದ ನೇರವಾಗಿ ಧರ್ಮಸ್ಥಳ ಬಂದು ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದೇನೆ. ಮಂಜುನಾಥೇಶ್ವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ. ರಾಜ್ಯದಲ್ಲಿ ಭೀಕರ ಬರಗಾಲದ ಸನ್ನಿವೇಶ ಇದೆ, ಅದು ಸರಿಯಾಗಬೇಕು ಎಂದರು.
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದಲ್ಲಿ ಜೂನ್ 23 ರಂದು ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಬಳಿಕ ಆಕೆ ಗರ್ಭಿಣಿಯಾಗಿ ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡಿರುವ ಪ್ರಕರಣದಲ್ಲಿ ಡ್ರಗ್ಸ್ ಕೂಡಾ ಕೆಲಸ ಮಾಡಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ.
ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA)ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಮಾದಕ ವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಿಲ್ಲವ ಅಭಿವೃದ್ಧಿ ನಿಗಮಕ್ಕೆ ಐನೂರು ಕೋಟಿ ಅನುದಾನವನ್ನು ನೀಡುವುದಾಗಿ ಈಗಿನ ಸರ್ಕಾರ ಭರವಸೆ ನೀಡಿದರೂ ಚಿಕ್ಕಾಸೂ ನೀಡಿಲ್ಲ, ಈ ಸರ್ಕಾರದ ನಡೆಯನ್ನು ಕಳೆದ ಮೂರು ವರ್ಷಗಳಿಂದ ನೋಡಿದ್ದು, ನೀಡಿದ ಭರವಸೆ ಈಡೇರಿಕೆಗಾಗಿ ಕಾದಿದ್ದೇವೆ. ಇನ್ನೂ ಭರವಸೆ ಈಡೇರದಿದ್ದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಎಚ್ಚರಿಸಿದೆ.
ಕಳವು ಪ್ರಕರಣದಲ್ಲಿ ಸುಮಾರು ಒಂದು ದಶಕದಿಂದ ತಲೆಮರೆಸಿಕೊಂಡು ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ತನ್ನ ಶತಮಾನೋತ್ಸವದ ಪಯಣದಲ್ಲಿಯೂ ಅನೇಕ ಟೀಕೆ, ಪ್ರಶ್ನೆಗಳು ಹಾಗೂ ಎರಡು ಬಾರಿ ನಿಷೇಧದಂತಹ ಸವಾಲುಗಳನ್ನು ಎದುರಿಸಿದ್ದರೂ, ತನ್ನ ಕಾರ್ಯಸೂಚಿಗಳನ್ನು ಮುಂದುವರಿಸಿಕೊಂಡು ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ ಎಂದು ಹಿಂದೂ ಸಂಘಟನೆಯ ನಾಯಕ ಸತ್ಯಜಿತ್ ಸುರತ್ಕಲ್ ಹೇಳಿದರು.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಇದೀಗ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಸಚಿವ ಯು ಟಿ ಖಾದರ್ ಅವರಿಗೆ 4 ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.
ಮುಡಿಪು ಎಂಬಲ್ಲಿ ವೃದ್ಧ ಓರ್ವರು ಮುಖ್ಯ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗೋ ಸಂದರ್ಭ ಆಟೋ ಒಂದು ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗೋ ವೃದ್ಧ ಮೇಲೆ ಬಿದ್ದ ಪರಿಣಾಮ ಗಂಭೀರ ಗಾಯವಾಗಿದ್ದು , ಆಟೋ ಚಾಲಕನಿಗೂ ಗಾಯವಾದ ಬಗ್ಗೆ ವರದಿಯಾಗಿದೆ.
ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿ ಪರಿಷತ್ತಿನ 2026–27ನೇ ಸಾಲಿನ ಉದ್ಘಾಟನಾ ಸಮಾರಂಭವು 24ನೇ ಮೇ 2026ರಂದು ದೇರಳಕಟ್ಟೆಯ ಫಾದರ್ ಮುಲ್ಲರ್ ಆಡಿಟೋರಿಯಂನಲ್ಲಿ ನೆರವೇರಿತು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ವಿಶೇಷವಾಗಿ S.C.S ಆಸ್ಪತ್ರೆಯ ಸಿಬ್ಬಂದಿಗಳಿಗೆ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರಿಂದ ಯೋಗ ತರಬೇತಿಯನ್ನು ನೀಡಲಾಯಿತು.
ಬಸ್ಸು ಚಲಿಸುತ್ತಿದ್ದಾಗಲೇ ಚಾಲಕನಿಗೆ ಬಿಪಿ ಲೋ ಆದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಡಿವೈಡರ್ ಏರಿ ನಿಂತಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಗ್ಗೆ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಮುಂಭಾಗ ನಡೆದಿದೆ.
ಮಾಂಡ್ ಸೊಭಾಣ್ ಮತ್ತು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಆಯೋಜಿಸಿದ ರಾಜ್ಯ ಮಟ್ಟದ ಶಿಲ್ಪಕಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಶಕ್ತಿನಗರ ಕಲಾಂಗಣದಲ್ಲಿ ಜೂನ್ 26 ರಂದು 4.30 ಗಂಟೆಗೆ ನಡೆಯಲಿದೆ.