Showing 20 of 2145 posts • Page 1 of 108
“ಬೆಕ್ಕಿಗೆ ಚೆಲ್ಲಾಟ.. ಇಲಿಗೆ ಪ್ರಾಣ ಸಂಕಟ” ಎಂಬ ಗಾದೆ ಮಾತು ನಂಜನಗೂಡಿನ ಡಿ. ದೇವರಾಜ ಅರಸು ಸೇತುವೆ ವಿಚಾರದಲ್ಲಿ ಅಕ್ಷರಶಃ ನಿಜವಾಗುತ್ತಿದೆ.
ಸಾರ್ವಜನಿಕರಿಗೆ, ಹಾಸ್ಟೆಲ್ ಮಕ್ಕಳಿಗೆ ಕಿರಿಕಿರಿ ನೀಡುತ್ತಿರುವ ಕ್ರಷರ್ ಎಂ.ಸ್ಯಾಂಡ್ ಧೂಳು ಇದೀಗ ಕೆರೆಯನ್ನೂ ಆವರಿಸಿಕೊಳ್ಳುವ ಮೂಲಕ ಗ್ರಾಮಸ್ಥರ ನಿದ್ದೆ ಕೆಡಿಸುತ್ತಿದೆ.
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡಿನ ಪ್ರಸಿದ್ಧ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದಾರೆ
ಕಾಡಿನಿಂದ ನಾಡಿಗೆ ಬಂದ ಜಿಂಕೆಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ನಾಯಿಗಳ ದಾಳಿಯಿಂದ ಜಿಂಕೆಯನ್ನು ರಕ್ಷಿಸಲು ಮುಂದಾದ ವ್ಯಕ್ತಿಗೆ ಜಿಂಕೆಯ ಕೊಂಬು ಹೊಟ್ಟೆಗೆ ಚುಚ್ಚಿ ಗಂಭೀರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.
ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ ವ್ಯಕ್ತಿ ಬಿದ್ದಿದ್ದರೂ ಲೆಕ್ಕಿಸದೆ ಚಾಲನೆ ಮಾಡಿ ಕೊಲೆಗೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನಲೆ ಆರೋಪಿಗೆ ಮೈಸೂರು ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ದಂಡ ತಪ್ಪಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದಲ್ಲಿ ಭಕ್ತರ ಭಕ್ತಿಭಾವ ಮತ್ತೊಮ್ಮೆ ಸಾಬೀತಾಗಿದೆ. ಕೇವಲ 28 ದಿನಗಳಲ್ಲಿ ಭಕ್ತರು ಅರ್ಪಿಸಿದ ಕಾಣಿಕೆ ಬರೋಬ್ಬರಿ 99.04 ಲಕ್ಷ ತಲುಪಿದೆ.
ಹಸುಗಳನ್ನು ಕಟ್ಟಿದ್ದಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಆ. 15 ರಂದು ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಾಂಸ್ಕೃತಿಕ ನೃತ್ಯ ಸ್ಪರ್ಧೆಯಲ್ಲಿ ತೀರ್ಪುಗಾರರ ಆಯ್ಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ ನಂಜನಗೂಡು ತಾಲ್ಲೂಕು ಕಲಾವಿದರ ಒಕ್ಕೂಟವು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಆರ್.ಎಸ್.ಎಸ್ ಸಂಘ ಪರಿವಾರದವರು ಶುದ್ಧೀಕರಿಸಿ ಅಸ್ಪೃಶ್ಯತೆ ಆಚರಿಸಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಸಂಯೋಜಕ ಸಮಿತಿ ಮೈಸೂರು ಜಿಲ್ಲಾ ಘಟಕವು ಮೈಸೂರಿನಲ್ಲಿ ಪತ್ರಿಭಟನೆ ನಡೆಸಲಾಯಿತು.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2026 ದಸರಾದಲ್ಲಿ ವೈಭವ ಕಂಬಳ ಉತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ.
ಹೋಟೇಲ್ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ಕಾರ್ಯಾಚರಣೆ ನಡೆಸಿದರು. ಹೆಚ್. ಡಿ ಕೋಟೆ ಪಟ್ಟಣದ ಹೋಟೆಲ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೋಟೆಲ್ನ ಸ್ವಚ್ಛತೆ ಮತ್ತು ಆಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.
ಕನಿಷ್ಟ ವೇತನ ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸುವಂತೆ ಗ್ರಾಮ ಪಂಚಾಯ್ತಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಾನಸಿಕ ಅಸ್ವಸ್ಥತೆಯಿಂದಾಗಿ ಕುಟುಂಬದಿಂದ ದೂರವಾಗಿ, ಅನಿರೀಕ್ಷಿತ ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ಬಿಹಾರ ರಾಜ್ಯದ ವ್ಯಕ್ತಿಯೋರ್ವ ಸುಮಾರು ಎರಡೂವರೆ ವರ್ಷಗಳ ನಿರಂತರ ಚಿಕಿತ್ಸೆ ಮತ್ತು ಮಾನವೀಯ ಕಾಳಜಿಯ ಆರೈಕೆಯಿಂದಾಗಿ ಗುಣಮುಖರಾಗಿ ಬಳಿಕ ತನ್ನ ಕುಟುಂಬದ ಸದಸ್ಯರ ಮಡಿಲಿಗೆ ಮರಳಿರುವ ಹೃದಯಸ್ಪರ್ಶಿ ಘಟನೆ ನಂಜನಗೂಡಿನ ಕರುಣಾಲಯ ಅನಾಥರ ಆಶ್ರಯ ಧಾಮದಲ್ಲಿ ನಡೆದಿದೆ.
ನಂಜನಗೂಡು: ರಾಜ್ಯಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಸಗಣಿ-ಗಂಜಲದಿಂದ ಸ್ವಚ್ಛಗೊಳಿಸಿದ ಘಟನೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಕಾರ್ಯಕರ್ತರು ಸೋಮವಾರ ನಂಜನಗೂಡು ತಾಲ್ಲೂಕು ಆಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು. ಉತ್ತರಖಂಡದ ಹಾಲ್ದಾನಿಯ ರಾಮಲೀಲಾ ಮೈದಾನದಲ್ಲಿ ಖರ್ಗೆ ಅವರು ರ್ಯಾಲಿ ಉದ್ದೇಶಿಸಿ ಮಾತನಾಡಿದ ಬಳಿಕ, ಸಂಘ ಪರಿವಾರದ ಕೆಲವು ಕಾರ್ಯಕರ್ತರು ಆ ಸ್ಥಳವನ್ನು ಸಗಣಿ ಹಾಗೂ ಹಸುವಿನ ಗಂಜಲದಿಂದ ತೊಳೆದು ಸ್ವಚ್ಛಗೊಳಿಸಿದ್ದರು. ಈ ಅಮಾನವೀಯ […]
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನಂಜನಗೂಡು ತಾಲ್ಲೂಕು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ನಂಜನಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ಹಾಗೂ ಕೇರಳದಲ್ಲಿ ನಡೆದಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮೈಸೂರಿನಲ್ಲಿ ವಿನೂತನ ಪ್ರತಿಭಟನೆ ನಡೆಯಿತು.
ಕಾವೇರಿ ನೀರು ಬಿಡುಗಡೆ ಆದೇಶ ಧಿಕ್ಕರಿಸಿ ಕರೆ ನೀಡಿದ ಕರ್ನಾಟಕ ಬಂದ್ಗೆ ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿಲ್ಲ.
ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ಕರೆ ನೀಡಿದ ಹಿನ್ನಲೆ ಮೈಸೂರಿನಲ್ಲಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.