Showing 20 of 2200 posts • Page 1 of 110
ಟಿ.ನರಸೀಪುರದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಧಮ್ಕಿ ವಿಚಾರವಾಗಿ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಬಿಜೆಪಿ ನಾಯಕರು ಸಭೆಗೆ ತೆರಳಿದರು.
ಗೌರಿ–ಗಣೇಶ ಹಬ್ಬದ ಸಂಭ್ರಮ ಎಲ್ಲೆಡೆ ಮನೆಮಾಡಿದ್ದು, ನಂಜನಗೂಡಿನಲ್ಲಿ ಗಣೇಶ ಮೂರ್ತಿಗಳ ಖರೀದಿ ಭರಾಟೆ ಜೋರಾಗಿದೆ.
ಟಿ ನರಸೀಪುರ ಇನ್ಸ್ಪೆಕ್ಟರ್ ಧನಂಜಯ ಹೇಳಿಕೆ ವಿಚಾರವಾಗಿ ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಟ್ವಿಟ್ ಮಾಡಿದ್ದಾರೆ.
ಗಣೇಶ ಮೂರ್ತಿ ಹೊತ್ತು ತಿ.ನರಸೀಪುರದಲ್ಲಿ ಹಿಂದೂ ಕಾರ್ಯಕರ್ತರು ಬಿಜೆಪಿಗರ ಪ್ರತಿಭಟನೆ ನಡೆಸಲಾಯಿತು.
ತಿ.ನರಸೀಪುರದಲ್ಲಿ ಪ್ರತಾಪ್ ಸಿಂಹ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ತಾಲ್ಲೂಕು ಹೊಸಕಡಜೆಟ್ಟಿ ಗ್ರಾಮದ ಮಹಿಳೆ ಮಹದೇವಮ್ಮ ರವರ ಅನುಮಾನಾಸ್ಪದ ಸಾವಿಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆ ಮೃತಳ ಮಗಳಿಗೆ 4,12,500/- ರೂ ಮೊತ್ತದ ಚೆಕ್ ಪರಿಹಾರವಾಗಿ ವಿತರಿಸಿದೆ. ಇಲಾಖೆಯ ಅಧಿಕಾರಿ ಸಿದ್ದಲಿಂಗು ರವರು ಚೆಕ್ ಹಸ್ತಾಂತರಿಸಿದ್ದಾರೆ.
ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್, ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ!
ಈ ಬಾರಿ ದಸರಾದಲ್ಲಿ ಚಲನಚಿತ್ರೋತ್ಸವ ರದ್ದಾದ ಹಿನ್ನಲೆ ಚಿತ್ರಪ್ರೇಮಿಗಳಿಗೆ ನಿರಾಸೆಯಾಗಿದೆ. ದಸರಾದ ಅವಿಭಾಜ್ಯ ಸಾಂಸ್ಕೃತಿಕ ಅಂಗವಾಗಿದ್ದ ಚಲನಚಿತ್ರೋತ್ಸವ ಏಕಾಏಕಿ ಚಲನಚಿತ್ರೋತ್ಸವ ರದ್ದು ಮಾಡಿದ ಸರ್ಕಾರದ ನಿಲುವನ್ನ ಸಂಸದ ಯದುವೀರ್ ಟೀಕಿಸಿದ್ದಾರೆ.
ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ಬಾರಿ ಮೈಸೂರು ದಸರಾದಲ್ಲಿ ಸ್ಯಾಂಡಲ್ವುಡ್ ಸ್ಟಾರ್ಗಳ ಕಳೆ ಕಾಣಲಿದ್ದು, ದಸರಾಕ್ಕೆ ಬೆಳ್ಳಿ ಪರದೆಯ ಮೆರುಗು ಬರಲಿದೆ.
ಶಿಕ್ಷಣವೆಂಬುದು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಿಲ್ಲ.
ದೇವಿರಮ್ಮನಹಳ್ಳಿ ಕೆರೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮರುಜೀವ ಸಿಕ್ಕಿದೆ. ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ 949ನೇ ಕೆರೆಯಾಗಿ ಅಭಿವೃದ್ಧಿಪಡಿಸಿ ಗ್ರಾಮಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
2028ಕ್ಕೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ನಂಜನಗೂಡಿನಲ್ಲಿ ಮಾಜಿ ಶಾಸಕ ಬಿ.ಹರ್ಷವರ್ಧನ್ ಹೇಳಿಕೆ ನೀಡಿದ್ದಾರೆ.
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಕಡಜೆಟ್ಟಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕೊಲೆ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ರಾಜಿ ಮೂಲಕ ಮುಚ್ಚಿಹಾಕಲು ಯತ್ನಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದ್ದು, ತನ್ನ ಮಗನಿಗೋಸ್ಕರ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ನ ಹಿರಿಯ ಶಾಸಕರಿಗೆ ಸಚಿವ ಸ್ಥಾನ ತಪ್ಪಿಸಿದ್ದಾರೆ ಎಂದು ಮಾಜಿ ಎಂಎಲ್ʼಸಿ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರು ದಸರಾ ವೇಳೆ ಪ್ರಸ್ತಾವಿತ ಕಂಬಳ ಆಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ಹಲವು ಸಂಘಟನೆಗಳ ಸದಸ್ಯರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಧ್ಯಪ್ರವೇಶಿಸಿ ಈ ಪ್ರಸ್ತಾವನೆಯನ್ನು ವಿರೋಧಿಸಬೇಕು ಎಂದು ಆಗ್ರಹಿಸಿದ್ದಾರೆ. ನೀರಿನ ಕೊರತೆ, ಬರ ಪರಿಸ್ಥಿತಿ ಮತ್ತು ಪರಿಸರ ಹಾನಿಯ ಆತಂಕಗಳನ್ನು ಅವರು ಕಾರಣವಾಗಿ ನೀಡಿದ್ದಾರೆ.
ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಕಳೆದ ಮೂರು–ನಾಲ್ಕು ತಿಂಗಳಿಂದ ತೀವ್ರವಾಗಿರುವ ಕುಡಿಯುವ ನೀರಿನ ಸಮಸ್ಯೆ ಇದೀಗ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಮೈಸೂರಿನ ಸೆಂಟ್ ಫಿಲೋಮಿನಾ ಶಾಲೆಯಲ್ಲಿ ವಿದ್ಯಾರ್ಥಿಗೆ ಥಳಿಸಿದ ಆರೋಪ ಕೇಳಿ ಬಂದಿದ್ದು, ಶಿಕ್ಷಕ ಸುರೇಶ್ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕೊಡಗಿನಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ಆಗಸ್ಟ್ ಕೊನೆಯ ವಾರದಲ್ಲಿ ಒಳಹರಿವು ಹೆಚ್ಚಾಗಿತ್ತಾದರೂ, ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿಯೇ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಸರಾ ಗಜಪಡೆ ಬಿಡಾರಕ್ಕೆ ಯುವರಾಣಿ ತ್ರಿಷಿಕಾ ಕುಮಾರಿ ಭೇಟಿ ನೀಡಿದರು.