ಮೈಸೂರು: ಮತಗಳ್ಳತನ ಬಗ್ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರಿ ಬಸ್ ಗಳ ಮೇಲೆ STOP ಮತ ಕಳ್ಳತನ ಎಂಬ ಒಕ್ಕಣೆ ಇರುವ ಸ್ಟಿಕ್ಕರ್ ಗಳನ್ನ ನಿನ್ನೆ ಅಂಟಿಸಿ ಪ್ರತಿಭಟನೆ ನಡೆಸಲಾಗಿತ್ತು.
ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ರವರ ನೇತೃತ್ವದಲ್ಲಿ ಸ್ಟಿಕ್ಕರ್ ಅಂಟಿಸುವ ಕಾರ್ಯ ನಡೆದಿತ್ತು. ಕಾಂಗ್ರೆಸ್ ಕಾರ್ಯವನ್ನ ಖಂಡಿಸಿರುವ ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ಯರು ಇಂದು ಕೆಎಸ್ ಆರ್ ಟಿ ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದು ಸ್ಟಿಕ್ಕರ್ ಅಂಟಿಸಲು ಅನುಮತಿ ನೀಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

