ಮಂಡ್ಯ/ಮೈಸೂರು: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಕೃಷ್ಣರಾಜಸಾಗರ ಹಾಗೂ ಕಬಿನಿ ಜಲಾಶಯ ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎರಡೂ ಜಲಾಶಯಗಳಿಗೆ ಜುಲೈ 29ರಂದು ಸಿಎಂ ಸಿದ್ದರಾಮಯ್ಯ ಅವರು ತೆರಳಿ ಬಾಗಿನ ಅರ್ಪಿಸಲಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ 3ನೇ ಬಾರಿಗೆ ಬಾಗಿನ ಅರ್ಪಿಸುತ್ತಿದ್ದಾರೆ. ಸೋಮವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಮಂತ್ರಿಮಂಡಲದ ಅನೇಕರು ಭಾಗಿಯಾಗಲಿದ್ದಾರೆ.

ಮೈಸೂರಿನಿಂದ ಕೆಆರ್‌ಎಸ್‌ಗೆ ಸಿಎಂ ತೆರಳಲಿದ್ದು, ಪೂಜೆ ಮುಗಿಸಿ ಮಧ್ಯಾಹ್ನ 1.30ಕ್ಕೆ ನಿರ್ಗಮಿಸಲಿದ್ದಾರೆ. ಕೆಆರ್‌ಎಸ್ ಬಾಗಿನ ಕಾರ್ಯಕ್ರಮ‌ ಮುಗಿದ ನಂತರ ಕಬಿನಿ ಡ್ಯಾಂ ತೆರಳಿ ಬಾಗಿನ ಅರ್ಪಿಸಲಿದ್ದಾರೆ.