ನಂಜನಗೂಡು: ಅವೈಜ್ಞಾನಿಕ ಮೇಲ್ಸೇತುವೆ ಕಾಮಗಾರಿ ನಕ್ಷೆಯನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ನಗರದ ಆರ್ ಪಿ ರಸ್ತೆಯಲ್ಲಿ ಹಾದು ಹೋಗುವ ರೈಲ್ವೆ ಮೇಲ್ಸೇತುವೆ ಪರಿಶೀಲನೆಗೆ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಆಗಮಿಸುತ್ತಿದ್ದರು.
ಈ ಹಿನ್ನೆಲೆಯಲ್ಲಿ ಸಚಿವರು ವೀಕ್ಷಿಸಲು ಅಳವಡಿಸಿರುವ ಅವೈಜ್ಞಾನಿಕ ನಕ್ಷೆಯನ್ನು ತೆಗೆಯದಿದ್ದರೆ ಪ್ರತಿಭಟನೆಯ ಎಚ್ಚರಿಕೆಯನ್ನು ಸಂಘಟಕರು ನೀಡಿದರು. ಸಂಘಟಕರು ಮತ್ತು ಪಟ್ಟಣವಾಸಿಗಳ ಆಗ್ರಹಕ್ಕೆ ಬೆದರಿ ಅಳವಡಿಸಿದ ಅವೈಜ್ಞಾನಿಕ ಮೇಲ್ಸೇತುವೆಯ ನಕ್ಷೆಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ನಂಜನಗೂಡಿನ ಮೇಲ್ಸೇತುವೆ ಕಾಮಗಾರಿಯ ಗೊಂದಲಕ್ಕೆ ತೆರೆ ಎಳೆಯುವ ಸಲುವಾಗಿ ಭೇಟಿ ನೀಡಿದ್ದರು. ನಗರದ ಸಾರ್ವಜನಿಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ನೇರವಾಗಿ ರೈಲ್ವೆ ಮೇಲ್ಸೇತುವೆಯನ್ನು ನಿರ್ಮಾಣ ಮಾಡುವಂತೆ ಆಗ್ರಹಿಸಿದರು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

