ಮೈಸೂರು: ರಾಜ್ಯಪಾಲರ ವಿರುದ್ಧ ಮಾಜಿ ಶಾಸಕ ಎಂ ಕೆ ಸೋಮಶೇಖರ್ ನೇತೃತ್ವದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯಪಾಲರ ವಿರುದ್ಧ ಪ್ರತಿಭಟನಕಾರರು ದಿಕ್ಕಾರ ಕೂಗಿದರು. ರಾಜ್ಯಪಾಲರು ಸಂವಿಧಾನ ವಿರೋಧಿ ನಡೆ ಅನುಸರಿಸಿದ್ದಾರೆ.

ಇಡೀ ರಾಜ್ಯದ ಜನತೆಗೆ ಅಪಮಾನ ಮಾಡಿದ್ದಾರೆ. ರಾಜ್ಯಪಾಲರ ಹುದ್ದೆ ಮರೆತು ಬಿಜೆಪಿ ಕೈಗೊಂಬೆಯಾಗಿ ನಡೆದುಕೊಂಡಿದ್ದಾರೆ. ರಾಜ್ಯಪಾಲರ ನಡೆಯನ್ನ ನಾವು ಖಂಡಿಸುತ್ತೇವೆ. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ ಕೆ ಸೋಮಶೇಖರ್ ಹೇಳಿಕೆ ನೀಡಿದ್ದಾರೆ.