ಮೈಸೂರು: ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ. ಇದಕ್ಕೆಲ್ಲ ಸಿದ್ದರಾಮಯ್ಯ ಕಾರಣ. ನಾವು ಬೆಟ್ಟಕ್ಕೆ ಹೋಗುವುದಕ್ಕೂ ತಡೆ ಮಾಡ್ತಾ ಇದ್ದಾರೆ. ಸಂವಿಧಾನದಲ್ಲಿ ಪ್ರತಿಭಟನೆ ಮಾಡಲು ಹಕ್ಕಿದೆ ಎಂದರು.
ನಮ್ಮ ಹಕ್ಕನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡ್ತಿದೆ. ಭಾನು ಮುಸ್ತಾಕ್ ಕನ್ನಡದ ಬಗ್ಗೆ ಬಾವುಟದ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ಭಾನು ಮುಸ್ತಾಕ್ ಕ್ಷಮೆ ಕೇಳುವ ಗೋಜಿಗೂ ಹೋಗಲಿಲ್ಲ. ಅವರು ಕ್ಷಮೆ ಕೇಳಿದ್ರೆ ನಾವು ಚಾಮುಂಡಿ ಚಲೋ ಮಾಡುತ್ತಿರಲಿಲ್ಲ. ಪ್ರತಿಭಟನೆಗೆ ಅವಕಾಶ ಕೊಡದೆ ಧ್ವನಿ ಅಡಗಿಸುವ ಪ್ರಯತ್ನ ನಡೀತಿದೆ ಎಂದರು.
ಕಾಂಗ್ರೆಸ್ ಸರ್ಕಾರ ಬಂದಾಗ ಈ ರೀತಿಯ ಘಟನೆಗಳು ನಡೆಯುತ್ತೆ. ಸಿದ್ದರಾಮಯ್ಯ ಸಿಎಂ ಆಗಿ ಏಳುವರೆ ವರ್ಷ ಆಯ್ತು ಪೂರೈಸಿದ್ದಾರೆ. ನೆನಪಿಟ್ಟುಕೊಳ್ಳುವ ಒಂದು ಕೆಲಸ ಮಾಡಿಲ್ಲ, ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸಗಳು ನಿರಂತರವಾಗಿ ಆಗ್ತಿದೆ ಎಂದು ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಹರಿಹಾಯ್ದರು. ಕಾರ್ಯಕರ್ತರೊಂದಿಗೆ ಚಾಮುಂಡಿ ಚಲೋ ಗೆ ಬಂದ ಮಾಜಿ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

