Showing 20 of 1934 posts • Page 10 of 97
ಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ ಪಿಡಿಓ ಮಂಜುಳಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ. 25 ಸಾವಿರ ಲಂಚ ಪಡೆದು ಕಚೇರಿಯಲ್ಲೇ ಮಂಜುಳಾ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಕೆ.ಆರ್ ನಗರ ತಾಲ್ಲೂಕು ಆಡಳಿತದ ವಿರುದ್ಧ ರೈತರು ಕೆ.ಆರ್ ನಗರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟಿಸಿದರು.
ತಾಲ್ಲೂಕಿನಲ್ಲಿ ಚಿರತೆ ಆತಂಕ ಹೆಚ್ಚಾಗಿದ್ದು, ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನೆಹುಂಡಿ ಕೂಡ್ಲುರು ರಸ್ತೆ ಬಳಿ ಚಿರತೆ ಪ್ರತ್ಯಕ್ಷವಾಗಿದೆ.
ಮಗುವಿಗೆ ಜನ್ಮ ನೀಡಿ ಮಗುವನ್ನು ನದಿಗೆ ಎಸೆದಿರುವ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ.
ಮಾ.30 ರಂದು ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ನಂಜನಗೂಡಿನಲ್ಲಿ ಗರಳಪುರಿ ಉತ್ಸವವನ್ನು ಇದೆ ಮೊಟ್ಟ ಮೊದಲ ಬಾರಿಗೆ ಆಯೋಜಿಸಲಾಗಿದೆ.
ಬ್ಯಾಂಕ್ ಗಳಲ್ಲಿ ಖಾತೆದಾರರು ಉಳಿತಾಯ ಖಾತೆ ತೆರೆದಿದ್ದಾರೆ. ಆದರೆ, ಉಳಿತಾಯ ಮಾಡುತ್ತಿಲ್ಲ, ಇದರಿಂದ ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಹುಟ್ಟಿದ ಒಂದು ತಿಂಗಳ ಮಗುವಿಗೂ ಬ್ಯಾಂಕ್ ಖಾತೆ ತೆರೆಯಲಾಗುತ್ತಿದೆ ಎಂದು ತಗಡೂರು ಭಾರತೀಯ ಸ್ಟೇಟ್ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಕೆ.ಆರ್ ಶ್ಯಾಮ್ ಸುಂದರ್ ತಿಳಿಸಿದರು.
ಮೈಸೂರು ಅಭಿವೃದ್ದಿ ಪ್ರಾಧಿಕಾರ ವಿಶೇಷ ಭೂಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ರವರನ್ನ ವರ್ಗಾವಣೆ ಮಾಡಲಾಗಿದೆ. ಭ್ರಷ್ಟಾಚಾರ ನಿಗೃಹ ದಳದಲ್ಲಿ ಶೃತಿ ರವರು ಕ್ರಿಮಿನಲ್ ಸ್ವರೂಪದ ಅಪರಾಧ ಪ್ರಕರಣ ಎದುರಿಸುತ್ತಿದ್ದು ಇಲಾಖಾ ವಿಚಾರಣೆ ನಡೆಯುತ್ತಿರುವ ಹಿನ್ನಲೆ ಮಾತೃ ಇಲಾಖೆಯಾದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯಕ್ಕೆ ಹಿಂದಿರುಗುವಂತೆ ಸರ್ಕಾರ ಆದೇಶಿಸಿತ್ತು.
ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಮಧ್ಯೆ ರಾತ್ರಿ ಶ್ರೀ ಮಹದೇಶ್ವರಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿದೆ. ನಡುರಾತ್ರಿಯಲ್ಲೇ ರಥವನ್ನು ಗ್ರಾಮಸ್ಥರು ಪುನೀತರಾದರು. ಎರಡು ದಿನಗಳ ಕಾಲ ನಡೆಯುವ ಚುಂಚನಹಳ್ಳಿ ಶ್ರೀ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಸೋಮವಾರ ಮಧ್ಯರಾತ್ರಿ 12 ಗಂಟೆಯಲ್ಲಿ ಶ್ರೀ ಮಹದೇಶ್ವರ ಸ್ವಾಮಿಯ ರಥೋತ್ಸವವು ವಿಜೃಂಭಣೆಯಿಂದ ನಡೆದಿದೆ.
ಗಮನ ಬೇರೆಡೆ ಸೆಳೆದು ವೃದ್ದೆಯ 40 ಗ್ರಾಂ ಮಾಂಗಲ್ಯ ಸರ ಲಪಟಾಯಿಸಿದ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರು: ಮುಡಾ ಇದೀಗ ಎಂಡಿಎ ಹಗರಣಗಳು ಸಾಕಷ್ಟು ಬಯಲಿಗೆ ಬಂದಿದೆ. ಹಗರಣಗಳಿಂದ ಬೇಸತ್ತ ಸರ್ಕಾರ ಮುಡಾ ಗೆ ಮೇಜರ್ ಸರ್ಜರಿ ಮಾಡಿ ಮೈಸೂರು ಅಭಿವೃದ್ದಿ ಪ್ರಾಧಿಕಾರ ಎಂದು ಬದಲಿಸಿದೆ. ಹೀಗಿದ್ದರೂ ಇನ್ನೂ ಅಧಿಕಾರಿಗಳಾಗಲಿ ಕಾನೂನು ಶಾಖೆಯಾಗಲಿ ಎಚ್ಚೆತ್ತುಕೊಂಡಿಲ್ಲ. ಭ್ರಷ್ಟ ಅಧಿಕಾರಿಯ ಪರ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಸರ್ಕಾರದ ಕೆಂಗಣ್ಣಿಗೂ ಗುರಿಯಾಗಿದೆ. ಅಮಾನತಿನಲ್ಲಿರುವ ವಿಶೇಷ ತಹಸೀಲ್ದಾರ್ ಪರ ನಿಂತ ಪ್ರಾಧಿಕಾರಕ್ಕೆ ಸರ್ಕಾರ ಚಾಟಿ ಬೀಸಿ ಬಿಸಿ ಮುಟ್ಟಿಸಿದೆ. ಭ್ರಷ್ಟ ಅಧಿಕಾರಿ ನಡೆಸಿದ ಅಕ್ರಮದ ಬಗ್ಗೆ ದಾಖಲೆಗಳ ಸಮೇತ […]
ಬೇಸಿಗೆ ಬೆನ್ನಲ್ಲೇ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ನೀರಿನ ಕೊರತೆಗೆ ಅವಕಾಶ ನೀಡಬಾರದೆಂದು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದರೂ ಅಭಾವ ಶುರುವಾಗಿದೆ. ಕೆ.ಆರ್.ನಗರ ಪುರಸಭೆ 6 ನೇ ವಾರ್ಡ್ ಅರ್ಕೇಶ್ವರ ನಗರದಲ್ಲಿ ಕಳೆದ 6 ತಿಂಗಳಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆತಿಲ್ಲ.
ಕಳೆದ 10 ದಿನಗಳ ಹಿಂದೆ ನಗರದ ಬೇಕರಿಯೊಂದರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರನೊಬ್ಬನನ್ನು ನಂಜನಗೂಡು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
2025-26ನೇ ಸಾಲಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಬಜೆಟ್ ಜಿಲ್ಲಾಧಿಕಾರಿ, ಮೂಡ ಅಧ್ಯಕ್ಷ ಲಕ್ಷ್ಮಿಕಾಂತ ರೆಡ್ಡಿ ನೇತೃತ್ವದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಮಂಡನೆ ಮಾಡಲಾಯಿತು.
ವಾತ್ಸಲ್ಯ ಯೋಜನೆಯಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ನಿರ್ಗತಿಕ ಮಹಿಳೆಗೆ ಸೂರು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ .
ನಗರದ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಸಮೀಪವಿರುವ ಹೆಜ್ಜಿಗೆ ಗ್ರಾಮದ ಬಳಿಯ ಕಪಿಲಾ ನದಿ ತೀರದಲ್ಲಿ ದಶಕಗಳಿಂದ ಬೆಳೆದ ನಿಂತಿದ್ದ ಬೃಹತ್ ಮರಗಳನ್ನು ಕಡಿದು ಹಾಕುತ್ತಿದ್ದರೂ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದು, ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಖದೀಮರನ್ನು ಕವಲಂದೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳವು ಮಾಡಿದ್ದ 2.28 ಲಕ್ಷ ನಗದು ಹಾಗೂ 22 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸುರಕ್ಷತಾ ಪರಿಕರಗಳನ್ನ ಧರಿಸದೆ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ಮಾಡುವಂತಿಲ್ಲ. ಪೌರಕಾರ್ಮಿಕರ ಸುರಕ್ಷತೆಗಾಗಿ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನ ಜಾರಿಗೊಳಿಸಿದೆ. ಆದ್ರೆ ನಂಜನಗೂಡಿನಲ್ಲಿ ಪೌರಕಾರ್ಮಿಕರಿಗೆ ಇರುವ ಸುರಕ್ಷತಾ ಕ್ರಮ ಮಾಯವಾಗಿದೆ.
ಕರ್ನಾಟಕ ರಾಜ್ಯ ರೈತ ಸಂಘಕ್ಕೆ ನಂಜನಗೂಡಿನಲ್ಲಿ ನೂತನವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಂಜನಗೂಡು ನಗರದ ಎಪಿಎಂಸಿ ಆವರಣದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಹೆಜ್ಜಿಗೆ ಪ್ರಕಾಶ್ ರವರ ನೇತೃತ್ವದಲ್ಲಿ ಸರಗೂರು, ಹೆಚ್. ಡಿ ಕೋಟೆ ಮತ್ತು ನಂಜನಗೂಡು ಸಂಘದ ನೂತನ ಪದಾಧಿಕಾರಿಗಳ ಮೂಲಕ ಸಂಘಟನೆಗೆ ಕಾಲಿಟ್ಟರು.
ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ 22 ಲಕ್ಷ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಿಜಯನಗರದ ನಿವಾಸಿ ವೃತ್ತಿಯಲ್ಲಿ ವೈದ್ಯರಾದ ಕಂಠೇಶ್ ಕೆ ಕಟ್ಟಿ ಎಂಬುವರೇ ವಂಚನೆಗೆ ಒಳಗಾದವರು.