Showing 20 of 1933 posts • Page 11 of 97
ವೈದ್ಯೆಯೊಬ್ಬರು ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಮಸ್ಯೆ ಉಲ್ಭಣವಾಗಿ ರೋಗಿ ICU ದಾಖಲಾದ ಆರೋಪ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ. ಚಿಕಿತ್ಸೆ ನೀಡಿದ ಬಗ್ಗೆ ಮಾಹಿತಿ ನೀಡದೆ ಉಡಾಫೆ ವರ್ತನೆ ತೋರಿದ ವೈದ್ಯೆ ವಿರುದ್ದ ಕ್ರಮ ಕೈಗೊಳ್ಳುವಂತೆ ರೋಗಿ ಆರೋಗ್ಯಾಧಿಕಾರಿಗೆ ದೂರು ನೀಡಿದ್ದಾರೆ.
ಸಂಸದ ಸುನಿಲ್ ಬೋಸ್ ರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಲಾಯಿತು. ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ಚೌಹಳ್ಳಿ ಮಾದಾಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಸದ ಸುನಿಲ್ ಬೋಸ್ ಭೇಟಿ ನೀಡಿದರು.
ಚಂದ್ರ ಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡೇಶ್ವರಿ ದೇವರ ದರ್ಶನದಲ್ಲಿ ಬದಲಾವಣೆ ಮಾಡಲಾಗಿದೆ. ಗ್ರಹಣ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ದೇವಾಲಯ ಬಂದ್ ಮಾಡಲಾಗಿದೆ.
ಮಾರ್ಚ್ 06 ರಂದು ಬಜೆಟ್ ಮಂಡನೆ ಆಗುತ್ತಿದ್ದು, ನಮ್ಮ ನಂಜನಗೂಡು ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅನುದಾನವನ್ನು ನೀಡುತ್ತಾರೆ ಎಂಬ ಭರವಸೆ ನನಗಿದೆ ಎಂದು ಶಾಸಕ ದರ್ಶನ್ ಧ್ರುವ ನಾರಾಯಣ್ ತಿಳಿಸಿದರು.
ಮಾರ್ಚ್ 03 ರಂದು ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೇವಾಲಯದಲ್ಲಿ ಗ್ರಹಣ ದಿನದಂದು ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಭಕ್ತರು ಎಂದಿನಂತೆ ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆಯಬಹುದಾಗಿದೆ.
ಒಳ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಬಲಗೈ ಸಂಬಂಧಿತ ಜಾತಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಬಲಗೈ ಜಾತಿ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಸ್ರೇಲ್ -ಇರಾನ್ ನಡುವಿನ ಯುದ್ಧದಲ್ಲಿ ಕನ್ನಡಿಗರ ರಕ್ಷಣೆ ವಿಚಾರವಾಗಿ ಮೈಸೂರಿನಲ್ಲಿ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿಕೆ ನೀಡಿದರು. ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.
ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ರೇಷ್ಮೆ ಮಾರುಕಟ್ಟೆಗೆ ಉಪಯೋಗಿಸಲ್ಪಟ್ಟ ಒಂದೂವರೆ ಎಕರೆ ಜಾಗವನ್ನು ಉದ್ಯಾನವನ ಬಳಸಲು ತೀರ್ಮಾನ ಮಾಡಿದ್ದೆವು. ಈಗ ಮತ್ತೆ ಆ ಆದೇಶವನ್ನ ಮರು ಪರಿಶೀಲನೆ ಮಾಡಿದ್ದೇವೆ ಎಂದು ಮೈಸೂರಿನಲ್ಲಿ ಡಾ. ಹೆಚ್ ಸಿ ಮಹದೇವಪ್ಪ ಹೇಳಿಕೆ ನೀಡಿದ್ದರು.
ತಂಬಾಕು ಮಂಡಳಿಯ ವತಿಯಿಂದ ಜನಪ್ರತಿನಿಧಿಗಳು ಮತ್ತು ತಂಬಾಕು ವರ್ತಕರೊಂದಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದಲ್ಲಿ ಸಭೆ ನಡೆಸಲಾಯಿತು.
ಹಳೇ ದ್ವೇಷ ಹಿನ್ನಲೆ ದ್ವಿತೀಯ ಪಿಯು ವಿದ್ಯಾರ್ಥಿನಿ ಭವಿಷ್ಯಕ್ಕೆ ಕುಟುಂಬವೊಂದು ತಣ್ಣೀರೆರೆಚಲು ಹುನ್ನಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಒಳ ಮೀಸಲಾತಿ ಗೊಂದಲ ವಿಚಾರವಾಗಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಪ್ರತಿಕ್ರಿಯೆ ನೀಡಿದರು.
ತೆಂಗಿನ ಗರಿಯೇ ಇವರಿಗೆ ಮೇಲ್ಚಾವಣಿ, ಕುಸಿದು ಬಿದ್ದಿರುವ ಮನೆ, ಬಿರುಕು ಬಿಟ್ಟ ಮಣ್ಣಿನ ಗೋಡೆಗಳು, ರಕ್ಷಣೆಗೆ ಮನೆ ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಆಸರೆ, ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವ ಬದುಕುತ್ತಿರುವ ಕುಟುಂಬಸ್ಥರ ಗೋಳು ಕೇಳುವವರೇ ಇಲ್ಲ.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕಳೆದ ಬಾರಿಗಿಂತ ಈ ಬಾರಿ ಆದಾಯದಲ್ಲಿ ಕುಸಿತ ಕಂಡಿದೆ. ದೇವಾಲಯದ ದಾಸೋಹ ಭವನದಲ್ಲಿ ಹುಂಡಿ ಎಣಿಕೆ ಕಾರ್ಯ ಮಾಡಲಾಗಿದ್ದು, ಒಂದೇ ತಿಂಗಳಿನಲ್ಲಿ 82 ಲಕ್ಷ ರೂ. ಕಾಣಿಕೆ ಬಂದಿದೆ.
ಕೆಸರು ಗದ್ದೆಗೆ ಇಳಿದ ಎನ್ಎಸ್ಎಸ್ ಶಿಬಿರಾರ್ಥಿಗಳು, ಭತ್ತದ ಪೈರು ನೆಟ್ಟು ನಾಟಿ ಮಾಡಿ, ಗ್ರಾಮಸ್ಥರ ಗಮನ ಸೆಳೆದಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿರುವ ಮೌಡ್ಯತೆಯನ್ನು ಹೋಗಲಾಡಿಸಲು ರಾಷ್ಟ್ರೀಯ ಸೇವಾ ಯೋಜನೆಯ, ಶಿಬಿರಗಳು ಅತ್ಯವಶ್ಯಕವಾಗಿವೆ ಎಂದು ವಿವಿ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ ತಿಮ್ಮಯ್ಯ ಅಭಿಪ್ರಾಯಪಟ್ಟರು.
ಸಂಬಂಧಿಕರೊಬ್ಬರ ಸಾವಿನ ಅಂತಿಮ ದರುಶನಕ್ಕೆ ತೆರಳುತ್ತಿದ್ದ ದಂಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರಂತ ಘಟನೆ ಕೆ.ಆರ್.ನಗರ ನಾರಾಯಣಪುರದ ಕೆಗ್ಗೆರೆ ಬಳಿ ನಡೆದಿದೆ.
ದಕ್ಷಿಣ ಕಾಶಿಯೆಂದೇ ಖ್ಯಾತಿಗಳಿಸಿರುವ ನಂಜುಂಡೇಶ್ವರಿಗೆ, ಒಂದೇ ತಿಂಗಳಿನಲ್ಲಿ 82 ಲಕ್ಷ ರೂ., ಕಾಣಿಕೆ ಬಂದಿದೆ.
ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಮೈಸೂರು ಮಹಾರಾಜ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಸಂಜೆ ಕಾಲೇಜು ವತಿಯಿಂದ ಏಳು ದಿನಗಳ ಕಾಲ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಬೊಕ್ಕಹಳ್ಳಿ ಮತ್ತು ಬೊಕ್ಕಹಳ್ಳಿ ಹೊಸೂರು ಗ್ರಾಮಸ್ಥರಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿಯಿಂದ ನೀಡುವ ಹಸಿ ಕಸ ಮತ್ತು ಒಣ ಕಸ ಹಾಕುವ ಬಕೆಟ್ ಗಳನ್ನು ವಿತರಿಸಿದರು.
ಶಾಲಾ ಮಕ್ಕಳಂತೆ ತಮ್ಮ ಕುತ್ತಿಗೆಗೆ ಟೈ ಧರಿಸಿಕೊಂಡು ಶಾಸಕ ದರ್ಶನ್ ಧ್ರುವನಾರಾಯಣ್ ಖುಷಿ ಪಟ್ಟಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ತಯಾರಿಸಿ ಬಿಸಿಯೂಟ ನೀಡುವ ಅಕ್ಷರ ದಾಸೋಹ ಕಾರ್ಯಕ್ರಮ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ಥಕ ಕಾರ್ಯಕ್ರಮವಾಗಿದೆ ಎಂದು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಬಿ.ಸೋಮಶೇಖರ್ ಹೇಳಿದರು.