Showing 20 of 1934 posts • Page 12 of 97
ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ತಯಾರಿಸಿ ಬಿಸಿಯೂಟ ನೀಡುವ ಅಕ್ಷರ ದಾಸೋಹ ಕಾರ್ಯಕ್ರಮ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ಥಕ ಕಾರ್ಯಕ್ರಮವಾಗಿದೆ ಎಂದು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಬಿ.ಸೋಮಶೇಖರ್ ಹೇಳಿದರು.
ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ವರ್ಷಗಳೇ ಉರುಳಿದರೂ ಚರಂಡಿಗಳು ಮಾತ್ರ ಸ್ವಚ್ಛತೆ ಕಾಣದೆ, ಗಬ್ಬೆದ್ದು ನಾರುತ್ತಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ನಿಮ್ಮ ನ್ಯೂಸ್ ಕರ್ನಾಟಕ ಸುದ್ದಿ ವಾಹಿನಿಯಲ್ಲಿ ವರದಿಯನ್ನು ಪ್ರಸಾರ ಮಾಡಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ನವಿಲೂರು ಗ್ರಾಮ ಪಂಚಾಯಿತಿ ಆಡಳಿತ ಚರಂಡಿಗಳನ್ನು ಸ್ವಚ್ಛತೆಗೊಳಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿಬಿ-ರಾಮ್-ಜಿ ಕಾಯ್ದೆ ರದ್ದು ಮಾಡುವುದು ಮಾತ್ರವಲ್ಲದೆ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ(ಮನರೇಗಾ) ಯೋಜನೆಯನ್ನು ಮರು ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪಾದಯಾತ್ರೆ ಮಾಡಲಾಯಿತು.
ಲವ್ ಮ್ಯಾಟರ್ ಹಿನ್ನಲೆ ಧ್ವೇಷ ಬೆಳೆಸಿಕೊಂಡ ಯುವಕನ ಕೊಲೆಗೆ ಮಾರಕಾಸ್ತ್ರಗಳ ಸಮೇತ ಬಂದಿದ್ದ ಗ್ಯಾಂಗ್ ಸ್ಕೆಚ್ ವಿಫಲವಾಗಿದೆ. ಪರಾರಿಯಾದ ಕೆಲವೇ ಗಂಟೆಗಳಲ್ಲಿ ಆಲನಹಳ್ಳಿ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿ ಕಂಬಿ ಎಣಿಸಲು ಕಳಿಸಿದ್ದಾರೆ.
ಮೊಬೈಲ್ ನಂಬರ್ ಕೊಡು ಇಲ್ಲಾಂದ್ರೆ ನಿನ್ನ ಗಂಡನ್ನ ಕೊಲೆ ಮಾಡ್ತೀನಿ ಎಂದು ಬೆದರಿಕೆ ಒಡ್ಡಿದ ರೋಮಿಯೋ ವಿರುದ್ದ ವಿಜಯನಗರ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಹಿನಕಲ್ ನ ದೇವರಾಜು ಎಂಬಾತನ ವಿರುದ್ದ ನೊಂದ ಗೃಹಿಣಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ವ್ಯಕ್ತಿ ಓಡಾಡುವ ರಸ್ತೆ ಒತ್ತುವರಿ ಮಾಡಿಕೊಂಡ ಪರಿಣಾಮ 25 ಕ್ಕೂ ಹೆಚ್ಚು ಕುಟುಂಬ ಅತಂತ್ರಕ್ಕೆ ಸಿಲುಕಿದೆ. ರಸ್ತೆ ಒತ್ತುವರಿ ತೆರುವುಗೊಳಿಸುವಂತೆ ನ್ಯಾಯಾಲಯ ಹಾಗೂ ತಹಶೀಲ್ದಾರ್ ಆದೇಶಿಸಿದ್ದರೂ ಸಡ್ಡು ಹೊಡೆದ ವ್ಯಕ್ತಿ ಬಂದ್ ಮಾಡುವ ಮೂಲಕ ನಿವಾಸಿಗಳಿಗೆ ಕಿರುಕುಳ ನೀಡುತ್ತಿರುವ ಪ್ರಕರಣವೊಂದು ನಂಜನಗೂಡಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಒಳಮೀಸಲಾತಿ ಪದ್ಧತಿಯು ಬಲಗೈ ಸಮುದಾಯದ ಮರಣ ಶಾಸನವಾಗಿದ್ದು ಇದನ್ನ ತಕ್ಷಣವೇ ಹಿಂಪಡೆಯಬೇಕು ಎಂದು ಡಾ.ನವೀನ್ ಮೌರ್ಯ ಒತ್ತಾಯಿಸಿದರು.
ಮಹಿಳೆಯರ ಮುಂದೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಶಿಕ್ಷಕನನ್ನು ಪ್ರಶ್ನೆ ಮಾಡಿದ ವ್ಯಕ್ತಿಯ ಜೊತೆ ಗಲಾಟೆ ನಡೆದು ಚಾಕುವಿನಿಂದ ಇರಿದ ಘಟನೆ ಸಾಲಿಗ್ರಾಮ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಬ್ಬೆದ್ದು ನಾರುತ್ತಿರುವ ಚರಂಡಿ ವ್ಯವಸ್ಥೆಗೆ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ವರ್ಷಗಳೇ ಉರುಳಿದರೂ ಚರಂಡಿಗಳು ಮಾತ್ರ ಸ್ವಚ್ಛತೆ ಕಾಣದೆ ದುರ್ನಾತ ಬೀರುತ್ತಿವೆ. ಗ್ರಾಮ ಪಂಚಾಯಿತಿ ಆಡಳಿತಕ್ಕೆ ಗ್ರಾಮಸ್ಥರು ಇಡೀ ಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನವಿಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಳಾರಹುಂಡಿ ಗ್ರಾಮದಲ್ಲಿ ಗ್ರಾಮಸ್ಥರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒತ್ತುವರಿಯಾಗಿರುವ ರಸ್ತೆ ತೆರುವುಗೊಳಿಸುವಂತೆ ಕುಟುಂಬವೊಂದು ಕಳೆದ ಮೂರು ವರ್ಷಗಳಿಂದ ತಾಲ್ಲೂಕು ಕಛೇರಿಗೆ ಅಲೆದಾಡುತ್ತಿರುವ ಪ್ರಕರಣ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.
ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ಕೊಟ್ಟಿದ್ದಾರೆ.
ಸಮಾಜಘಾತುಕ ಶಕ್ತಿಗಳ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಕ್ರಿಮಿನಲ್ ಆಕ್ಟಿವಿಟಿಗಳ ನಿಯಂತ್ರಣಕ್ಕೆ ಡ್ರೋಣ್ ನೆರವು ಪಡೆಯಲಾಗಿದೆ.ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಖಾಕಿ ಪಡೆ ವಿಶೇಷ ಕಾರ್ಯಾಚರಣೆಗೆ ಇಳಿದಿದೆ.
ತಂಬಾಕಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳೆಗಾರರಿಂದು ಚಿಲ್ಕುಂದ ಬೋರ್ಡ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಕಾರ್ಯಾಗಾರಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಒಳ ಮೀಸಲಾತಿ ವರದಿಯ ಸಮಸ್ಯೆಯೂ ಪೂರ್ಣವಾಗಿ ಬಗೆಹರಿವ ತನಕ ಪ್ರಸ್ತುತ ಶೈಕ್ಷಣಿಕ ವಲಯ ಮತ್ತು ಉದ್ಯೋಗಕ್ಕೆ ಅನ್ವಯಿಸುತ್ತಿರುವ ಒಳ ಮೀಸಲಾತಿಯ ಕಾರ್ಯ ಚಟುವಟಿಕೆಗಳನ್ನು ಶೀಘ್ರವೇ ತಡೆಯಾಜ್ಞೆ ನೀಡಬೇಕು ಎಂದು ಆಗ್ರಹಿಸಿ ನಂಜನಗೂಡಿನಲ್ಲಿ ಜನಸಂಗ್ರಾಮ ಪರಿಷತ್ ನಿಂದ ಮನವಿ ಸಲ್ಲಿಸಲಾಯಿತು.
ಹೊಸರಾಮನಹಳ್ಳಿ ದಂಡಮ್ಮದೇವಿ ಜಾತ್ರೆ ಹನ್ನೆರಡು ವರ್ಷಕ್ಕೊಮ್ಮೆ ನಡೆಯುತ್ತದೆ. ವಿಜೃಂಭಣೆಯಿಂದ ಹೊಸರಾಮನಹಳ್ಳಿ ದಂಡಮ್ಮ ಜಾತ್ರೆ ಜರುಗಿತು. ಬಾಡೂಟವೇ ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯ ವಿಶೇಷವಾಗಿದೆ.
ನಂಜನಗೂಡು ನಗರದಲ್ಲಿರುವ ತಾಯಿ-ಮಕ್ಕಳ ಆಸ್ಪತ್ರೆಗೆ ಮಧ್ಯರಾತ್ರಿ ಶಾಸಕ ದರ್ಶನ್ ಧ್ರುವನಾರಾಯಣ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದರೋಡೆಕೋರರ ಅಟ್ಟಹಾಸ ಮೈಸೂರು ಜಿಲ್ಲೆಯಲ್ಲಿ ಮುಂದುವರೆದಿದ್ದು, ಪೆಟ್ರೋಲ್ ಬಂಕ್ನಲ್ಲಿ ದರೋಡೆ ನಡೆದಿರುವ ಘಟನೆ ಕಿರುಮುದ್ದನಹಳ್ಳಿ ಬಳಿ ನಡೆದಿದೆ.
ಭಕ್ತಿಯ ಪರಮಾವಧಿ, ಬಾಯಿಗೆ ಬೀಗ ಹಾಕಿಕೊಂಡು ಮಾರಮ್ಮನಿಗೆ ಹರಕೆ ಸಲ್ಲಿಸುವ ಚುಂಚನಹಳ್ಳಿ ಗ್ರಾಮಸ್ಥರು
ಯುವಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಭವಿಷ್ಯ ಕಾಪಾಡುವ ದೃಷ್ಟಿಯಿಂದ ಆನ್ ಲೈನ್ ಬೆಟ್ಟಿಂಗ್ ಆ್ಯಪ್ಗಳನ್ನು ನಿಷೇಧಿಸುವಂತೆ ಯುವಭಾರತ್ ಸಂಘಟನೆ ಮತ್ತು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಪದಾಧಿಕಾರಿಗಳು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರವರಿಗೆ ಮತ್ತು ಸಿದ್ಧಾರ್ಥನಗರದಲ್ಲಿರುವ ಮೈಸೂರು ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಮನವಿ ಪತ್ರ ನೀಡಿದ್ದಾರೆ.