Showing 20 of 2095 posts • Page 22 of 105
ಬೈಕ್ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲಿಯೇ ಇಬ್ಬರು ದುರ್ಮರಣ ಹೊಂದಿದ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗೇಟ್ ಬಳಿ ನಡೆದಿದೆ.
ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಜೆಸಿಬಿ ಘರ್ಜಿಸಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಾಗ ಒತ್ತುವರಿದಾರರಿಂದ ವಶಕ್ಕೆ ಪಡೆದಿದೆ. ಮೈಸೂರು ಊಟಿ ರಸ್ತೆಯ ಶಕ್ತಿಧಾಮ ಮುಂಭಾಗ ಸುಮಾರು 38 ಗುಂಟೆ ಜಾಗವನ್ನ ಒತ್ತುವರಿ ಮಾಡಿಕೊಂಡ ಖಾಸಗಿ ವ್ಯಕ್ತಿಗಳು ಪಾರ್ಕಿಂಗ್ ಹಾಗೂ ಟೀ ಅಂಗಡಿ ತೆರೆದು ವಹಿವಾಟು ನಡೆಸುತ್ತಿದ್ದರು.
ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಜಾಗಕ್ಕೆ ನುಗ್ಗಿದ ಕಾವೇರಿ ನರ್ಸಿಂಗ್ ಕಾಲೇಜು ಸಿಬ್ಬಂದಿಗಳು ಹಾಗೂ ಸಹಚರರು ರಕ್ಷಣಾ ಗೋಡೆಯನ್ನ ಕಿತ್ತು ದಾಂಧಲೆ ನಡೆಸಿ ಬೆದರಿಕೆ ಹಾಕಿರುವ ಪ್ರಕರಣ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರು: ಡಿಸೈನಿಂಗ್ ಬೋಟಿಕ್ ತರಬೇತಿ ಕೊಡುವುದಾಗಿ ಆಮಿಷ ತೋರಿಸಿ 8 ಮಹಿಳೆಯರಿಗೆ 12.80 ಲಕ್ಷ ವಂಚಿಸಿರುವ ಪ್ರಕರಣ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮುಸ್ಲಿಂ ಸಮುದಾಯದ ಶಬ್ ಎ ಬರಾತ್ ಹಬ್ಬದ ಹಿನ್ನಲೆ ಮೈಸೂರು ನಗರ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
ಸರಗೂರು ತಾಲ್ಲೂಕಿನ ಹಂಚಿಪುರ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಿನಿಂದ ನಾಡಿಗೆ ಎಂಟ್ರಿಕೊಟ್ಟ ಗಜರಾಜ ಆತಂಕ ಸೃಷ್ಟಿಸಿದ್ದಾನೆ. ಗ್ರಾಮಸ್ಥರ ಕೂಗಾಟ, ಕಿರುಚಾಟಕ್ಕೆ ಗ್ರಾಮದ ಹೊರವಲಯದಲ್ಲೆ ಆನೆಗಳು ಓಡಾಡಿವೆ. ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಕಾಮಗಾರಿ ಪ್ರಾರಂಭ ಮಾಡಿ ಒಂದು ತಿಂಗಳಾದರೂ ಕಾಮಗಾರಿ ಪರಿಪೂರ್ಣಗೊಳಿಸದೆ ಅರೆಬರೆ ಕಾಮಗಾರಿ ಎಂದು ಕುರುಬೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದಾಗ ನಂಬಿಸಿ ಚಿನ್ನ ಗಿರವಿ ಇಟ್ಟುಕೊಂಡು ರಾತ್ರೋ ರಾತ್ರಿ ಎಸ್ಕೇಪ್ ಆಗಿದ್ದ ಸ್ಟಾರ್ ಗೋಲ್ಡ್ ಕಂಪನಿ ಮಾಲೀಕನನ್ನ ಬಂಧಿಸುವಲ್ಲಿ ವಿಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನ ಪ್ರಶ್ನಿಸಿದ್ದಕ್ಕೆ ಮನೆಗೆ ನುಗ್ಗಿದ ಯುವಕರ ಗುಂಪು ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ.
ಬಾರ್ ತೆರೆಯಲು ಅವಕಾಶ ನೀಡದಂತೆ ಹುಣಸೂರು ತಾಲೂಕಿನ ಹೊಸರಾಮನಹಳ್ಳಿ ಗ್ರಾಮಸ್ಥರು ಪಿಡಿಓಗೆ ಮನವಿ ಸಲ್ಲಿಸಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರನ್ನ MDMA ಡ್ರಗ್ಸ್ ಹೆಮ್ಮಾರಿ ಕಾಡುತ್ತಿದೆ.
ಗ್ರಾಮದ ಫೋಕಸ್ ಲೈಟ್ ಮೇಲೆ ಬಸವೇಶ್ವರರ ಬಾವುಟ ಅಳವಡಿಸಿದ ಹಿನ್ನಲೆ ಉಂಟಾದ ವಿವಾದ ಜಾತ್ರೆ ಸಂಭ್ರಮವನ್ನ ಮೊಟಕುಗೊಳಿಸಿದ ಘಟನೆ ನಂಜನಗೂಡು ತಾಲೂಕು ಹಗಿನವಾಳು ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದಲ್ಲಿರುವ ತ್ರಿವೇಣಿ ಫ್ರೆಂಡ್ಸ್ ಸ್ಪೋರ್ಟ್ಸ್ ರಿಕ್ರಿಯೆಷನ್ ಕ್ಲಬ್ ನಲ್ಲಿ ನಿಯಮ ಬಾಹಿರವಾಗಿ ಇಸ್ಪೀಟ್ ದಂಧೆ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮತ್ತು ವರುಣ ವಿಧಾನಸಭಾ ಕ್ಷೇತ್ರದಲ್ಲಿಯೇ ಸಾರ್ವಜನಿಕ ಶಿಕ್ಷಣ ಉಳಿಸಲು ಕೆಪಿಎಸ್ ಮ್ಯಾಗ್ನೆಟ್ ವಿರೋಧಿಸಿ ಎಐಡಿಎಸ್ಒ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದೆ.
ಮಾಘ ಹುಣ್ಣಿಮೆ ಹಿನ್ನಲೆಯಲ್ಲಿ ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದಕ್ಷಿಣ ಕಾಶಿ ಖ್ಯಾತಿಯ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 2,46,28,418 ರೂ ಕಾಣಿಕೆ ಸಂಗ್ರಹವಾಗಿದೆ.
ನಟ ದುನಿಯಾ ವಿಜಯ್ ಮತ್ತು ನಟಿ ರಚಿತ ರಾಮ್ ಅಭಿನಯಿಸಿರುವ ಲ್ಯಾಂಡ್ ಲಾರ್ಡ್ ಚಲನಚಿತ್ರಕ್ಕೆ ನಂಜನಗೂಡು ಛಲವಾದಿ ಮಹಾಸಭಾ ಬೆಂಬಲ ವ್ಯಕ್ತಪಡಿಸಿ, ಪ್ರತಿಯೊಬ್ಬರು ಚಿತ್ರವನ್ನು ವೀಕ್ಷಣೆ ಮಾಡುವಂತೆ ಬೃಹತ್ ಜಾಥಾ ನಡೆಸಿದರು.
ಜಮೀನಿಗೆ ಬೈಕ್ ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಕಲಿ ಒಡವೆಗಳನ್ನ ಗಿರವಿ ಇಟ್ಟು ಖಾಸಗಿ ಬ್ಯಾಂಕ್ ಗೆ ವಂಚಿಸಿದ ಆರೋಪದ ಮೇಲೆ ಚಿನ್ನಾಭರಣ ಮೌಲ್ಯಮಾಪಕ ಸೇರಿದಂತೆ 7 ಮಂದಿ ವಿರುದ್ದ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಸರ್ಕಾರಿ ನಾಗಮ್ಮ ಶಾಲಾ ಆವರಣದಲ್ಲಿ ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು ಉಪ ವಿಭಾಗ, ಸಂಚಾರ ಪೊಲೀಸ್ ಠಾಣೆ ನಂಜನಗೂಡು ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾಕ್ಕೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.