Showing 20 of 1933 posts • Page 3 of 97
ಕೆಡಿಪಿ ಸಭೆಯಲ್ಲಿ ಮೊಬೈಲ್ನಲ್ಲೇ ಮುಳುಗಿದ ಅಧಿಕಾರಿಗಳು..!
ಸಿಡಿಲಿಗೆ ಮಹಿಳೆ ಬಲಿ, ಎರಡು ಹಸುಗಳು ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ನಡೆದಿದೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ಸ್ವಚ್ಛತಾ ಆಂದೋಲನಕ್ಕೆ ಮ್ಯಾರಥಾನ್ ಮೂಲಕ ಜಾಗೃತಿ ಮೂಡಿಸಲಾಯಿತು.
ನಂಜನಗೂಡಿನಲ್ಲಿ ತೋಟಗಾರಿಕೆ ಇಲಾಖೆಯ ನೂತನ ಹಿರಿಯ ಸಹಾಯಕ ನಿರ್ದೇಶಕರ ಕಛೇರಿಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚನಹಳ್ಳಿ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದೆ.
ಮುಸ್ಲಿಂ ಹೆಣ್ಣು ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.
ಡಿಸೇಲ್, ಪೆಟ್ರೋಲ್ ಉಳಿತಾಯದ ಬಗ್ಗೆ ಪ್ರಧಾನಿ ಮಾತಿಗೆ ಸಿಎಂ ತಕರಾರು ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಕಿರುಗುಂದ ಗ್ರಾಮದಲ್ಲಿ ಶ್ರೀ ಬಿಳಿಗಿರಿ ರಂಗನಾಥಸ್ವಾಮಿಯ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಇಂಪು ಇಂಚರ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ವತಿಯಿಂದ ಏರ್ಪಡಿಸಲಾಗಿದ್ದ ಬಿಳಿಗಿರಿ ರಂಗಯ್ಯನ ನೋಡೋಣ ಬನ್ನಿ ಜನಪದ ಕಲಾಪ್ರದರ್ಶನ, ಜಾನಪದ ಕಥೆ, ಗಾಯನ, ಸುಗಮಸಂಗೀತ, ಕಾರ್ಯಕ್ರಮವನ್ನು ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ಕೆ.ರಂಗಸ್ವಾಮಿ ಉದ್ಘಾಟಿಸಿದರು.
ಶಾಲೆಗಳಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ. ಕೇಸರಿ ಪೇಟಕ್ಕೂ ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಡಿವೈಎಸ್ಪಿ ಆಗಿ ಎಂ.ಧರ್ಮೇಂದ್ರ ರವರು ನೇಮಕಗೊಂಡು ಅಧಿಕಾರ ಸ್ವೀಕರಿಸಿದರು. ವರ್ಗಾವಣೆಗೊಂಡ ಡಿವೈಎಸ್ಪಿ ರಘು ಅವರು ಅಧಿಕಾರ ಹಸ್ತಾಂತರಿಸಿದರು.
: ಸರ್ಕಾರಿ ಕಛೇರಿಯಲ್ಲಿ ಗಂಟೆ 10: 30 ಆದ್ರೂ ಇನ್ನೂ ಬಾಗಿಲನ್ನು ತೆರೆದಿಲ್ಲ, ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬಾರದೆ ಇರುವುದರಿಂದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಲೇ ಇದೆ.ಇದರಿಂದಾಗಿ ಮೃಗಾಲಯದಲ್ಲಿರುವ ಪ್ರಾಣಿ ಪಕ್ಷಿಗಳಿಗೆ ಅಪಾಯ ಸಂಭವಿಸಬಹುದು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.
ಬಹಿಷ್ಕಾರ ಹಿನ್ನೆಲೆ ಮಾರಾಮಾರಿ ಹಲ್ಲೆ ನಡೆದಿದ್ದು, ನಂಜನಗೂಡು ತಾಲ್ಲೂಕಿನ ಬಂಕಹಳ್ಳಿ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಮೇ. 15 ರಂದು ಶುಕ್ರವಾರ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ, ಮೈಸೂರು ಇವರ ವತಿಯಿಂದ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ವರ್ಷದ ಜನ್ಮದಿನದ ಅಂಗವಾಗಿ ಬಹುತ್ವ ಭಾರತ ಮತ್ತು ಸಂವಿಧಾನವನ್ನು ಅಸ್ಥಿರಗೊಳಿಸುತ್ತಿರುವ ಕೋಮುವಾದಿ ಶಕ್ತಿಗಳು ಎಂಬ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ತಿಳಿಸಿದರು.
ವಿವಿಧ ಕಾಮಗಾರಿಗಳಲ್ಲಿ ಅಕ್ರಮವೆಸಗಿ ಬರೋಬರಿ ಎರಡು ಕೋಟಿ ರೂ.ಅನುದಾನವನ್ನು ನುಂಗಿ ನೀರು ಕುಡಿದಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಆಗ್ರಹಿಸಿ ದೇವರಸನಹಳ್ಳಿ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಎಂ.ಮಹದೇವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಫೇಸ್ ಬುಕ್ ಮೂಲಕ ಪರಿಚಯವಾದ ಲಂಡನ್ ನಿವಾಸಿಯೊಬ್ಬ ಮೈಸೂರಿನ ಗೃಹಿಣಿಗೆ 12.65 ಲಕ್ಷ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಶಕ್ತಿನಗರದ ನಿವಾಸಿ ಸರ್ಕಾರಿ ಉದ್ಯೋಗಿ ಪತ್ನಿ ವೇದಾ(40) ಹಣ ಕಳೆದುಕೊಂಡವರು
ಪ್ರತಿವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ ಬಸವಣ್ಣರವರನ್ನ ಸ್ಮರಣೆ ಮಾಡುವ ಜೊತೆಗೆ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗಳಿಗೆ ಮಹತ್ವ ಬರುತ್ತದೆ ಎಂದು ಜಗದ್ಗುರು ಶ್ರೀ ಶಿವರಾತ್ರಿಶ್ವರ ದೇಶಿ ಕೇಂದ್ರ ಮಹಾಸ್ವಾಮಿಗಳು ತಿಳಿಸಿದರು.
ಕ್ರಿಕೆಟ್ ಆಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟಿಎಂ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ಯಾಂಪ್ರಸಾದ್ (46) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಪೊಲೀಸ್ ಲೇಔಟ್ನಲ್ಲಿ ನಡೆದಿದೆ.
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತೋತ್ಸವ ಹಾಗೂ ದಿ.ಆರ್ ಧ್ರುವನಾರಾಯಣ್ ರವರ 65ನೇ ಹುಟ್ಟು ಹಬ್ಬದ ಪ್ರಯುಕ್ತ ಶಂಕರಪುರ ಹತ್ತು ಜನಗಳ ಗರಡಿ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ನಾಡ ಕುಸ್ತಿ ಪಂದ್ಯಾವಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ನೀಡಿದರು.