Showing 20 of 1933 posts • Page 9 of 97
ಕೊನೆಗೂ ನಂಜನಗೂಡು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಕಪಿಲಾ ನದಿ ದಂಡೆಯ ಸರ್ಕಾರಿ ಜಮೀನಿನಲ್ಲಿ ಬೆಳೆದಿದ್ದ ಭಾರಿ ಮರಗಳಿಗೆ ಕೊಡಲಿ ಹಾಕಿದ ಆರೋಪಿಯೊಬ್ಬನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಚ್ ಡಿ ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ ಜಕ್ಕಳ್ಳಿ ಸಮೀಪ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ ಗೆ ಬೆಂಕಿ ತಗಲಿ, ಲಕ್ಷಾಂತರ ರೂಪಾಯಿ ವೆಚ್ಚದ ಗುಜುರಿ ಸಾಮಾನುಗಳು ಬೆಂಕಿಯ ಕೆನ್ನಾಲಿಗೆಯಿಂದ ನಾಶವಾಗಿದೆ.
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವ ಮಾ.30-2026 ರಂದು ನಡೆಯಲಿದೆ.
ಜ್ಯೂನಿಯರ್ ವೈದ್ಯನ ಪ್ರೇಮ ಪಾಶಕ್ಕೆ ಸೀನಿಯರ್ ವೈದ್ಯೆ ಬಲಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಪ್ರತಿ ಗ್ರಾಮಗಳ ಮಟ್ಟದಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ತಮ್ಮ ವಾರ್ಡ್ಗಳ ಮತ ಪಟ್ಟಿಗಳನ್ನು ಪರಿಷ್ಕರಣೆ ಮಾಡಿಕೊಳ್ಳಬೇಕು ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಹೇಳಿದರು.
ತಾಲ್ಲೂಕಿನ ಕಾಳಿಹುಂಡಿ ಗ್ರಾಮದಲ್ಲಿ ಕುರುಬನಕಟ್ಟೆ ಎಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಘನನೀಲಿ ಸಿದ್ದಪ್ಪಾಜಿ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಸಿದ್ದಪ್ಪಾಜಿ ಕೊಂಡೋತ್ಸವ ನೆರವೇರಿತು.
ಜಡ್ಜಿಸ್ಟ್ ನಾಗಮೋಹನ್ ದಾಸ್ ರವರ ಒಳ ಮೀಸಲಾತಿ ವರದಿ ಅವೈಜ್ಞಾನಿಕವಾಗಿದ್ದು ಈ ವರದಿ ರದ್ದುಪಡಿಸಬೇಕೆಂದು ಆಗ್ರಹಿಸಿ ಪಟ್ಟಣದ ಕರ್ನಾಟಕ ಪ್ರದೇಶ ದಲಿತ ಜಾಗೃತಿ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.
ಬೃಹತ್ ಮರ ಧರೆಗೆ ಉರುಳಿದ್ದು, ಮರದ ಕೆಳಗಿದ್ದ ಒಂದು ಕಾರ್, ಆಟೋ ಜಖಂ ಆಗಿರುವ ಘಟನೆ ಮೈಸೂರಿನ ಹಾರ್ಡಿಂಗ್ ವೃತ್ತದ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಮುಂದಿನ ವರ್ಷದಿಂದ ಗರಳಪುರಿ ಉತ್ಸವವನ್ನು ಇನ್ನು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಅದ್ದೂರಿಯಾಗಿ ಮಾಡಲಾಗುತ್ತದೆ. ತಾಲ್ಲೂಕಿನಲ್ಲಿರುವ ಕಲಾವಿದರನ್ನು ಗುರುತಿಸಲು ವೇದಿಕೆಯನ್ನು ಕಲ್ಪಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ಅಡ್ರೆಸ್ ಇಲ್ಲದ ರಸ್ತೆ, ಅಡಿಗಡಿಗೂ ಗುಂಡಿಯಾಗಿರುವ ಘಟನೆ ಹುಣಸೂರು ತಾಲ್ಲೂಕಿನ ಹಲವು ಗ್ರಾಮಗಳ ರಸ್ತೆಯಾಗಿದೆ. ರಸ್ತೆ ಗುಂಡಿ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಲಾಯಿತು.
ಕಬಿನಿ ಕಾಡಿನಲ್ಲಿ ಹುಲಿ ಮರಿಗಳ ಕಲರವ ಕಂಡುಬಂದಿದ್ದು, ನಾಗರಹೊಳೆ ಅಭಯಾರಣ್ಯದಲ್ಲಿ ಹುಲಿ ಮರಿಗಳ ಅಪರೂಪದ ದೃಶ್ಯ ಸೆರೆಯಾಗಿದೆ. ಕಾಡಿನ ಮಣ್ಣಿನ ಸುವಾಸನೆ ಸವಿದು ಪುಟ್ಟ ಹುಲಿ ಮರಿಗಳು ಮೈಮರೆತಿದೆ.
ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.
ಪುರಾತತ್ವ ಇಲಾಖೆಯ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ನಂಜನಗೂಡಿನ ಕಲ್ಲು ಮಂಟಪಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹೊತ್ತಿ ಉರಿದಿದೆ. ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಹಿಂಭಾಗದಲ್ಲಿರುವ ಕಲ್ಲು ಮಂಟಪದಲ್ಲಿ ಸಂಜೆ ಬೆಂಕಿ ಕಾಣಿಸಿಕೊಂಡಿದೆ.
ಯೋಗ, ಧ್ಯಾನ ಮಾಡುವುದು ಆರೋಗ್ಯಕರ ಜೀವನವನ್ನು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ನಂಜನಗೂಡು ಬಿ.ವಿ ಪಂಡಿತ್ ಧನ್ವಂತರಿ ಆರೋಗ್ಯಾಶ್ರಮದ ಆಯುರ್ವೇದ ವೈದ್ಯೆ ಡಾ. ಎನ್.ಆರ್ ಸುಷ್ಮಿತಾ ಕಿವಿಮಾತು ಹೇಳಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಆ ಮೂಲಕ ಯುಗಾದಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.
ನಾಡಿನಾದ್ಯಂತ ಚಂದ್ರಮಾನ ಯುಗಾದಿಯ ಸಡಗರ ಮನೆ ಮಾಡಿದ್ದು, ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ತಿರುಮಕೂಡಲು ನರಸೀಪುರದ ತ್ರಿವೇಣಿ ಸಂಗಮದಲ್ಲಿ ಸಾವಿರಾರು ಭಕ್ತರು ಪುಣ್ಯಸ್ನಾನ ಮಾಡುವ ಮೂಲಕ ಹೊಸ ವರ್ಷವನ್ನು ಭಕ್ತಿಭಾವದಿಂದ ಸ್ವಾಗತಿಸಿದರು.
ಯುಗಾದಿ ಸಂಭ್ರಮದಲ್ಲಿ ಇಸ್ಪೀಟ್ ಆಟಕ್ಕೆ ಬನ್ನೂರು ಪೊಲೀಸರು ಬ್ರೇಕ್ ಹಾಕಿದ್ದಾರೆ.
ಮಾ.30 ರಂದು ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡಜಾತ್ರಾ ಮಹೋತ್ಸವ ಅಂಗವಾಗಿ ನಂಜನಗೂಡಿನಲ್ಲಿ ಇಂದಿನಿಂದ ಗುರಳಾಪುರಿ ಉತ್ಸವವನ್ನು ಏರ್ಪಡಿಸಲಾಗಿದೆ.
ಬುಡುಬುಡುಕೆಯವರು ಮನೆಗೆ ನುಗ್ಗಿ ಚಿನ್ನದ ಸರ ಲಪಟಾಯಿಸಿದ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮನೆ ಕೆಲಸ ಮಾಡುವ ಸರಸ್ವತಿ ಎಂಬುವರು ಪ್ರಕರಣ ದಾಖಲಿಸಿದ್ದಾರೆ. 1.44 ಲಕ್ಷ ಮೌಲ್ಯದ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆಂದು ಪ್ರಕರಣ ದಾಖಲಿಸಿದ್ದಾರೆ.
ಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ ಪಿಡಿಓ ಮಂಜುಳಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ. 25 ಸಾವಿರ ಲಂಚ ಪಡೆದು ಕಚೇರಿಯಲ್ಲೇ ಮಂಜುಳಾ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.