ಕನ್ನಡೇತರರು ʼಕನ್ನಡʼ ಕಲಿಯಲು ಸರ್ಕಾರಿ ವೆಬ್ ಸೈಟ್ ಆರಂಭ

ಇನ್ನು ಮುಂದೆ ಕರ್ನಾಟಕದಲ್ಲಿ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್ ನಲ್ಲಿ ಕನ್ನಡವನ್ನು ಕಲಿಯಬಹುದು. ಇವರು ಸರ್ಕಾರದ ಇ-ಕನ್ನಡ ಪೋರ್ಟಲ್ ಗೆ ಹೋಗಿ ಆನ್ ಲೈನ್ ತರಗತಿಗಳ ಮೂಲಕ ಕನ್ನಡವನ್ನು ಕಲಿಯಬಹುದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇ-ಕನ್ನಡ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ.

ಈ ಪೋರ್ಟಲ್ ನಲ್ಲಿ ಮುದ್ರಣ, ಆಡಿಯೋ ಮತ್ತು ವಿಡಿಯೋ ಮಾದರಿಯಲ್ಲಿ ತರಗತಿಗಳು ಮತ್ತು ಪಠ್ಯಗಳಿರುತ್ತವೆ. ekannada.karnataka.gov.in ಪೋರ್ಟಲ್ ನಲ್ಲಿ ಈ ಪಠ್ಯಗಳು ಲಭ್ಯವಿವೆ.

ಕನ್ನಡದಲ್ಲಿ ಶುಭಾಶಯಗಳನ್ನು ಹೇಳುವುದು, ಸಂಭಾಷಣೆಗಳು ಮತ್ತು ವಾಕ್ಯಗಳು ಸೇರಿದಂತೆ ಕನ್ನಡ ಭಾಷೆಯನ್ನು ಬಳಸಲು ಅಗತ್ಯವಾಗಿರುವ ಶಿಕ್ಷಣವನ್ನು ಇಲ್ಲಿ ನೀಡಲಾಗುತ್ತದೆ. ಇದಲ್ಲದೇ, ಅಂತ್ಯದಲ್ಲಿ ಅಭ್ಯಾಸ ಪರಿಕರಗಳೂ ಇರಲಿದ್ದು, ಪಠ್ಯಗಳೆಲ್ಲವೂ ಉಚಿತವಾಗಿರಲಿವೆ ಮತ್ತು ಸ್ವಯಂ-ಕಲಿಕೆಗೆಂದೇ ವಿನ್ಯಾಸಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಎಲ್ಲಾ ಆಡಳಿತ ಸಾಫ್ಟ್ ವೇರ್ ಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಸಂಬಂಧ ಸರ್ಕಾರ ಸದ್ಯದಲ್ಲಿಯೇ ಆದೇಶ ಹೊರಡಿಸಲಿದೆ. ಇದಕ್ಕೆಂದು ಕನ್ನಡದ ಟೆಂಪ್ಲೇಟ್ ಸಿದ್ಧಗೊಳಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ, ಎಲ್ಲಾ ಸಚಿವರ ಇಮೇಲ್ ವಿಳಾಸಗಳು ಕನ್ನಡದಲ್ಲಿಯೇ ಲಭ್ಯವಾಗಲಿವೆ. ಈ ಕನ್ನಡ ಇಮೇಲ್ ವಿಳಾಸಗಳನ್ನು ಬಸವರಾಜ ಬೊಮ್ಮಾಯಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಉದ್ಘಾಟಿಸಿದರು.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago