ಸಂಪಾದಕರ ಆಯ್ಕೆ

ಕರ್ನಾಟಕ ವಿಶ್ವದ ಅತಿದೊಡ್ಡ ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಉತ್ಪಾದನಾ ಘಟಕದ ತವರಾಗಲಿದೆ

ಕರ್ನಾಟಕ ಶೀಘ್ರದಲ್ಲೇ ವಿಶ್ವದ ಅತಿದೊಡ್ಡ ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಉತ್ಪಾದನಾ ಘಟಕದ ತವರಾಗಲಿದೆ, ಎಂದು EV ತಯಾರಕ ಒಮೆಗಾ ಸೀಕಿ ಮೊಬಿಲಿಟಿ ಸಂಸ್ಥೆ ಶುಕ್ರವಾರ (22 ಏಪ್ರಿಲ್) ತಿಳಿಸಿದೆ.

250 ಎಕರೆ ಭೂಮಿಯಲ್ಲಿ‌, 250 ಮಿಲಿಯನ್ ಡಾಲರ್ ಹೂಡಿಕೆಯೊಂದಿಗೆ ಅತಿದೊಡ್ಡ ಉತ್ಪಾದನಾ ಘಟಕ ಸ್ಥಾಪನೆಯಾಗಲಿದೆ. ಸುಮಾರು 10 ಲಕ್ಷ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳನ್ನು ಉತ್ಪಾದಿಸುವ ಗುರಿಯನ್ನು ಹೊಂದಿದೆ. ಮೂರು ಹಂತಗಳಲ್ಲಿ ನಿರ್ಮಾಣವಾಗಲಿರುವ ಘಟಕದಲ್ಲಿ Rage+, Rage+ rapid EV, Rage+ Frost, Rage+Swap and Rage+Tipper ಹಾಗೂ ಒಎಸ್‌ಎಂ ಅನ್ನು ಪರಿಚಯಿಸಲಿದ್ದಾರೆ.

ಸಂಘಟಿತ ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮಾರುಕಟ್ಟೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಹಣಕಾಸು ವರ್ಷದಲ್ಲಿ 200 ಪ್ರತಿಶತದಷ್ಟು ಬೃಹತ್ ಪ್ರಮಾಣದಲ್ಲಿ ಬೆಳೆದಿದೆ ಎಂದು OSM ಅಧ್ಯಕ್ಷ ಮತ್ತು ಸಂಸ್ಥಾಪಕ ಉದಯ್ ನಾರಂಗ್ ಅಭಿಪ್ರಾಯಪಟ್ಟಿದ್ದಾರೆ. 1 ಮಿಲಿಯನ್ ಯೂನಿಟ್‌ಗಳ ಸಾಮರ್ಥ್ಯ ಹೊಂದಿರುವ ಘಟಕ ಕರ್ನಾಟಕದಲ್ಲಿ ಸ್ಥಾಪನೆಯಾಗಲಿದೆ. ಈ ಘಟಕವು ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಜಾಗತಿಕ ನಾಯಕನಾಗುವ ಗುರಿಯತ್ತ ಇದು ಮೊದಲ ಹೆಜ್ಜೆಯಾಗಿದೆ ಎಂದು ಬಣ್ಣಿಸಿದ್ದಾರೆ.

ಈ ಮೆಗಾ ಪ್ಲಾಂಟ್‌ನ ಸಮೀಪದಲ್ಲಿ ಪೂರಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು, ಅಸ್ತಿತ್ವದಲ್ಲಿರುವ ಹಾಗೂ ಹೊಸ ಪೂರೈಕೆದಾರರೊಂದಿಗೆ ಎಲೆಕ್ರ್ಟಿಕ್‌ ವಾಹನ ತಯಾರಕರು ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತದೆ.

ಕರ್ನಾಟಕವು ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳ ಮೂರನೇ ಅತಿದೊಡ್ಡ ಮಾರುಕಟ್ಟೆಯಾಗಿದೆ, EV ಬಳಕೆ ಇತ್ತೀಚೆಗೆ 1 ಲಕ್ಷ ಮೈಲಿಗಲ್ಲನ್ನು ದಾಟಿದೆ ಎಂದು ವರದಿಯಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಪ್ರಕಾರ, ಕರ್ನಾಟಕವು ಏಪ್ರಿಲ್ 15 ರವರೆಗೆ 100,432 ಇವಿಗಳನ್ನು ನೊಂದಾಯಿಸಿದೆ, ಮೊದಲ ಸ್ಥಾನದಲ್ಲಿ ಉತ್ತರ ಪ್ರದೇಶ (3 ಲಕ್ಷ ಇವಿ) ಮತ್ತು ದೆಹಲಿ (1.4 ಲಕ್ಷ) ವಾಹನಗಳನ್ನು ಹೊಂದಿದೆ ಎನ್ನಲಾಗಿದೆ.

Sneha Gowda

Recent Posts

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

6 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

23 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

44 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

1 hour ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago