ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಅಗ್ರಸ್ಥಾನ

ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಅಗ್ರಸ್ಥಾನ ದೊರಕಿದೆ. ಜಾಗತಿಕ ನಾಯಕರಿಗೆ ಸಂಬಂಧಿಸಿದ ‘ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್’ ಬಿಡುಗಡೆ ಮಾಡಿರುವ ರೇಟಿಂಗ್‌ನಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಕೆನಡಾದ ಕೌಂಟರ್‌ಪಾರ್ಟ್ ಜಸ್ಟಿನ್ ಟ್ರೂಡೋ ಅವರನ್ನು ಹಿಂದಿಕ್ಕಿ ಪ್ರಧಾನಿ ಮೋದಿ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ ಶೇ.71ರಷ್ಟು ಅನುಮೋದಿತ ಅಂಕಗಳನ್ನು ಗಳಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಶೇ.66 ರಷ್ಟು ಅಂಕ ಗಳಿಸಿದ ಮೆಕ್ಸಿಕೋದ ಆಂಟ್ರೆಸ್ ಮ್ಯಾನುಯೆಲ್ ಲೊಪೆಜ್ ಒಬ್ರಡಾರ್ ಇದ್ದಾರೆ.

ಮಾರ್ನಿಂಗ್ ಕನ್ಸಲ್ಟ್ ಪ್ರತಿ ನಾಯಕನನ್ನು ಟ್ರ್ಯಾಕ್ ಮಾಡಲು ಆರಂಭಿಸಿದ ಸಮಯದಿಂದ, 2020ರ ಮೇ ತಿಂಗಳಲ್ಲಿ ಪ್ರಧಾನಿ ಮೋದಿ ಅನುಮೋದನೆ ರೇಟಿಂಗ್ ಗರಿಷ್ಠ ಮಟ್ಟದಲ್ಲಿತ್ತು. ಕಳೆದ ವರ್ಷ ಕೋವಿಡ್ ಎರಡನೇ ಅಲೆ ವೇಳೆ ರೇಟಿಂಗ್ ಕಡಿಮೆಯಾಗಿತ್ತು.

ಕಂಪನಿ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್,ಮೆಕ್ಸಿಕೋ, ದಕ್ಷಿಣ ಕೊರಿಯಾ, ಸ್ಪೇನ್, ಬ್ರಿಟನ್ ಮತ್ತು ಯುಎಸ್‌ನ ಸರ್ಕಾರಿ ನಾಯಕರ ಅನುಮೋದನೆ ರೇಟಿಂಗ್ ಟ್ರ್ಯಾಕ್ ಮಾಡುತ್ತಿದೆ.

ಜಗತ್ತಿನ ಜನಪ್ರಿಯ ನಾಯಕರ ಪಟ್ಟಿ 

  • ನರೇಂದ್ರ ಮೋದಿ: 71%
  • ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್: 66%
  • ಮಾರಿಯೋ ಡ್ರಾಘಿ: 60%
  • ಫ್ಯೂಮಿಯೊ ಕಿಶಿಡಾ: 48%
  • ಓಲಾಫ್ ಸ್ಕೋಲ್ಜ್: 44%
  • ಜೋ ಬಿಡೆನ್: 43%
  • ಜಸ್ಟಿನ್ ಟ್ರುಡೊ: 43%
  • ಸ್ಕಾಟ್ ಮಾರಿಸನ್: 41%
  • ಪೆಡ್ರೊ ಸ್ಯಾಂಚೆಜ್: 40%
  • ಮೂನ್ ಜೇ-ಇನ್: 38%
  • ಜೈರ್ ಬೋಲ್ಸನಾರೊ: 37%
  • ಎಮ್ಯಾನುಯೆಲ್ ಮ್ಯಾಕ್ರನ್: 34%
  • ಬೋರಿಸ್ ಜಾನ್ಸನ್: 26%
Sneha Gowda

Recent Posts

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

16 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

28 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

39 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago