ಸಂಪಾದಕರ ಆಯ್ಕೆ

ಮಂಕಿಪಾಕ್ಸ್ ನಿರ್ಲಕ್ಷ್ಯ ಬೇಡ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಆಫ್ರಿಕಾದ ಕೆಲ ದೇಶಗಳಲ್ಲಿಕಾಣಿಸಿಕೊಂಡ ಮಂಕಿಪಾಕ್ಸ್ ಕಾಯಿಲೆ ಇದೀಗ 20ಕ್ಕೂ ಹೆಚ್ಚು ದೇಶಗಳಲ್ಲಿ ಹಬ್ಬಿದೆ. 300ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ದಾಖಲಾಗಿವೆ.

ಈ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ ಮಂಕಿಪಾಕ್ಸ್ ರೋಗದ ಬಗ್ಗೆ ಎಚ್ಚರಿಕೆ ಹೊರಡಿಸಿದ್ದು, ಪ್ರಕರಣಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಕೊರೋನಾ ಸೋಂಕಿಕ್ಕಿಂತ ಕಡಿಮೆ ವೇಗದಲ್ಲಿ ಮಂಕಿಪಾಕ್ಸ್ ಹರಡುತ್ತಿದೆ ಎಂದ ಜನರಿಗೆ ಡಬ್ಲ್ಯೂಎಚ್‌ಒ ಚಾಟಿ ಬೀಸಿದೆ. ಈಗ ಬೆಳಕಿಗೆ ಬಂದಿರುವ ಪ್ರಕರಣಗಳು ಟಿಪ್ ಆಫ್ ದ ಐಸ್‌ಬರ್ಗ್ ಅಷ್ಟೇ. ಈಗಲೇ ಎಚ್ಚೆತ್ತುಕೊಂಡು ಸರಿಯಾದ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸೋಂಕು ಹರಡುವಿಕೆ ತೀರಾ ಹೆಚ್ಚಾಗಬಹುದು ಎಂದು ಅದು ಎಚ್ಚರಿಕೆ ನೀಡಿದೆ.

ಸ್ಮಾಲ್ ಪಾಕ್ಸ್ ಅಥವಾ ಸಿಡುಬಿಗೆ ಕಾರಣವಾಗುವ ವೈರಸ್‌ಗೆ ಹೋಲಿಸಿದರೆ ಮಂಕಿಪಾಕ್ಸ್ ವೈರಸ್ ತೀರಾ ಅಪಾಯಕಾರಿ ಅಲ್ಲ ಎಂಬುದು ಸದ್ಯದ ಮಾಹಿತಿ. ಆದರೆ ಇದು ವೇಗವಾಗಿ ಹರಡಬಲ್ಲುದು. ಎಚ್ಚರದಿಂದ ಇರಬೇಕಾದ ವಿಷಯ ಎಂದರೆ ಕೊರೋನಾವೈರಸ್‌ನಂತೆ ಮಂಕಿಪಾಕ್ಸ್‌ಗೂ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಇಲ್ಲಿ ಸೋಂಕು ಬಂದ ನೂರು ಮಂದಿಯ ಪೈಕಿ 3ರಿಂದ 6 ಮಂದಿ ಸಾವನ್ನಪ್ಪುವುದು ತಿಳಿದುಬಂದಿದೆ. ಇದು ಬಿಟ್ಟರೆ ಸಾಮಾನ್ಯವಾಗಿ ಸೋಂಕಿತರು ಮೂರರಿಂದ ನಾಲ್ಕು ವಾರದೊಳಗೆ ಚೇತರಿಸಿಕೊಳ್ಳುತ್ತಾರೆ.

ವಿವಿಧ ದೇಶಗಳ ಮಾಹಿತಿ ಪ್ರಕಾರ, ಈಗ ಬೆಳಕಿಗೆ ಬಂದಿರುವ ಮಂಕಿಪಾಕ್ಸ್ ಸೋಂಕು ಪ್ರಕರಣಗಳಲ್ಲಿ ಪುರುಷ ಸಲಿಂಗಿಗಳಲ್ಲಿ ಹೆಚ್ಚು ಕಾಣಿಸಿಕೊಂಡಿರುವ ಕುತೂಹಲಕಾರಿ ಸಂಗತಿ ಬೆಳಕಿಗೆ ಬಂದಿದೆ. ಹಾಗೆಯೇ, ಹೆಚ್ಚಿನ ಪ್ರಕರಣಗಳು 40 ವರ್ಷ ವಯಸ್ಸಿನ ಕೆಳಗಿನ ಪುರುಷರದ್ದೇ ಆಗಿರುವುದು ಮತ್ತೊಂದು ಕುತೂಹಲಕಾರಿ ಸಂಗತಿ.

ರೋಗಲಕ್ಷಣಗಳೇನು?

ಮನುಷ್ಯರಲ್ಲಿ ಮಂಕಿಪಾಕ್ಸ್ ವೈರಸ್ ಸೋಂಕು ಇದ್ದರೆ ಜ್ವರ, ಮೈಕೈ ನೋವು, ಮಾಂಸಖಂಡ ನೋವು, ಚಳಿ ಇತ್ಯಾದಿ ಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಈಗ ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿಯೂ ಜ್ವರ ಮತ್ತು ಚಳಿ ಬರುತ್ತದೆ. ಹಾಗಂತ, ಈಗ ಜ್ವರ, ಚಳಿ ಆದರೆ ನಿರ್ಲಕ್ಷಿಸದೇ ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಕೋವಿಡ್‌ನಂತೆ ಈ ಪ್ರಕರಣದಲ್ಲೂ ಸೋಂಕಿತರು ಪ್ರತ್ಯೇಕವಾಸ ಅಥವಾ ಐಸೊಲೇಶನ್‌ನಲ್ಲಿ ಇರುವುದು ಸರಿಯಾದ ಮುನ್ನೆಚ್ಚರಿಕೆ ಕ್ರಮ ಎನ್ನುತ್ತಾರೆ ತಜ್ಞರು.

Sneha Gowda

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

34 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

42 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

52 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago