ಬೆಂಗಳೂರು: ಕಾಶಿ ದರ್ಶನ ಪ್ರವಾಸಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚಿಸಿದೆ. ಆಯೋಗದ ನಿರ್ದೇಶನದಂತೆ ಏಪ್ರಿಲ್ 14 ಮತ್ತು 28 ರಂದು ನಿಗದಿಯಾಗಿದ್ದ ಎರಡು ಪ್ರವಾಸಗಳನ್ನು ರದ್ದುಗೊಳಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇಲಾಖೆಯು ಮಾರ್ಚ್ 25 ರಿಂದ ಭಾರತೀಯ ರೈಲ್ವೇಸ್ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಪೋರ್ಟಲ್ ಮೂಲಕ ಬುಕಿಂಗ್ ಸ್ವೀಕರಿಸಲು ಪ್ರಾರಂಭಿಸಿತ್ತು.
ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರವು ರಾಜ್ಯದ ವಿವಿಧ ಭಾಗಗಳಿಂದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್ಗೆ ರೈಲು ಓಡಿಸಲು ಅನುಮತಿ ಕೋರಿ ಚುನಾವಣಾ ಆಯೋಗವನ್ನು ಸಂಪರ್ಕಿಸಿತ್ತು. ನಿಗದಿತ ಪ್ರವಾಸಗಳ ಬುಕ್ಕಿಂಗ್ ಅನ್ನು ತಕ್ಷಣವೇ ರದ್ದುಗೊಳಿಸುವಂತೆ ಚುನಾವಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ನವೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಭಾರತ್ ಗೌರವ್ ಟೂರಿಸ್ಟ್ ರೈಲಿಗೆ ಚಾಲನೆ ನೀಡಿದರು.