News Karnataka Kannada
Thursday, May 02 2024
ಸಂಪಾದಕರ ಆಯ್ಕೆ

ಬೆಂಗಳೂರು: ನೀತಿ ಆಯೋಗದ ಭಾರತ ನಾವೀನ್ಯತೆ ಸೂಚ್ಯಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದ ಕರ್ನಾಟಕ

Bengaluru: The budget session will be held from February 10 to 24.
Photo Credit : Wikimedia

ಬೆಂಗಳೂರು: ನೀತಿ ಆಯೋಗದ ಭಾರತ ನಾವೀನ್ಯತೆ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆಯುವ ಮೂಲಕ ಸತತ 3ನೇ ಬಾರಿ ಮೊದಲ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪ್ರಮುಖ ರಾಜ್ಯಗಳ ಪೈಕಿ ಕರ್ನಾಟಕ, ತೆಲಂಗಾಣ ಮತ್ತು ಹರಿಯಾಣ ಕ್ರಮವಾಗಿ ಮೊದಲ 3 ಸ್ಥಾನ ಗಳಿಸಿವೆ. ಇನ್ನು ಛತ್ತೀಸ್‌ಗಢ, ಒಡಿಶಾ ಮತ್ತು ಬಿಹಾರ ರಾಜ್ಯಗಳು ಸೂಚ್ಯಂಕ ಪಟ್ಟಿಯಲ್ಲಿ ಕೆಳಗಿನ ಸ್ಥಾನ ಪಡೆದಿವೆ.

ರಾಜ್ಯ ಮಟ್ಟದಲ್ಲಿ ನಾವೀನ್ಯತೆ ಸಾಮರ್ಥ್ಯ ಮತ್ತು ಪರಿಸರ ವ್ಯವಸ್ಥೆಗಳನ್ನು ನೀತಿ ಆಯೋಗದ ಭಾರತ ನಾವೀನ್ಯತೆ ಸೂಚ್ಯಂಕ 2021 ಪರಿಶೀಲಿಸುತ್ತದೆ. ಗುರುವಾರ ನೀತಿ ಆಯೋಗದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪರಮೇಶ್ವರನ್ ಅಯ್ಯರ್ ಸಮ್ಮುಖದಲ್ಲಿ ಉಪಾಧ್ಯಕ್ಷ ಸುಮನ್ ಬೆರಿ, ಜಾಗತಿಕ ನಾವೀನ್ಯತೆ ಸೂಚ್ಯಂಕದ ಮಾದರಿಯಲ್ಲಿ ಅಭಿವೃದ್ಧಿಗೊಂಡಿರುವ ಸೂಚ್ಯಂಕ ಬಿಡುಗಡೆ ಮಾಡಿದರು.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಯಕ್ಷಮತೆ ಆಧಾರದಲ್ಲಿ ಪರಿಗಣಿಸಲಾಗಿದ್ದು, ಅದರಂತೆ, 17 ಪ್ರಮುಖ ರಾಜ್ಯಗಳು, 10 ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳು ಮತ್ತು 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ನಗರ ರಾಜ್ಯಗಳು ಎಂದು ವಿಂಗಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು