News Karnataka Kannada
Monday, April 29 2024
ಸಂಪಾದಕರ ಆಯ್ಕೆ

ಆಗಸ್ಟ್ 17 ರಂದು ಗೃಹಲಕ್ಷ್ಮೀ ಯೋಜನೆ ಜಾರಿ: ಸಚಿವೆ ಹೆಬ್ಬಾಳ್ಕರ್

Grihalakshmi scheme to be implemented on August 17: Minister Hebbalkar
Photo Credit : News Kannada

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಯೋಜನೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಶುಕ್ರವಾರ ಹೇಳಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ, ಗ್ರಾಮೀಣಾಭಿವೃದ್ಧಿ ಸೇರಿ ಮೂರು ಇಲಾಖೆ ಸಚಿವರು, ಜೊತೆಗೆ ಅಧಿಕಾರಿಗಳು ಸುದೀರ್ಘವಾಗಿ ಸಭೆ ನಡೆಸಿದ್ದೇವೆ ಎಂದರು. ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಬುಧವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಆಗಸ್ಟ್ 17 ಅಥವಾ 18ರಂದು ಯೋಜನೆ ಜಾರಿ ಮಾಡುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಮನೆಯ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮೀ ಯೋಜನೆ, ಅರ್ಜಿ ಸಲ್ಲಿಕೆಗೆ ಸರ್ವರ್ ಸಮಸ್ಯೆ ಆಗುತ್ತಿರುವ ಹಿನ್ನಲೆಯಲ್ಲಿ ವಿಳಂಬ ಆಗುತ್ತಿದೆ. ಈ ನಿಟ್ಟಿನಲ್ಲಿ ಸರಳವಾಗಿ ಜನರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಲು ಇಲಾಖೆ ಪ್ರಯತ್ನ ನಡೆಸುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು