ಲಕ್ನೋ: ಉತ್ತರ ಪ್ರದೇಶದಲ್ಲಿ ಮುಂಬರುವ ಹಬ್ಬಗಳಾದ ಈದ್, ಅಕ್ಷಯ ತೃತ್ಯ ಮತ್ತು ಪರಶುರಾಮ ಜಯಂತಿಯಂದು ರಸ್ತೆಗಳಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಧಾರ್ಮಿಕ ಕಾರ್ಯಕ್ರಮಗಳನ್ನು ರಸ್ತೆಗಳಲ್ಲಿ ಆಚರಿಸಲು ಅವಕಾಶ ನೀಡಬಾರದು ಎಂದು ರಾಜ್ಯದ ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ರಾಜ್ಯ ಪ್ರಧಾನ ಗೃಹ ಕಾರ್ಯದರ್ಶಿಸಂಜಯ್ ಪ್ರಸಾದ್ ಮತ್ತು ವಿಶೇಷ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಎಡಿಜಿ, ಇನ್ಸ್ಪೆಕ್ಟರ್ ಜನರಲ್ಗಳು (ಐಜಿ), ಡೆಪ್ಯುಟಿ ಐಜಿ, ಜಿಲ್ಲಾ ಪೊಲೀಸ್ ಮುಖ್ಯಸ್ಥರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ವರ್ಚುವಲ್ ಸಭೆಯಲ್ಲಿ ಈ ವಿವರ ನೀಡಿದ್ದಾರೆ.
ಯಾವುದೇ ಸಂದರ್ಭದಲ್ಲೂ ರಸ್ತೆ ಮತ್ತು ಸಂಚಾರಕ್ಕೆ ಅಡ್ಡಿಪಡಿಸಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವವರ ವಿರುದ್ಧ ನಿಗಾವಹಿಸುವಂತೆ ಪೊಲೀಸರು, ಸ್ಥಳೀಯಾಡಳಿತಕ್ಕೆ ಸೂಚಿಸಲಾಗಿದೆ. .