ನವದೆಹಲಿ: ಕಳೆದ ಗುರುವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಜಮ್ಮು ಮತ್ತು ಕಾಶ್ಮೀರದ ಪೂಂಚ್-ರಜೌರಿ ಹೆದ್ದಾರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಸದಸ್ಯರು ಶುಕ್ರವಾರ ಭೇಟಿ ನೀಡಿದರು.
ಈ ಘಟನೆಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. “ಸೇನಾ ವಾಹನದ ಮೇಲೆ ದಾಳಿ ಮಾಡಿದ ಐವರಲ್ಲಿ ಮೂವರು ಭಯೋತ್ಪಾದಕರು ವಾಹನದ ಮೇಲೆ ಗ್ರೆನೇಡ್ಗಳನ್ನು ಎಸೆದಿದ್ದು, ನಂತರ ಅವರು ವಾಹನದಲ್ಲಿ ಪರಾರಿಯಾಗಿದ್ದರು. ಮೂಲಗಳ ಪ್ರಕಾರ, ‘‘ಭಾರತದಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಅಡ್ಡಿಪಡಿಸುವುದು ದಾಳಿಯ ಮುಖ್ಯ ಉದ್ದೇಶವಾಗಿತ್ತು’’. ಈ ಮೂಲಕ “ಭಾರತದಲ್ಲಿ ಕಾನೂನು ವ್ಯವಸ್ಥೆ, ಸೇನೆ ದುರ್ಬಲವಾಗಿದೆ ಎಂಬ ಸಂದೇಶ ನೀಡುವುದು ಅವರ ಉದ್ದೇಶವಾಗಿತ್ತು.