News Karnataka Kannada
Monday, May 06 2024
ಸಂಪಾದಕರ ಆಯ್ಕೆ

ದಕ್ಷಿಣಕನ್ನಡ – ಉಡುಪಿ ಜಿಲ್ಲೆಗಳ ಪಡಿತರ ಗ್ರಾಹಕರಿಗೆ ನವೆಂಬರ್ ತಿಂಗಳಿನಿಂದ ಕುಚ್ಚಲಕ್ಕಿ ವಿತರಣೆ

Steps to distribute kuchchalakki to ration consumers in Dakshina Kannada-Udupi districts from October-November
Photo Credit : Wikimedia

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಡಿತರ ಗ್ರಾಹಕರಿಗೆ ಮುಂದಿನ ಅಕ್ಟೋಬರ್- ನವೆಂಬರ್ ತಿಂಗಳಿನಿಂದ ಕುಚ್ಚಲಕ್ಕಿ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆಯಲ್ಲಿ ಮಾತನಾಡಿದ ಅವರು, ಪಡಿತರ ಗ್ರಾಹಕರಿಗೆ ಕುಚ್ಚಲಕ್ಕಿ ಪೂರೈಕೆ ಮಾಡಲು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಅಕ್ಕಿ ಬೇಕು. ಅದಕ್ಕೆ 18 ಲಕ್ಷ ಕ್ವಿಂಟಾಲ್ ಭತ್ತದ ಅಗತ್ಯವಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮೂರು ಲಕ್ಷ ಕ್ವಿಂಟಾಲ್ ಭತ್ತ ಬೆಳೆಯಲಾಗುತ್ತದೆ. ಅದರಲ್ಲಿ ಬಹುಭಾಗ ರೈತರ ದೈನಂದಿನ ಬಳಕೆಗೆ ಉಪಯೋಗವಾಗುತ್ತದೆ.

ಹಾಗಾಗಿ ಇತರ ಜಿಲ್ಲೆಗಳು ಮತ್ತು ರಾಜ್ಯಗಳಿಗೆ ಭತ್ತಕ್ಕಾಗಿ ಅವಲಂಬನೆ ಅನಿವಾರ್ಯವಾಗಿದೆ ಎಂದು ಸಚಿವರು ಹೇಳಿದರು.
ಛತ್ತೀಸ್‌ಗಡದಿಂದಲೂ ಅಕ್ಕಿ ತರಿಸಲಾಗುವುದು. ರಾಜ್ಯ ಬೆಳಗಾವಿ, ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಗಳಿಂದ ಭತ್ತ ಸಂಗ್ರಹಿಸುವ ಮಾತುಕತೆ ಹಿಂದೆ ನಡೆದಿತ್ತು. ಆದರೆ ಅದು ಸಾಧ್ಯ ಆಗಲಿಲ್ಲ. ಈಗ ಕೇರಳ ಮತ್ತು ತಮಿಳುನಾಡಿನಿಂದ ಅಕ್ಕಿ ಅಥವಾ ಭತ್ತ ಖರೀದಿಸಲಾಗುವುದು. ಕೇರಳಕ್ಕೆ ರಾಜ್ಯದ ತಂಡ ತೆರಳಿ ಅಧ್ಯಯನ ನಡೆಸಿ ಈಗಾಗಲೇ ವರದಿ ಸಲ್ಲಿಸಿದೆ. ತಮಿಳುನಾಡು ರಾಜ್ಯಕ್ಕೆ ಶೀಘ್ರದಲ್ಲಿ ರಾಜ್ಯದ ತಂಡ ತೆರಳಲಿದೆ. ಜೊತೆಗೆ ಛತ್ತೀಸ್‌ಗಡದಿಂದಲೂ ಭತ್ತ ಅಥವಾ ಅಕ್ಕಿ ತರಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು