News Karnataka Kannada
Sunday, May 05 2024
ಸಂಪಾದಕರ ಆಯ್ಕೆ

ಮಣಿಪುರ ಬಿಜೆಪಿಗೆ ಬಂಡಾಯದ ಬಿಸಿ, ವಾರದಲ್ಲಿ ಮೂವರು ಶಾಸಕರು ರಾಜೀನಾಮೆ

Three MLAs resign from Manipur BJP in a week
Photo Credit : IANS

ಇಂಫಾಲ: ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ವಿರುದ್ಧ ಬಿಜೆಪಿ ಶಾಸಕರ ಅಸಮಾಧಾನ ಹೆಚ್ಚುತ್ತಿದೆ. ಗುರುವಾರ ಶಾಸಕ, ಮಣಿಪುರ ಡೆವಲಪ್‌ಮೆಂಟ್ ಸೊಸೈಟಿ ಅಧ್ಯಕ್ಷ ಬ್ರೋಜೆನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂಗೆ ಬರೆದ ಪತ್ರದಲ್ಲಿ ಅವರು ವಿವರಿಸಿದ್ದಾರೆ.

ಇದಕ್ಕೂ ಮೊದಲು, ಬಿಜೆಪಿ ಶಾಸಕರಾದ ತೊಕ್ಚೋಮ್ ರಾಧೇಷಾಮ್ ಮತ್ತು ಕರಮ್ ಶ್ಯಾಮ್ ಅವರು ಕ್ರಮವಾಗಿ ಏಪ್ರಿಲ್ 17 ಮತ್ತು ಏಪ್ರಿಲ್ 13 ರಂದು ಮುಖ್ಯಮಂತ್ರಿಗಳ ಸಲಹೆಗಾರ ಮತ್ತು ಮಣಿಪುರ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮೂವರೂ ಶಾಸಕರು ತಮಗೆ ಖಾತೆಗಳಿಗೆ ಮುಖ್ಯಮಂತ್ರಿ ಅನುದಾನ ಸಮರ್ಪಕವಾಗಿ ವಿತರಣೆ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಬೆದರಿಕೆ, ಆರೋಪ ಮಾಡುವ ಬದಲು, ಪ್ರಾಮಾಣಿಕವಾಗಿ ಮತ್ತು ಒಗ್ಗೂಡಿ ಕೆಲಸ ಮಾಡಬೇಕು. ಇಂತಹ ಪ್ರಯತ್ನ ಇಲ್ಲಿದಿದ್ದಲ್ಲಿ ಆಕ್ರೋಶ ಸ್ಫೋಟಗೊಳ್ಳುವುದು ಸಹಜ ಎಂದು

ಶಾಸಕ ಶ್ಯಾಮ್‌ ತಿಳಿಸಿದ್ದಾರೆ. ಇನ್ನೂ ಕೆಲವು ಅತೃಪ್ತ ಬಿಜೆಪಿ ಶಾಸಕರು ತಮ್ಮ ಸರ್ಕಾರಿ ಹುದ್ದೆಗಳನ್ನು ತ್ಯಜಿಸುವ ಸಾಧ್ಯತೆಯಿದೆ

60 ಸದಸ್ಯ ಬಲದ ಅಸೆಂಬ್ಲಿಯಲ್ಲಿ 32 ಸ್ಥಾನಗಳನ್ನು ಗೆದ್ದು, ಬಿಜೆಪಿ ಸರ್ಕಾರ ಕಳೆದ ವರ್ಷದ ಚುನಾವಣೆಯಲ್ಲಿ ಸತತ ಎರಡನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಂಡಿದೆ. ಬಿಜೆಪಿ ಸರ್ಕಾರಕ್ಕೆ ವಿವಿಧ ಪಕ್ಷಗಳು ಬೆಂಬಲ ನೀಡುತ್ತಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು