ಇಂದು ವಿಶ್ವ ಪರಿಸರ ದಿನ: ಶುದ್ಧ ಗಾಳಿ ಉಸಿರಾಟಕ್ಕೆ ಮನೆಯಲ್ಲಿರಲಿ ಗಿಡಗಳು

ವಾಹನಗಳು ಉಗುಳುತ್ತಿರುವ ದಟ್ಟ ಹೊಗೆ ಕಲುಷಿತ ಗಾಳಿಯಿಂದಾಗಿ ವಾಯುಮಾಲಿನ್ಯ ಹೆಚ್ಚಳವಾಗಿದೆ. ಜನರ ಉಸಿರಾಟಕ್ಕೆ ತೊಂದರೆಯಾಗಿದೆ. ಮನೆಯ ಹೊರಗೆ ಮಾತ್ರವಲ್ಲ, ಮನೆಯ ಒಳಗಡೆನೂ ಕೂಡ ಶುದ್ಧಗಾಳಿ ಲಭ್ಯವಾಗುತ್ತಿಲ್ಲ. ಇಷ್ಟು ದಿನ ಹಳ್ಳಿಗಳು ಹಚ್ಚ ಹಸಿರಾಗಿತ್ತು. ಆದ್ರೀಗ ಅಭಿವೃದ್ಧಿ ಹೆಸರಿನಲ್ಲಿ ಹಳ್ಳಿಗಳಲ್ಲೂ ಹಸಿರು ಮಂಗಮಾಯವಾಗಿದೆ.

ನೀವು ಮನೆಯಲ್ಲೇ ಶುದ್ಧ ಗಾಳಿಯನ್ನು ಪಡೆದುಕೊಳ್ಳಬಹುದು. ಅದು ಹೇಗಂದ್ರೆ ಮನೆಯಲ್ಲಿ ಈ ಗಿಡಗಳನ್ನು ಬೆಳೆಸಿದ್ರೆ ಸಾಕು. ಮನೆಯವರೆಲ್ಲರೂ ಶುದ್ಧಗಾಳಿಯನ್ನು ಸೇವಿಸ್ಬಹುದು. ಈ ಗಿಡಗಳು ಅಶುದ್ಧ ಗಾಳಿಯನ್ನು ಶುದ್ಧಗೊಳಿಸುವ ಶಕ್ತಿಯನ್ನು ಹೊಂದಿದೆ.ನೀವು ಉಸಿರಾಡುವ ಗಾಳಿ ಆರೋಗ್ಯಕರವಾಗಿರಬೇಕೆಂದರೆ ಈ ಗಿಡಗಳನ್ನು ಮನೆಯಲ್ಲಿಯೇ ಬೆಳೆಯಿರಿ.

ಮನಿ ಪ್ಲಾಂಟ್: ಮನೆಯೊಳಗಡೆ ಗಾಳಿಯನ್ನು ಶುದ್ಧೀಕರಿಸಲು ಮನಿ ಪ್ಲಾನ್ ಉತ್ತಮ ಸಸ್ಯ. ಈ ಸಸ್ಯದ ಜನಪ್ರಿಯತೆಗೆ ಪ್ರಮುಖ ಕಾರಣವೆಂದರೆ ಅದರ ಹೆಸರು. ಎರಡನೇಯದ್ದು ಇದರ ನಿರ್ವಹಣೆ ತುಂಬಾನೇ ಸುಲಭ. ಎಲ್ಲಿದ್ರೂ ಕೂಡ ಕೂಡ ಮನಿ ಪ್ಲಾಂಟ್ ಬದುಕುತ್ತದೆ.

ಅರೆಕಾ ಪಾಮ್ : ಗಾಳಿಯನ್ನು ಶುದ್ಧೀಕರಿಸುವ ಸಸ್ಯವಾಗಿ ಇತ್ತೀಚಿನ ದಿನಗಳಲ್ಲಿ ಜನಪ್ರಿಯತೆಯನ್ನು ಗಳಿಸಿದೆ. ಈ ಸಸ್ಯವು ನೋಡಲು ಸುಂದರವಾಗಿದ್ದು, ಉದ್ದವಾದ ಮತ್ತು ಸೊಂಪಾದ ಹಸಿರು ಎಲೆಗಳನ್ನು ಹೊಂದಿದೆ. ಮತ್ತು ಇದರ ಎಲೆಗಳು ದಟ್ಟವಾಗಿದೆ. ನೋಡಲು ಕೊಂಚ ತಾಳೆಗಿಡದಂತೆ ಇದ್ದು, ಸ್ವಲ್ಪ ಉದ್ದವಾಗಿ ಬೆಳೆಯುತ್ತದೆ.

ರಬ್ಬರ್ ಸಸ್ಯ :ನೋಡೋದಕ್ಕೆ ಕಪ್ಪು-ನೇರಳೆ ಬಣ್ಣದಲ್ಲಿದೆ. ಇದು ನೋಡೋದಕ್ಕೆ ತುಂಬಾನೇ ಸುಂದರವಾಗಿ ಕಾಣುತ್ತದೆ. ಗಾಳಿಯನ್ನು ಶುದ್ಧೀಕರಿಸೋದ್ರಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

Ashika S

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

2 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

2 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

2 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

2 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

3 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

3 hours ago