ಮುಂಬೈ ದಾಳಿ ಸೂತ್ರಧಾರಿ ರಾಣ ಹಸ್ತಾಂತರಕ್ಕೆ ಅಮರಿಕ ಕೋರ್ಟ್‌ ಒಪ್ಪಿಗೆ

ನ್ಯೂಯಾರ್ಕ್: 2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಪಾಕ್‌ ಮೂಲದ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಯುಎಸ್ ನ್ಯಾಯಾಲಯವು ಅನುಮತಿ ನೀಡಿದೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ನೊಂದಿಗೆ ಸಂಪರ್ಕ ಹೊಂದಿರುವ ಲಷ್ಕರ್‌ ಭಯೋತ್ಪದನಾ ಸಂಘಟನೆ ನಡೆಸಿದ ಮುಂಬೈ ದಾಳಿಯ ಪ್ರಮುಖ ಸಂಚುಕೋರ.

ಈತನನ್ನು ಅಮೆರಿಕದಲ್ಲಿ ಬಂಧಿಸಲಾಗಿತ್ತು. ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬೇಕು ಎಂಬ ವಿನಂತಿಯ ಎಲ್ಲ ದಾಖಲೆಯನ್ನು ಪರಿಶೀಲಿಸಿದೆ ಎಂದು ಕ್ಯಾಲಿಫೋರ್ನಿಯಾದ ಯುಎಸ್‌ ಜಿಲ್ಲಾ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಾದ ಜಾಕ್ವೆಲಿನ್ ಚೂಲ್ಜಿಯಾನ್ ಆದೇಶದಲ್ಲಿ ವಿವರಿಸಿದ್ದಾರೆ.

ಅಮೆರಿಕ ಮತ್ತು ಭಾರತ ನಡುವೆ 1997ರಲ್ಲಿ ನಡೆದ ಒಪ್ಪಂದದ ಪ್ರಕಾರ ಭಾರತದ ಕೋರಿಕೆಯ ಮೇರೆಗೆ ಯುಎಸ್‌ನಲ್ಲಿ ರಾಣಾನನ್ನು ಬಂಧಿಸಲಾಗಿತ್ತು. ರಾಣಾ ತನ್ನ ಬಾಲ್ಯದ ಸ್ನೇಹಿತ ಪಾಕಿಸ್ತಾನಿ-ಅಮೆರಿಕನ್ ಡೇವಿಡ್ ಕೋಲ್ಮನ್ ಹೆಡ್ಲಿಗೆ ಮುಂಬೈನಲ್ಲಿ ದಾಳಿ ನಡೆಸಲು ಸಹಾಯ ಮಾಡಿದ್ದ ಎಂದು ಪ್ರಾಸಿಕ್ಯೂಟರ್‌ಗಳು ವಾದಿಸಿದ್ದರು.

Gayathri SG

Recent Posts

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ಇಬ್ಬರು ಸಾವು

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ತಂದೆ ಹಾಗೂ ಮಗಳು ಸಾವನ್ನಪ್ಪಿದ್ದ ಘಟನೆ ಗುಜರಾತ್‍ನ ವಡಾಲಿಯಲ್ಲಿ ಗುರುವಾರ ನಡೆದಿದೆ.

2 mins ago

ಟಾರ್ಚ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ; ತಾಯಿ, ಮಗು ಸಾವು

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಟಾರ್ಚ್ ಲೈಟ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ ಮಾಡುವಾಗ ಗರ್ಭಿಣಿ ಹಾಗೂ ಆಕೆಯ ಮಗು ಹೊಟ್ಟೆಯಲ್ಲಿಯೇ ಮೃತಪಟ್ಟಿರುವ ಅಘಾತಕಾರಿ…

19 mins ago

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣು

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣಾಗಿದ್ದಾರೆ. ಕಳೆದ 20 ವರ್ಷಗಳಲ್ಲಿ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್…

29 mins ago

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ಭವಾನಿ ರೇವಣ್ಣ ಸಂಬಂಧಿಗೆ ನ್ಯಾಯಾಂಗ ಬಂಧನ

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ದೊಡ್ಡಮಟ್ಟದಲ್ಲಿ ಸಂಚಲನ ಮೂಡಿಸಿದೆ. ಅದರಂತೆ ಇದೀಗ ರೇವಣ್ಣ ಪತ್ನಿ ಭವಾನಿ…

34 mins ago

ಕರಾವಳಿ ಜಿಲ್ಲೆಯಾದ್ಯಂತ ತೆರೆಗಪ್ಪಳಿಸಲಿದೆ “ಗಬ್ಬರ್ ಸಿಂಗ್”

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ "ಗಬ್ಬರ್…

51 mins ago

ರಾಯಚೂರಿನಲ್ಲಿ ಬಿಸಿ ಹೆಚ್ಚಲು ಕೈ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ-ರಾಜಾ ಅಮರೇಶ್ವರ್ ನಾಯಕ್

ರಾಯಚೂರಿನಲ್ಲಿ ತಾಪಮಾನ ಹೆಚ್ಚಳವಾಗಿರುವುದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ ಅಂತ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್ ನಾಯಕ್ ಆರೋಪ…

1 hour ago