Categories: ಕ್ರೀಡೆ

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸ್ಟುವರ್ಟ್ ಬಿನ್ನಿ ವಿದಾಯ

ಬೆಂಗಳೂರು: ಭಾರತದ ಕ್ರಿಕೆಟ್ ಆಟಗಾರ ಆಲ್‌ರೌಂಡರ್ ಸ್ಟುವರ್ಟ್ ಬಿನ್ನಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

‘ನನ್ನ ಕ್ರಿಕೆಟ್ ಜೀವನದ ಪ್ರಯಾಣ ಅಭೂತಪೂರ್ವವಾಗಿತ್ತು. ದೇಶವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ್ದಕ್ಕೆ ಹೆಮ್ಮೆ ಇದೆ. ಇದಕ್ಕಾಗಿ ಬಿಸಿಸಿಐ, ನನ್ನ ಕುಟುಂಬ ಸೇರಿದಂತೆ ಪ್ರತಿಯೊಬ್ಬರಿಗೂ ಆಭಾರಿಯಾಗಿರುತ್ತೇನೆ‘ ಎಂದು ಬೆಂಗಳೂರು ಮೂಲದ ಸ್ಟುವರ್ಟ್ ಬಿನ್ನಿ ತಿಳಿಸಿದ್ದಾರೆ.

ಸ್ಟುವರ್ಟ್ ಬಿನ್ನಿ ಅವರು 6 ಅಂತರರಾಷ್ಟ್ರೀಯ ಟೆಸ್ಟ್‌ ಪಂದ್ಯ, 14 ಏಕದಿನ ಅಂತರರಾಷ್ಟ್ರೀಯ ಪಂದ್ಯ, 3 ಅಂತರರಾಷ್ಟ್ರೀಯ ಟಿ20 ಪಂದ್ಯ, 150 ಐಪಿಎಲ್ ಪಂದ್ಯ ಹಾಗೂ 100 ಕ್ಕೂ ಹೆಚ್ಚು ದೇಶಿ ಕ್ರಿಕೆಟ್ ಟೂರ್ನಿಗಳನ್ನು ಆಡಿದ್ದಾರೆ. ಉತ್ತಮ ಆಲ್‌ರೌಂಡರ್ ಆಗಿದ್ದ ಇವರು ಐಪಿಎಲ್‌ನಲ್ಲಿ ಆರ್‌ಸಿಬಿ, ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡದಲ್ಲಿ ಆಡಿದ್ದಾರೆ. ಐಪಿಎಲ್‌ನಲ್ಲಿ ಇನ್ನೂ ಕೆಲಕಾಲ ಆಡುವುದಾಗಿ ಬಿನ್ನಿ ತಿಳಿಸಿದ್ದಾರೆ.

ಇವರ ತಂದೆ ರೋಜರ್ ಬಿನ್ನಿ ಅವರು ಕೂಡ ಟೀಮ್ ಇಂಡಿಯಾದ ಮಾಜಿ ಆಟಗಾರರಾಗಿದ್ದರು (ಮೊದಲ ಆಂಗ್ಲೊ ಇಂಡಿಯನ್ ಆಟಗಾರ). ಅವರು ಭಾರತ 1983 ರಲ್ಲಿ ಕ್ರಿಕೆಟ್ ವಿಶ್ವಕಪ್ ಗೆದ್ದಾಗ ಅದರ ಭಾಗವಾಗಿದ್ದರು.

Sampriya YK

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

8 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

9 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

9 hours ago