ಮುಂಬೈ: ಆಲ್ರೌಂಡರ್ ರವೀಂದ್ರ ಜಡೇಜ ಅವರ ಸ್ಥಾನವನ್ನು ತುಂಬಲು ಸಾಧ್ಯವಿಲ್ಲ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.
ಐಪಿಎಲ್ 2022ನೇ ಟೂರ್ನಿಯಲ್ಲಿ ಗುರುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ವೇಳೆಯಲ್ಲಿ ಧೋನಿ ಈ ಕುರಿತು ಪ್ರತಿಕ್ರಿಯಿಸಿದರು.
‘ಜಡೇಜ ಅವರಂತಹ ಆಲ್ರೌಂಡರ್ ಆಟಗಾರರು ವಿಭಿನ್ನ ರೀತಿಯ ಸಂಯೋಜನೆಯೊಂದಿಗೆ ತಂಡದಲ್ಲಿ ಸಮತೋಲನ ಕಾಪಾಡಿಕೊಳ್ಳಲು ನೆರವಾಗುತ್ತಾರೆ. ಅವರ ಸ್ಥಾನ ತುಂಬುವುದು ಕಷ್ಟ’ ಎಂದು ಹೇಳಿದ್ದಾರೆ.
‘ಜಡೇಜ ಅವರಿಗಿಂತ ಉತ್ತಮವಾಗಿ ಬೇರೆ ಯಾರಿಗಾದರೂ ಫೀಲ್ಡಿಂಗ್ ಮಾಡಲು ಸಾಧ್ಯವಾಗಬಹುದು ಎಂದು ನಾನು ಭಾವಿಸುವುದಿಲ್ಲ. ಈ ನಿಟ್ಟಿನಲ್ಲಿ ಜಡೇಜ ಅವರ ಸ್ಥಾನ ತುಂಬಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಗಾಯಾಳು ರವೀಂದ್ರ ಜಡೇಜ ಐಪಿಎಲ್ನಲ್ಲಿ ಉಳಿದಿರುವ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.