ಗಾಯದ ಸಮಸ್ಯೆಗೊಳಗಾಗುವ ಟೀಂ ಇಂಡಿಯಾ ಆಲ್ರೌಂಡರ್ ದೀಪಕ್ ಚಾಹರ್ ಚೇತರಿಸಿಕೊಳ್ಳಲು ಇನ್ನು ಕನಿಷ್ಠ 4 ತಿಂಗಳ ವಿಶ್ರಾಂತಿ ಅಗತ್ಯವಿದ್ದು, ಆಸ್ಟ್ರೇಲಿಯಾದಲ್ಲಿ ಆಯೋಜನೆಯಾಗಿರುವ ಟಿ.20 ವಿಶ್ವಕಪ್ ನಿಂದಲೂ ಹೊರಬೀಳಲಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಬೆನ್ನು ನೋವಿಗೆ ಒಳಗಾಗಿದ್ದ ಚಾಹರ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್ ಸಿಎ) ಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಗಾಯದ ಕಾರಣದಿಂದ ಚಾಹರ್ ಈಗಾಗಲೇ ಐಪಿಎಲ್ ನಿಂದಲೂ ಹೊರಬಿದ್ದಿದ್ದು ಚೆನ್ನೈ ಸೂಪರ್ ಕಿಂಗ್ಸ್ ಪ್ರಾಂಚೈಸಿಗೆ ಬಾರಿ ಹೊಡೆತ ನೀಡಿದೆ.
ಪ್ರಮುಖ ವೇಗಿಯ ಸೇವೆಯಿಲ್ಲದೆ ಬೌಲಿಂಗ್ ವಿಭಾಗದಲ್ಲಿ ಸೊರಗಿರುವ ಚೆನ್ನೈ ತಂಡ ಆಡಿದ 5 ಪಂದ್ಯಗಳಲ್ಲಿ ನಾಲ್ಕರಲ್ಲಿ ಸೋಲುಂಡಿದೆ. ಚಾಹರ್ ಗೆ 14 ಕೋಟಿ ನೀಡಿ ಚೆನ್ನೈ ತಂಡವು ಹರಾಜಿನಲ್ಲಿ ಖರೀದಿಸಿತ್ತು. ದೀಪಕ್ ಚಾಹರ್ ಸ್ಕಾನ್ ವರದಿಯಂತೆ ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು, 4 ತಿಂಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್ ನಿಂದ ಹೊರಗುಳಿಯುವುದು ಅನಿವಾರ್ಯವಾಗಿದೆ.
ಆದ್ದರಿಂದ ರಾಜಸ್ಥಾನ ಮೂಲದ ವೇಗಿ 2022 ರ ಅಕ್ಟೋಬರ್, ನವೆಂಬರ್ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ಅನ್ನು ಸಹ ತಪ್ಪಿಸಿಕೊಳ್ಳಲಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…