Categories: ಕ್ರೀಡೆ

ಇಂದು ಮಧ್ಯಾಹ್ನ 3.30ಕ್ಕೆ ಸುದ್ಧಿಗೋಷ್ಠಿ ನಡೆಸಲಿರುವ ವಿರಾಟ್ ಕೊಹ್ಲಿ

ನವದೆಹಲಿ : ಭಾರತೀಯ ಟೆಸ್ಟ್ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿಯ  ಬಗ್ಗೆ ಮಾಧ್ಯಮಗಳಲ್ಲಿ ಕಳೆದ ವಾರದಿಂದ ವಿವಿಧ ಸುದ್ದಿಗಳು ಪ್ರಸಾರವಾಗುತ್ತಿದ್ದವು. ಈ ಬಗ್ಗೆ ಇಂದು ಮಧ್ಯಾಹ್ನ 3.30ಕ್ಕೆ ಮಹತ್ವದ ಸುದ್ಧಿಗೋಷ್ಠಿಯನ್ನು ನಡೆಸಿ, ವಿರಾಟ್ ಕೊಹ್ಲಿ  ಮಾತನಾಡಲಿದ್ದಾರೆ. ಹಲವು ವಿಚಾರಗಳನ್ನು ಬಿಚ್ಚಿಡಲಿದ್ದಾರೆ.

ಅಲ್ಲದೇ ಅವರು, ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಲಿದ್ದಾರಾ ಎನ್ನುವ ಕುತೂಲಹ ಕೂಡ ಉಂಟಾಗಿದೆ. ಆ ಬಗ್ಗೆ ಇಂದು ಮಧ್ಯಾಹ್ನ 3.30ಕ್ಕೆ ನಡೆಸುತ್ತಿರುವಂತ ಮಹತ್ವದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ಹೊರ ಬೀಳಲಿದೆ.

ದಕ್ಷಿಣ ಅರಿಕಾ ಪ್ರವಾಸದಲ್ಲಿ, ಭಾರತೀಯ ಟೆಸ್ಟ್ ನಾಯಕ ಸೆಂಚುರಿಯನ್ ಮತ್ತು ಜೋಹಾನ್ಸ್ ಬರ್ಗ್ ಟೆಸ್ಟ್ ಪಂದ್ಯದ ಸಮಯದಲ್ಲಿ ಮಾಧ್ಯಮದವರೊಂದಿಗೆ ಭಾರತೀಯ ಟೆಸ್ಟ್ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ದೂರ ಉಳಿದಿದ್ದರು. ಅಲ್ಲದೇ ಪಂದ್ಯಪೂರ್ವ ಸಮಾವೇಶಗಳಿಂದ ದೂರ ಉಳಿದಿದ್ದರು. ಜೋಹಾನ್ಸ್ ಬರ್ಗ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬೆನ್ನು ಸೆಳೆತದಿಂದಾಗಿ ತಪ್ಪಿಸಿಕೊಂಡರು.

ಏತನ್ಮಧ್ಯೆ, ಜೋಹಾನ್ಸ್ ಬರ್ಗ್ ಟೆಸ್ಟ್ ಪಂದ್ಯಕ್ಕೆ ಸ್ವಲ್ಪ ಮುಂಚಿತವಾಗಿ ರಾಹುಲ್ ದ್ರಾವಿಡ್ ಅವರು ಕೇಪ್ ಟೌನ್ ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಕ್ಯಾಪ್ಟನ್ ಕೊಹ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲಿದ್ದಾರೆ ಎಂದು ಸೂಚಿಸಿದ್ದರು. ಆದ್ರೇ ಅಲ್ಲಿಯೂ ಮಾತನಾಡಿರಲಿಲ್ಲ. ಈಗ ಇಂದು ಮಧ್ಯಾಹ್ನ 3.30ಕ್ಕೆ ಮಹತ್ವದ ಸುದ್ಧಿಗೋಷ್ಠಿಯಲ್ಲಿ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ. ಯಾವ ವಿಚಾರಗಳನ್ನು ಮಾತನಾಡಲಿದ್ದಾರೆ ಎನ್ನುವ ಬಗ್ಗೆ ಕಾದು ನೋಡಬೇಕಿದೆ.

Gayathri SG

Recent Posts

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

15 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

38 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

42 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

49 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

1 hour ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

1 hour ago