Categories: ಕ್ರೀಡೆ

ಎರಡನೇ ಬಾರಿ ದೇಶಿ ಟಿ20 ಟ್ರೋಫಿಯನ್ನು ಮುಡಿಗೇರಿಸಿಕೊಂಡ ತಮಿಳುನಾಡು

ಹೊಸದಿಲ್ಲಿ: ಕೊನೆಯ ಎಸೆತದವರೆಗೂ ತೀವ್ರ ರೋಚಕತೆಯಿಂದ ಕೂಡಿದ್ದ 2021/22ರ ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಫೈನಲ್ ಹಣಾಹಣಿಯಲ್ಲಿ ತಮಿಳುನಾಡು ತಂಡ, ಕರ್ನಾಟಕ ವಿರುದ್ಧ 4 ವಿಕೆಟ್‌ಗಳಿಂದ ಗೆಲುವು ಸಾಧಿಸಿತು. ಆ ಮೂಲಕ ಸತತ ಎರಡನೇ ಬಾರಿ ದೇಶಿ ಟಿ20 ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಅರುಣ್‌ ಜೆಟ್ಲಿ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಹಣಾಹಣಿಯಲ್ಲಿ ಕರ್ನಾಟಕ ನೀಡಿದ್ದ 152 ರನ್‌ ಗುರಿ ಹಿಂಬಾಲಿಸಿದ್ದ ತಮಿಳುನಾಡು ತಂಡ ಉತ್ತಮ ಆರಂಭ ಪಡೆದಿತ್ತಾದರೂ ಮಧ್ಯಮ ಓವರ್‌ಗಳಲ್ಲಿ ಸೋಲಿನ ದವಡೆಗೆ ಸಿಲುಕಿತ್ತು. ಅದರಂತೆ ಕೊನೆಯ ಎರಡು ಓವರ್‌ಗಳಿಗೆ ಗೆಲ್ಲಲು ತಮಿಳುನಾಡಿಗೆ 30 ರನ್‌ ಅಗತ್ಯವಿತ್ತು. ಆದರೆ, 19ನೇ ಓವರ್‌ನಲ್ಲಿ ಶಾರೂಖ್‌ ಖಾನ್‌ ಒಂದು ಸಿಕ್ಸರ್‌ ಹಾಗೂ ಒಂದು ಬೌಂಡರಿ ಸಿಡಿಸಿದರು. ಆ ಮೂಲಕ ಕೊನೆಯ ಓವರ್‌ನಲ್ಲಿ ತಮಿಳುನಾಡು ತಂಡಕ್ಕೆ 16 ರನ್‌ ಅಗತ್ಯವಿತ್ತು.

20ನೇ ಓವರ್‌ ಮೊದಲನೇ ಎಸೆತದಲ್ಲಿಯೇ ಸಾಯಿ ಕಿಶೋರ್‌ ಬೌಂಡರಿ ಸಿಡಿಸಿದರು. ಅಂತಿಮ ಎರಡು ಎಸೆತಗಳಲ್ಲಿ 8 ರನ್‌ ಅಗತ್ಯವಿದ್ದಾಗ ಪ್ರತೀಕ್‌ ಜೈನ್ ಯಾರ್ಕರ್‌ ಹಾಕುವ ಭರದಲ್ಲಿ ವೈಡ್‌ ಎಸೆದರು. 5ನೇ ಎಸೆತದಲ್ಲಿ ಶಾರೂಖ್‌ ಎರಡು ರನ್‌ ಪಡೆದುಕೊಂಡರು. ನಂತರ ಕೊನೆಯ ಎಸೆತದಲ್ಲಿ 5 ರನ್‌ ಅಗತ್ಯವಿದ್ದಾಗ ಶಾರೂಖ್‌ ಖಾನ್‌ ಸ್ಕೈರ್‌ ಲೆಗ್‌ ಸೈಡ್‌ಗೆ ಭರ್ಜರಿ ಸಿಕ್ಸರ್‌ ಸಿಡಿಸಿ ತಮಿಳುನಾಡು ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

15 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

39 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

54 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago