News Karnataka Kannada
Saturday, May 11 2024
ಕ್ರೀಡೆ

ಎಲ್ಲಾ ದರ್ಜೆ ಕ್ರಿಕೆಟಿಗೆ ವಿದಾಯ ಹೇಳಿದ ಗೌತಮ್ ಗಂಭೀರ್

Photo Credit :

ಎಲ್ಲಾ ದರ್ಜೆ ಕ್ರಿಕೆಟಿಗೆ ವಿದಾಯ ಹೇಳಿದ ಗೌತಮ್ ಗಂಭೀರ್

ನವದೆಹಲಿ: ಟೀಂ ಇಂಡಿಯಾದ ಆಟಗಾರ ಗೌತಮ್ ಗಂಭೀರ್ ಅವರು ಎಲ್ಲಾ ಮಟ್ಟದ ಕ್ರಿಕೆಟಿನಿಂದ ನಿವೃತ್ತಿ ಘೋಷಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಹಾಕಿರುವ ವಿಡಿಯೋದಲ್ಲಿ ನಿವೃತ್ತಿ ನಿರ್ಧಾರದ ಬಗ್ಗೆ ಗಂಭೀರ್ ಹೇಳಿಕೊಂಡಿದ್ದಾರೆ. ಗುರುವಾರದಿಂದ ಆರಂಭವಾಗುವ ಆಂಧ್ರಪ್ರದೇಶ ವಿರುದ್ಧದ ರಣಜಿ ಟ್ರೋಫಿಯಲ್ಲಿ ಗಂಭೀರ್ ಕೊನೆಯ ಸಲ ಆಡಲಿದ್ದಾರೆ.

2007ರ ವಿಶ್ವ ಟಿ-20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್ ನಲ್ಲಿ ಭಾರತ ಪ್ರಶಸ್ತಿ ಗೆಲ್ಲಲು ಆಕ್ರಮಣಕಾರಿ ಶೈಲಿಯ ಗಂಭೀರ ಆಟ ಕೂಡ ಪ್ರಮುಖ ಪಾತ್ರ ವಹಿಸಿತ್ತು.

2019ರಲ್ಲಿ ಗಂಭೀರ್ ಕೊನೆಯ ಸಲ ಟೆಸ್ಟ್ ಆಡಿದ್ದರು. ದೆಹಲಿ ತಂಡದ ಪರವಾಗಿ ಆಡುತ್ತಿರುವ ಗಂಭೀರ್ ನಾಯಕತ್ವ ತ್ಯಜಿಸಿದ್ದರು. ಗಂಭೀರ್ 58 ಟೆಸ್ಟ್ ಪಂದ್ಯಗಳಲ್ಲಿ 4154 ರನ್, 147 ಏಕದಿನ ಪಂದ್ಯಗಳಲ್ಲಿ 5238 ರನ್ ಮತ್ತು 37 ಟಿ-20 ಪಂದ್ಯಗಳಲ್ಲಿ 932 ರನ್ ಬಾರಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು