ನವದೆಹಲಿ: ‘ಭಾರತದ ಬ್ಯಾಟರ್ಗಳಾದ ಶಿಖರ್ ಧವನ್, ಶ್ರೇಯಸ್ ಅಯ್ಯರ್ ಋತುರಾಜ್ ಗಾಯಕವಾಡ್ ಹಾಗೂ ಬೌಲರ್ ನವದೀಪ್ ಸೈನಿಗೆ ಕೋವಿಡ್ ದೃಢಪಟ್ಟಿದೆ’ ಬಿಸಿಸಿಐ ಎಂದು ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ, ಮತ್ತು ವೆಸ್ಟ್ ಇಂಡೀಸ್ ನಡುವಿನ ಸರಣಿಗೆ ಕೆಲ ದಿನಗಳು ಬಾಕಿ ಇರುವಾಗಲೇ ಭಾರತ ತಂಡದ ನಾಲ್ವರು ಆಟಗಾರರಿಗೆ ಕೋವಿಡ್ ದೃಢಪಟ್ಟಿದೆ ಎಂದು ತಿಳಿಸಿದೆ. ಕೊರೊನಾ ಸೋಂಕು ಹೊಂದಿರುವ ಆಟಗಾರರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಬಿಸಿಸಿಐ ಹೇಳಿದೆ.
ಫೆ.6ರಿಂದ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಬಳಿಕ ಕೋಲ್ಕತ್ತದ ಈಡನ್ ಗಾರ್ಡನ್ಸ್ನಲ್ಲಿ ಮೂರು ಪಂದ್ಯಗಳ ಟಿ-20 ಸರಣಿ ನಡೆಯಲಿದೆ.
ಫೆ. 6, 9 ಮತ್ತು 11 ರಂದು ಏಕದಿನ ಸರಣಿ ನಡೆಯಲಿದೆ. ಫೆ. 16, 18 ಮತ್ತು 20 ರಂದು ಟಿ-20 ಸರಣಿ ನಡೆಯಲಿದೆ.