News Karnataka Kannada
Saturday, April 27 2024
ಕ್ರೀಡೆ

ಏಕದಿನ ಸರಣಿಗೆ ಕೊರೊನಾ ಸಮಸ್ಯೆ: ಟೀಂ ಇಂಡಿಯಾ ಆಟಗಾರರಿಗೆ ಸೋಂಕು

Cricket
Photo Credit : Twitter

ನವದೆಹಲಿ: ‘ಭಾರತದ ಬ್ಯಾಟರ್‌ಗಳಾದ ಶಿಖರ್ ಧವನ್, ಶ್ರೇಯಸ್ ಅಯ್ಯರ್ ಋತುರಾಜ್ ಗಾಯಕವಾಡ್ ಹಾಗೂ ಬೌಲರ್‌ ನವದೀಪ್‌ ಸೈನಿಗೆ ಕೋವಿಡ್‌ ದೃಢಪಟ್ಟಿದೆ’ ಬಿಸಿಸಿಐ  ಎಂದು ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ, ಮತ್ತು ವೆಸ್ಟ್ ಇಂಡೀಸ್ ನಡುವಿನ ಸರಣಿಗೆ ಕೆಲ ದಿನಗಳು ಬಾಕಿ ಇರುವಾಗಲೇ ಭಾರತ ತಂಡದ ನಾಲ್ವರು ಆಟಗಾರರಿಗೆ ಕೋವಿಡ್‌ ದೃಢಪಟ್ಟಿದೆ ಎಂದು ತಿಳಿಸಿದೆ. ಕೊರೊನಾ ಸೋಂಕು ಹೊಂದಿರುವ ಆಟಗಾರರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಬಿಸಿಸಿಐ ಹೇಳಿದೆ.

ಫೆ.6ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಬಳಿಕ ಕೋಲ್ಕತ್ತದ ಈಡನ್ ಗಾರ್ಡನ್ಸ್‌ನಲ್ಲಿ ಮೂರು ಪಂದ್ಯಗಳ ಟಿ-20 ಸರಣಿ ನಡೆಯಲಿದೆ.

ಫೆ. 6, 9 ಮತ್ತು 11 ರಂದು ಏಕದಿನ ಸರಣಿ ನಡೆಯಲಿದೆ. ಫೆ. 16, 18 ಮತ್ತು 20 ರಂದು ಟಿ-20 ಸರಣಿ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು