ಕ್ರೀಡೆ

ಏಷ್ಯನ್ ಕಪ್ ಹಾಕಿ: ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಜಕಾರ್ತಾ: ಹಾಲಿ ಚಾಂಪಿಯನ್‌ ಭಾರತವು ಗುರುವಾರ ನಡೆಯುವ ಏಷ್ಯನ್‌ ಕಪ್‌ ಪುರುಷರ ಹಾಕಿ ಕೂಟದ ಪಂದ್ಯದಲ್ಲಿ ಆತಿಥೇಯ ಇಂಡೋನೇಶ್ಯ ತಂಡವನ್ನು ಎದುರಿಸಲಿದೆ.

ಭಾರತವು ನಾಕೌಟ್‌ ಹಂತಕ್ಕೇರಬೇಕಾದರೆ ಭಾರೀ ಅಂತರದ ಗೆಲುವು ದಾಖಲಿಸಬೇಕಾಗಿದೆ ಮಾತ್ರವಲ್ಲದೇ “ಎ’ ಬಣದ ಇನ್ನೊಂದು ಪಂದ್ಯದಲ್ಲಿ ಜಪಾನ್‌ ಪಾಕಿಸ್ಥಾನವನ್ನು ಸೋಲಿಸಬೇಕಾಗಿದೆ.

ಒಂದು ಡ್ರಾ ಮತ್ತು ಒಂದು ಸೋಲಿನಿಂದಾಗಿ ಭಾರತ ಇದೀಗ “ಎ’ ಬಣದಲ್ಲಿ ಮೂರನೇ ಸ್ಥಾನದಲ್ಲಿದೆ. ಜಪಾನ್‌ (ಆರಂಕ) ಅಗ್ರಸ್ಥಾನದಲ್ಲಿದ್ದರೆ ಪಾಕಿಸ್ಥಾನ (4 ಅಂಕ) ದ್ವಿತೀಯ ಸ್ಥಾನದಲ್ಲಿದೆ. ಹೀಗಾಗಿ ಭಾರತ ಗುರುವಾರದ ಪಂದ್ಯದಲ್ಲಿ ಇಂಡೋನàಶ್ಯವನ್ನು ಭಾರೀ ಅಂತರದಿಂದ ಸೋಲಿಸಿದರೆ ನಾಕೌಟ್‌ ಹಂತಕ್ಕೇರುವುದನ್ನು ಖಾತರಿಪಡಿಸುವುದಿಲ್ಲ ಬದಲಾಗಿ ಜಪಾನ್‌ ತಂಡ ಪಾಕಿಸ್ಥಾನವನ್ನುಸೋಲಿಸುವುದನ್ನು ನೋಡಬೇಕಾಗಿದೆ.

ಸರ್ದಾರ್‌ ಸಿಂಗ್‌ ಮಾರ್ಗದರ್ಶನದಲ್ಲಿ ಭಾರತೀಯ ತಂಡವು ಯುವ ತಂಡವೊಂದನ್ನು ಈ ಕೂಟದಲ್ಲಿ ಕಣಕ್ಕೆ ಇಳಿಸಿತ್ತು. ಇದರಲ್ಲಿ ಬಿರೇಂದ್ರ ಲಾಕ್ರ ಮತ್ತು ಎಸ್‌ವಿ ಸುನೀಲ್‌ ಅವರಂತಹ ಕೆಲವು ಹಿರಿಯ ಆಟಗಾರರೂ ಇದ್ದರು. ಆದರೂ ಭಾರತ ನಿರೀಕ್ಷಿತ ನಿರ್ವಹಣೆ ನೀಡಲು ವಿಫ‌ಲವಾಗಿದೆ.

ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ಭಾರತ ಕೊನೆ ಹಂತದಲ್ಲಿ ಎದುರಾಳಿಗೆ ಗೋಲು ಬಿಟ್ಟುಕೊಟ್ಟ ಕಾರಣ ಪಂದ್ಯ 1-1ರಿಂದ ಡ್ರಾ ಗೊಂಡಿತ್ತು. ಈ ಮೊದಲು ಭಾರತ ಜಪಾನ್‌ ಕೈಯಲ್ಲಿ 2-5 ಗೋಲುಗಳಿಂದ ಸೋತಿತ್ತು. ತಂಡದ ಕಳಪೆ ನಿರ್ವಹಣೆಗೆ ಯುವ ಆಟಗಾರರ ಅನನುಭವವೇ ಪ್ರಮುಖ ಕಾರಣ ವಾಗಿದೆ. ಕಳೆದ ಜೂನಿಯರ್‌ ವಿಶ್ವಕಪ್‌ನಲ್ಲಿ ಆಡಿದ ಹಲವು ಆಟಗಾರರು ಈ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

16 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

41 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago